ಪತ್ರಿಕೆಗಳು ಸಮಾಜದ ಡೊಂಕುಗಳ ತಿದ್ದುವ ಕೆಲಸ ಮಾಡಲಿ: ಶಾಸಕ ಸಿ.ಸಿ. ಪಾಟೀಲ

KannadaprabhaNewsNetwork |  
Published : Feb 12, 2026, 03:00 AM IST
ನರಗುಂದ ತಾಲೂಕು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಶಾಸಕ ಸಿ.ಸಿ. ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಪತ್ರಿಕೆಗಳು ದ್ವೇಷವನ್ನು ಇಟ್ಟುಕೊಂಡು ಕಾರ್ಯ ಮಾಡದೇ ಸಮಾಜ ಸುಧಾರಣೆ ವಿಷಯಗಳು ಸಾಕಷ್ಟಿವೆ. ಆ ದಿಕ್ಕಿನಲ್ಲಿ ಪತ್ರಿಕೆಗಳು ಹೆಜ್ಜೆ ಇಡಬೇಕು.

ನರಗುಂದ: ಬರೀ ರಾಜಕಾರಣಿಗಳ ಟೀಕಿಸುವ ಕೆಲಸ ಆಗದೇ, ಸಮಾಜದ ಅಂಕುಡೊಂಕುಗಳ ತಿದ್ದುವ ಕೆಲಸ ಪತ್ರಿಕೆಗಳಿಂದ ಆಗಬೇಕಾಗಿದೆ. ಇತ್ತೀಚೆಗೆ ಯೂಟ್ಯೂಬರ್ ಹಾವಳಿ ಹೆಚ್ಚಾಗಿದ್ದರಿಂದ ಸಮಾಜದ ವ್ಯವಸ್ಥೆ ಕೆಡುತ್ತಿದೆ. ಇದು ಸರಿಯಾಗಬೇಕಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ತಿಳಿಸಿದರು.

ಮಂಗಳವಾರ ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ 2026- 28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಿಕೆಗಳು ದ್ವೇಷವನ್ನು ಇಟ್ಟುಕೊಂಡು ಕಾರ್ಯ ಮಾಡದೇ ಸಮಾಜ ಸುಧಾರಣೆ ವಿಷಯಗಳು ಸಾಕಷ್ಟಿವೆ. ಆ ದಿಕ್ಕಿನಲ್ಲಿ ಪತ್ರಿಕೆಗಳು ಹೆಜ್ಜೆ ಇಡಬೇಕು. ಬರೀ ಟೀಕೆಗಳನ್ನೇ ಮಾಡುತ್ತಾ ಹೋದರೆ ಒಳ್ಳೆಯದನ್ನು ಎಲ್ಲಿ ಹುಡುಕುವುದು? ಸಮಾಜದಲ್ಲಿ ಮಕ್ಕಳ ಪಾತ್ರ ಏನು ಎಂಬುದನ್ನು ಪತ್ರಿಕೆಗಳ ಮುಖಾಂತರ ಪ್ರಸ್ತುತಪಡಿಸಬೇಕಾಗಿದೆ ಎಂದರು.ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರು ಕಳೆದ 50 ವರ್ಷದಿಂದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿ ಮಾಡಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಈ ಯೋಜನೆ ಜಾರಿ ಮಾಡಿಸಿ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆಂದು ಘೋಷಿಸಿದರು.

ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ನಾಡಿನ ರೈತರು ಕಳೆದ 40 ವರ್ಷದಿಂದ ಕುಡಿಯುವ ನೀರಿನ ಯೋಜನೆಯಾದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿ ಮಾಡಬೇಕೆಂದು ಸುದೀರ್ಘ ಹೋರಾಟ ಮಾಡುತ್ತಿದ್ದಾರೆ. ಮೇಲಾಗಿ ಈ ಹೋರಾಟದಲ್ಲಿ ಹಲವಾರು ರೈತರು ಜೀವ ಕಳೆದುಕೊಂಡಿದ್ದಾರೆ. ಈ ರೈತರಿಗೆ, ಹೋರಾಟಕ್ಕೆ ಕೀರ್ತಿ ಬರಬೇಕೆಂದರೆ ಯೋಜನೆ ಜಾರಿಯಾದರೆ ಮಾತ್ರ ಗೌರವ ಬರುತ್ತದೆ ಎಂದರು.

ವರದಶ್ರೀ ಫೌಂಡೇಶನ್ ಅಧ್ಯಕ್ಷ ಮಲ್ಲಿಕಾರ್ಜುನ ರಡ್ಡೇರ ಮಾತನಾಡಿದರು. ವೇದಿಕೆಯಲ್ಲಿ 2025- 28ನೇ ಸಾಲಿಗೆ ನೂತನ ಪದಾಧಿಕಾರಿಗಳಾಗಿ ಆಯ್ಕೆಗೊಂಡ ತಾಲೂಕಾಧ್ಯಕ್ಷ ಸಂಗನಗೌಡ ಖಾನಪ್ಪಗೌಡ್ರ, ಉಪಾಧ್ಯಕ್ಷ ಪ್ರಭು ಗುಡಾರದ, ಪ. ಕಾರ್ಯದರ್ಶಿ ರಾಜು ಹೊಸಮನಿ, ಕಾರ್ಯದರ್ಶಿ ಉಮೇಶ ಬೋಳಶೆಟ್ಟಿ, ಖಜಾಂಚಿ ಎಸ್.ಎಸ್. ಮಣ್ಣೂರಮಠ ಹಾಗೂ ಕಾರ್ಯಕಾರಿಣಿ ಸದಸ್ಯರಿಗೆ ಕಾನಿಪ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಅವರು ಪ್ರತಿಜ್ಞಾವಿಧಿ ಭೋದಿಸಿದರು.ನಂತರ ತಾಲೂಕಿನ ಪತ್ರಿಕಾ ವಿತರಿಕರನ್ನು ಸನ್ಮಾನಿಸಲಾಯಿತು ಮತ್ತು 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಮತ್ತು ದನಕರುಗಳಿಗೆ ಉಚಿತವಾಗಿ ಆರೋಗ್ಯ ಚಿಕಿತ್ಸೆ ನೀಡುತ್ತಿರುವ ಚಿಕ್ಕನರಗುಂದ ಗ್ರಾಮದ ಬಾಚಿ ರೈತನನ್ನು ಮತ್ತು ದೆಹಲಿಯಲ್ಲಿ ಗಣರಾಜ್ಯೋತ್ಸವದ ಪರೇಡನಲ್ಲಿ ಭಾಗವಹಿಸಿದ ಎನ್‌ಸಿಸಿ ಕ್ಯಾಡೆಟ್‌ಗಳನ್ನು ಸನ್ಮಾಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಗೃಹ ಗುಡ್ಡದ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯ ಶ್ರೀಗಳು, ಪತ್ರೀವನ ಮಠದ ಗುರು ಸಿದ್ದವೀರ ಶಿವಾಚಾಯ ಶ್ರೀಗಳು, ವಿರಕ್ತಮಠದ ಶಿವಕುಮಾರ ಶ್ರೀಗಳು, ಭೈರನಹಟ್ಟಿಯ ಶಾಂತಲಿಂಗ ಶ್ರೀಗಳು, ಶಿರೋಳ ಯಚ್ಚರೇಶ್ವರ ಗವಿಮಠದ ಅಭಿನವ ಯಚ್ಚರ ಶ್ರೀಗಳು, ಕೊಣ್ಣೂರ ವಿರಕ್ತಮಠದ ಡಾ. ಚನ್ನವೀರ ಶ್ರೀಗಳು, ಬ್ರ.ಕು. ಪ್ರಭಕ್ಕ, ನಿಸರ್ಗ ತಜ್ಞೆ ಡಾ. ಹನುಮಂತ ಮಳಲಿ, ಕಾನಿಪ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಅರುಣಕುಮಾರ ಹಿರೇಮಠ, ರೈತ ಮುಖಂಡ ಶಂಕರ ಅಂಬಲಿ, ಪತ್ರಕರ್ತರ ಸಂಘದ ಸದಸ್ಯರು ಸೇರಿದಂತೆ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂ ಧರ್ಮ ಮನಸ್ಸು ಜೋಡಿಸುವ ಸೇತುವೆ
ಸರ್ಕಾರಿ ಕನ್ನಡ ಶಾಲೆಗಳ ಬಾಗಿಲು ಮುಚ್ಚುತ್ತಿರುವುದು ವಿಷಾದನೀಯ: ಬಣ್ಣದಮಠದ ಶ್ರೀ ಶಿವಲಿಂಗ ಸ್ವಾಮೀಜಿ