೧೦ ವರ್ಷ ಉತ್ತಮ ಆಡಳಿತ ನೀಡಿದ ಮೋದಿ ಮತ್ತೆ ಪ್ರಧಾನಿಯಾಗಲಿ: ಅಣ್ಣಾಮಲೈ

KannadaprabhaNewsNetwork |  
Published : Apr 25, 2024, 01:05 AM IST
ಭದ್ರಾವತಿ ಕನಕಮಂಟಪ ಮೈದಾನದಲ್ಲಿ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಉದ್ಘಾಟಿಸಿದರು. | Kannada Prabha

ಸಾರಾಂಶ

ಭದ್ರಾವತಿಯಲ್ಲಿ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭಾಗವಹಿಸಿ, ಬಿಜೆಪಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಹಿಂದೆ ಕೌನ್ ಬನೇಗಾ ಕರೋಡ್ ಪತಿ ಅನ್ನುತ್ತಿದ್ದಂತೆ ಇಂದು ಕೌನ್ ಬನೇಗಾ ಪ್ರಧಾನಿ ಎನ್ನಲಾಗುತ್ತದೆ. ಆದರೆ ಜನರು ೧೦ ವರ್ಷ ಉತ್ತಮ ಆಡಳಿತ ನೀಡಿದ ಮೋದಿಯವರಿಗೆ ಮತ್ತೆ ೫ ವರ್ಷ ಆಡಳಿತ ನೀಡಲು ಬಯಸಿದ್ದಾರೆ ಎಂದು ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು.ಅವರು ಬುಧವಾರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಆಯೋಜಿಸ ಲಾಗಿದ್ದ ಬೃಹತ್ ಸಾರ್ವಜನಿಕ ಸಭೆ ಉದ್ಘಾಟಿಸಿ ಮಾತನಾಡಿದರು.ರಾಹುಲ್ ಗಾಂಧಿ ದೇಶದ ಪ್ರಧಾನಿ ಆಗಬೇಕೆಂದು ೨೦ ವರ್ಷದಿಂದ ಕನಸು ಕಾಣುತ್ತಿದ್ದಾರೆ. ಸ್ಟಾಲಿನ್ ಸೇರಿದಂತೆ ಹಲವು ನಾಯಕರು ಪ್ರಧಾನಿ ಆಗಬೇಕೆಂದು ಆಸೆಪಡುತ್ತಿದ್ದಾರೆ. ಒಂದು ಕುರಿಗೂ ತನ್ನ ಮಾಲೀಕ ಯಾರು ಎಂಬುದು ತಿಳಿಯುತ್ತದೆ. ಇನ್ನೂ ಜನತೆಗೆ ನಮ್ಮ ಮಾಲೀಕ ಯಾರಾಗಬೇಕು ಎಂಬುದು ತಿಳಿಯುವುದಿಲ್ಲವೆ. ಪ್ರಧಾನಿ ಮೋದಿ ಇದುವರೆಗೂ ಮಾಡಿರುವ ಕೆಲಸಗಳಿಗೆ ಗೌರವ ಸಲ್ಲಿಸಲು ಇದು ಸದಾವಕಾಶವಾಗಿದ್ದು, ಈ ಬಾರಿಯೂ ಅಧಿಕಾರ ನೀಡುವುದು ಉತ್ತಮ ಎಂದರು. ಮಾಜಿ ಪ್ರಧಾನಿ ದೇವೇಗೌಡರು ದಿನಕ್ಕೆ ಐದು ಸಭೆಗಳನ್ನು ನಡೆಸುತ್ತಾರೆ. ಈ ವಯಸ್ಸಿನಲ್ಲೂ ಅವರ ಈ ಪ್ರಯತ್ನ ಉತ್ತಮ ಪ್ರಧಾನಿಗೆ ಆಡಳಿತ ನೀಡಬೇಕೆಂ ಬುದು. ಓರ್ವ ಪ್ರಧಾನಿಗೆ ಮತ್ತೋರ್ವ ಪ್ರಧಾನಿಯ ಶ್ರಮ ತಿಳಿಯಲು ಸಾಧ್ಯ. ಮೋದಿಯವರ ಗೆಲುವಿಗೆ ಒಂದೊಂದು ಮತವೂ ಮುಖ್ಯವಾಗಿದೆ ಎಂದರು.

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮಾತನಾಡಿ, ಮೋದಿಯವರು ಕರೋನಾದಂಥ ಸಂಕಷ್ಟ ಕಾಲದಲ್ಲೂ ೨೦೦ ಕೋಟಿ ವ್ಯಾಕ್ಸಿನ್ ನೀಡಿ ದೇಶಕಟ್ಟುವ ಪ್ರಯತ್ನ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ, ಉದ್ಯೋಗ ಸೃಷ್ಟಿಗೆ ಬಹಳಷ್ಟು ಪ್ರಯತ್ನ ಮಾಡಿದ್ದು, ಎಂಪಿಎಂಗೆ ಕೊನೆ ಮೊಳೆ ಹೊಡೆದಿದ್ದು ನಾವಲ್ಲ, ಸಿದ್ದರಾಮಯ್ಯ ಸರ್ಕಾರ ಎಂದು ಆರೋಪಿಸಿದರು.ಸಭೆಯಲ್ಲಿ ಬಿಜೆಪಿ ಪ್ರಮುಖರಾದ ಎಂ.ಬಿ ಭಾನುಪ್ರಕಾಶ್, ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್, ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಎಸ್. ದತ್ತಾತ್ರಿ, ಮಂಗೋಟೆ ರುದ್ರೇಶ್, ಜಿ. ಆನಂದ ಕುಮಾರ್, ರಾಮಲಿಂಗಯ್ಯ, ಆರ್.ಎಸ್ ಶೋಭ, ವಿ. ಕದಿರೇಶ್, ಕೂಡ್ಲಿಗೆರೆ ಹಾಲೇಶ್, ಅನುಪಮ ಚನ್ನೇಶ್, ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ, ಆರ್. ಕರುಣಾಮೂರ್ತಿ, ಎಂ.ಎ ಅಜಿತ್, ಮಧುಸೂಧನ್, ವಿಜಯಮ್ಮ, ಉದಯ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಆಶಾಪುಟ್ಟಸ್ವಾಮಿ ಸಂಗಡಿಗರು ಪ್ರಾರ್ಥಿಸಿದರು. ಧರ್ಮಪ್ರಸಾದ್ ಸ್ವಾಗತಿಸಿದರು. ಮಂಜುನಾಥ್ ಕದಿರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಚೈತ್ರ ಸಜ್ಜನ್ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ