ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಹೊರವಲಯದ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಯುವ ಮುಖಂಡ ಯುವರಾಜ್ ನರೇಂದ್ರಸ್ವಾಮಿ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವೇಳೆ ಮಾತನಾಡಿದ ಅವರು, ಶಾಸಕರು ಕ್ಷೇತ್ರದ ಅಭಿವೃದ್ಧಿಗಾಗಿ ದೂರದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವುದು ಅವರ ಕಾರ್ಯ ದಕ್ಷತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಶ್ಲಾಘಿಸಿದರು.
ಮೂರು ಭಾರಿ ಶಾಸಕರಾಗಿರುವ ಪಿ.ಎಂ.ನರೇಂದ್ರಸ್ವಾಮಿ ಅವರು ಒಮ್ಮೆ ಸಚಿವರಾಗಿ, ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಅನುಭವ ಹಾಗೂ ಕ್ರಿಯಾಶೀಲತೆ ಹೊಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಸರ್ಕಾರದಲ್ಲಿ ಮಂತ್ರಿ ಸ್ಥಾನ ಸಿಗಬೇಕೆಂಬುವುದು ಮಳವಳ್ಳಿ ಜನತೆಯ ಆಶಯವಾಗಿದೆ ಎಂದರು.ತಾಪಂ ಉಪಾಧ್ಯಕ್ಷ ಸಿ.ಮಾರ್ಕಾಲು ಮಾಧು ಮಾತನಾಡಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿ ಇಟ್ಟಿದ್ದಾರೆ. ಎಲ್ಲಾ ಹೋಬಳಿಗಳ ನೀರಿನ ಸಮಸ್ಯೆ ಬಗೆಹರಿಸಿದ್ದಾರೆ. ಸರ್ಕಾರಿ ಶಾಲೆಗಳಿಗೆ ಮಲ್ಟಿಮೀಡಿಯಾ ಸ್ಥಾಪಿಸಿ ಖಾಸಗಿ ಶಾಲೆಗಳಿಗೆ ಪೈಪೊಟಿ ನೀಡುವ ನಿಟ್ಟಿನಿಲ್ಲಿ ವಿಶೇಷ ಕಲಿಕಾ ಸಾಮಗ್ರಿಗಳನ್ನು ಕಲ್ಪಿಸಿದ್ದಾರೆ ಎಂದರು.
ನಂತರ ಶಾಸಕ ಹುಟ್ಟುಹಬ್ಬದ ಅಂಗವಾಗಿ ತಾಲೂಕು ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಪಟ್ಟಣದ ಅನಂತ್ರಾಂ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರಿಂದ ಮಜ್ಜಿಗೆ ಪಾನಕ ವಿತರಿಸಲಾಯಿತು.
ನರೇಂದ್ರಸ್ವಾಮಿ ಅವರಿಗೆ ಮಂತ್ರಿಯಾಗುವ ಅವಕಾಶ ಸಿಗಲಿ: ಶುಭದಾಯಿನಿ
ನಗರದ ಸ್ವರ್ಣಸಂದ್ರದ ಪ್ರೇರಣ ವಿಶೇಷ ಚೇತನರ ಟ್ರಸ್ಟ್ನಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅಂಧ ಮಕ್ಕಳಿಗೆ ಬೆಳಗಿನ ಉಪಾಹಾರ ಏರ್ಪಡಿಸಿ ಹಾಗೂ ಕೇಕ್ ಕತ್ತರಿಸುವ ಮೂಲಕ ಶಾಸಕ ನರೇಂದ್ರಸ್ವಾಮಿ ಹುಟ್ಟುಹಬ್ಬ ಆಚರಿಸಿ ಮಾತನಾಡಿದರು.ನರೇಂದ್ರಸ್ವಾಮಿ ಅವರು ಮತ್ತೊಮ್ಮೆ ಮಂತ್ರಿಯಾಗುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿ. ದೇವರು ಅವರ ಕುಟುಂಬಕ್ಕೆ ಆಶೀರ್ವದಿಸುವ ಮೂಲಕ ಹೆಚ್ಚಿನ ಶಕ್ತಿ ನೀಡಲಿ ಎಂದು ಶುಭ ಹಾರೈಸಿದರು.