ಕನ್ನಡಪ್ರಭ ವಾರ್ತೆ ಶಿಕಾರಿಪುರ
ಶುಕ್ರವಾರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ‘ಮೈ ಸೇವಾ ಟ್ರಸ್ಟ್’ ವತಿಯಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಿ ಅವರು ಮಾತನಾಡಿದರು.
ಮೈತ್ರಾದೇವಿ ಯಡಿಯೂರಪ್ಪ ನವರ ಹೆಸರಿನಲ್ಲಿ ಮೈ ಸೇವಾ ಸಂಸ್ಥೆ ಮೂಲಕ ಸಾಮಾಜಿಕ ಕಾರ್ಯ ಆಯೋಜಿಸುತ್ತಿರುವುದು ನಮ್ಮ ಹೆಮ್ಮೆ ಎಂದ ಅವರು ನಮಗೆ ಗಾಂಧೀಜಿ, ಅಂಬೇಡ್ಕರ್, ಸಾವರ್ಕರ್, ಆಜಾದ್ ಚಂದ್ರಶೇಖರ್ ರೀತಿಯ ಹೋರಾಟಗಾರರು, ದೇಶಪ್ರೇಮಿಗಳು ಮಾದರಿಯಾಗಿರಬೇಕು ಎಂದರು.ತಾಲೂಕಿನಲ್ಲಿ ಅತೀ ಹೆಚ್ಚು ಸರ್ಕಾರಿ ಶಿಕ್ಷಣ ಸಂಸ್ಥೆಗಳು ವಸತಿ ಶಾಲೆಗಳಿದ್ದು ಅಂದಾಜು 7,500 ಮಕ್ಕಳಿಗೆ ವಸತಿ ಶಿಕ್ಷಣವನ್ನು ಸರ್ಕಾರದ ವತಿಯಿಂದ ನೀಡಲಾಗುತ್ತಿದೆ ಇದು ಯಡಿಯೂರಪ್ಪನವರ ಶಿಕ್ಷಣ ಪ್ರೇಮದ ಕಾಳಜಿಯ ಪ್ರತೀಕವಾಗಿದೆ ಎಂದರು.
ಜೀವನದಲ್ಲಿ ಏನೇ ಸಮಸ್ಯೆಗಳು ಬಂದರೂ ಹೆದರಿ ಓಡಿ ಹೋಗದೆ, ಅವುಗಳನ್ನು ಧೈರ್ಯವಾಗಿ ನಿಂತು ದಿಟ್ಟವಾಗಿ ಎದುರಿಸಿ ಎಂದು ಸಲಹೆ ನೀಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಪರೀತವಾಗಿದ್ದ ಬಸ್ಸುಗಳ ಸಮಸ್ಯೆ ಬಗ್ಗೆ ಸಚಿವರ ಜತೆ ಮಾತುಕತೆ ನಡೆಸಿ ಹಲವು ಭಾಗಗಳಿಗೆ ಬಸ್ ಸಂಚಾರ ಆರಂಭವಾಗಿದೆ. ಬಾಕಿ ಇರುವ ಪ್ರದೇಶಗಳಿಗೆ ಪುನಃ ಸಾರಿಗೆ ಸಚಿವರ ಜತೆ ಮಾತುಕತೆ ನಡೆಸಿ ಹೆಚ್ಚುವರಿ ಬಸ್ ಓಡಿಸಲು ಶೀಘ್ರ ವ್ಯವಸ್ಥೆ ಮಾಡಲಾಗುವುದು ಎಂದರು.
ವೇದಿಕೆಯಲ್ಲಿ ಶಾಸಕ ರಾಮಮೂರ್ತಿ,ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ, ಮೈ ಸೇವಾ ಟ್ರಸ್ಟಿನ ಕಾರ್ಯದರ್ಶಿ ಹಾಗೂ ಹಿರಿಯ ವಕೀಲ ಸಂದೀಪ್ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ರಫೀಕ್ ಖಾನ್, ಅಶೋಕ್ ನಾಯ್ಕ,ಸೋಮಶೇಖರ್,ಪಾಪಯ್ಯ,ಸಿದ್ದಲಿಂಗಪ್ಪ ,ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ್ ,ತಾ.ಬಿಜೆಪಿ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.