ಜನಪ್ರಿಯ ಸಾಹಿತ್ಯಗಿಂತ ಜನಮನ ಸೇರುವ ಸಾಹಿತ್ಯ ರಚನೆಯಾಗಲಿ

KannadaprabhaNewsNetwork |  
Published : Jun 19, 2025, 11:48 PM IST
ಎಚ್‌15.6-ಡಿಎನ್‌ಡಿ1: ಹಳ್ಳಿಯ ಹೊಲ್ದಾಗ  ಕೃತಿ ಅವಲೋನಾ ಕಾರ್ಯಕ್ರಮ. | Kannada Prabha

ಸಾರಾಂಶ

ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಎನ್ನುವುದು ಮನರಂಜನೆ ದೃಷ್ಟಿಯಿಂದ ರಚನೆ ಆಗುತ್ತಿರುವುದು ಖೇದಕರ ಸಂಗತಿಯಾಗಿದೆ.

ದಾಂಡೇಲಿ: ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಎನ್ನುವುದು ಮನರಂಜನೆ ದೃಷ್ಟಿಯಿಂದ ರಚನೆ ಆಗುತ್ತಿರುವುದು ಖೇದಕರ ಸಂಗತಿಯಾಗಿದೆ. ಕನ್ನಡದ ಇತಿಹಾಸ ಗೊತ್ತಿಲ್ಲದೆ ಕನ್ನಡದ ಬಗ್ಗೆ ಕೀಳಾಗಿ ಮಾತಾಡಿದರೆ ಕನ್ನಡ ಮೌಲ್ಯ ಕಡಿಮೆ ಆಗುವುದಿಲ್ಲ ಎಂದು ನಗರದ ಜನತಾ ವಿದ್ಯಾಲಯದ ಪ್ರಾಚಾರ್ಯ ಅಮೃತ ರಾಮರಥ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಳೆಯ ನಗರಸಭೆಯ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ಭೀಮಾಶಂಕರ ಅಜನಾಳ ಅವರ ಹಳ್ಳಿಯ ಹೊಲ್ದಾಗ ಕೃತಿ ಅವಲೋಕಿಸಿ ಮಾತನಾಡಿದರು. ಉತ್ತರ ಕನ್ನಡದ ಕವಿಗಳು ಈ ಚುಟುಕು ಸಾಹಿತ್ಯಕ್ಕೆ ಬಹು ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ಭವಿಷ್ಯದ ಕನಸುಗಳನ್ನು ಬಿತ್ತುವ ಕೆಲಸವನ್ನು ಇಲ್ಲಿನ ಕವನಗಳು ಮಾಡಿವೆ. ಕಪ್ಪು ಮಣ್ಣಿನ ಘಮಲಿನೊಂದಿಗೆ ಬೆವರು ಮೆತ್ತಿಕೊಂಡಿವೆ. ಸಮಾಜದ ಓರೆ-ಕೋರೆಗಳನ್ನು ತಿದ್ದುವ ಇಲ್ಲಿನ ಚುಟುಕು ಪರಿಣಾಮಕಾರಿಯಾಗಿವೆ. ಮನಸಿನಲ್ಲಿ ಹುಟ್ಟಿದ ಅನುಭವದಿಂದ ಹೊರಬಂದು ಗೇಯತೆ ಹೊಂದಿರುವ ಈ ಚುಟುಕುಗಳು ಓದುಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿವೆ ಎಂದರು.

ಜಿಲ್ಲಾ ಕೋಶಾಧ್ಯಕ್ಷ ಮುರ್ತುಜಾ ಹುಸೇನ್ ಆನೆ ಹೊಸೂರ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಸಾಹಿತ್ಯದ ಕಾರ್ಯಕ್ರಮಕ್ಕೆ ಅನುದಾನದ ಕೊರತೆಯಿದ್ದರೂ ಸಹೃದಯಿಗಳ ಸಹಾಯದಿಂದ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ತಾಲೂಕು ಸಾಹಿತ್ಯ ಪರಿಷತ್ತಿನ ಕಾರ್ಯವೈಖರಿ ಹಾಗೂ ಕಾರ್ಯಚಟುವಟಿಕೆ ಬಗ್ಗೆ ವಿವರಿಸಿ, ಹಳ್ಳಿಯ ಹೊಲ್ದಾಗ ಕೃತಿಯ ಚುಟುಕುಗಳನ್ನು ವಾಚಿಸಿದರು.

ತಾಲೂಕು ಘಟಕದ ಅಧ್ಯಕ್ಷ ನಾರಾಯಣ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ವರ್ಷ ಸಾಹಿತ್ಯ ಪರಿಷತ್ತಿನಿಂದ ನಡೆಯಲಿರುವ ಕಾರ್ಯಕ್ರಮ ಬಗ್ಗೆ ತಿಳಿಸಿದರು.

ಅಜೀವ ಸದಸ್ಯ ಸುಭಾಷ ನಾಯ್ಕ, ನಗರಸಭೆ ಮಾಜಿ ಅಧ್ಯಕ್ಷ ಗೋವಿಂದ ಮೇಲಗೇರಿ ಇದ್ದರು. ಕಸಾಪ ಸದಸ್ಯ ಪ್ರವೀಣ ನಾಯಕ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಉಜ್ವಲ ಸದಲಗಿ ಪ್ರಾರ್ಥಿಸಿದರು. ಶಿಕ್ಷಕಿ ಆಶಾ ದೇಶಭಂಡಾರಿ ಅತಿಥಿಗಳನ್ನು ಪರಿಚಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ