ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಿದ್ಧತೆ ಕುರಿತು ನಡೆದ ಸಾಹಿತ್ಯ ಪರಿಷತ್ತಿನ ಹೋಬಳಿ, ತಾಲೂಕು ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಸರ್ಕಾರ, ಜಿಲ್ಲಾಡಳಿತ, ಕೇಂದ್ರ ಮತ್ತು ಜಿಲ್ಲಾ ಸಾಹಿತ್ಯ ಪರಿಷತ್ತು ಪರಸ್ಪರ ಸಹಾಯ, ಸಹಕಾರ, ಸಂಯೋಗ, ಸಹಭಾಗಿತ್ವದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಜವಾಬ್ದಾರಿಯಿದೆ. ಈ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿಗೆ ಹೋಬಳಿ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ಅಡಿಪಾಯವಿದ್ದಂತೆ. ನಿಮ್ಮ ಶ್ರಮ ಸಮ್ಮೇಳನ ಯಶಸ್ಸಿಗೆ ಕಾರಣವಾಗುತ್ತದೆ. ನೀವು ಕನ್ನಡ ಸೇವೆಗಾಗಿ ತಾಯಿ ಭುವನೇಶ್ವರಿ, ಕನ್ನಡದ ಮೇಲಿನ ಅಭಿಮಾನದಿಂದ ಬಂದಿದ್ದೀರಿ. ನಿಮಗೆ ಕರ್ತವ್ಯ ಭಾರದ ಹಾರ ಹಾಕಿದ್ದೇವೆ. ಅದು ಗೌರವ ಮನ್ನಣೆಯ ಸಂಕೇತ. ಗೌರವದ ಹಿಂದೆ ಜವಾಬ್ದಾರಿಯೂ ಇದೆ ಎಂಬುದನ್ನು ಅರಿಯಬೇಕು ಎಂದರು.ಮಂಡ್ಯ ಜಿಲ್ಲೆಗೆ ಸಮ್ಮೇಳನ ತರುವಲ್ಲಿ ದಿ.ಸಿ.ಕೆ.ರವಿಕುಮಾರ್ ಅವರ ಉತ್ಸಾಹ ಚಟುವಟಿಕೆ ಕಾರ್ಯತತ್ಪರತೆ ಇದೆ. ಕ್ರಿಯಾಶೀಲ ವ್ಯಕ್ತಿಯಾದ ಅವರ ಸ್ಮರಣೆ ಮಾಡುವುದರ ಜೊತೆಗೆ ಅವರ ಕಾರ್ಯ ಚಟುವಟಿಕೆ ನೆನೆದು ಕೆಲಸ ಮಾಡೋಣ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಒಂದು ಸ್ವಾಯತ್ತ ಸಂಸ್ಥೆಯಾದರೂ ಸಹ ಸರ್ಕಾರದ ಬೆಂಬಲ ಬೇಕು. ಸರ್ಕಾರ ಯಾವುದೇ ರಾಜಕೀಯ ಹಿನ್ನೆಲೆಯಲ್ಲಿ ರಚಿತವಾಗಿದ್ದರೂ ಅದು ಕನ್ನಡ ಸರ್ಕಾರದಲ್ಲಿರುವ ಸಚಿವರು, ಶಾಸಕರು ಕನ್ನಡಿಗರು ಅವರ ಬೆಂಬಲ ನಮಗೆ ಇದ್ದೇ ಇರುತ್ತದೆ. ನಾವು ಪ್ರಬುದ್ಧತೆಯಿಂದ ಕೆಲಸ ಮಾಡಬೇಕು ಎಂದರು.
ಪ್ರತಿ ಮನೆ ಮೇಲೆ ಕನ್ನಡ ಧ್ವಜ ಹಾರಿಸಿ:
ಮುಂದಿನ 5 ತಿಂಗಳ ಕಾಲ ಆ ನಿಟ್ಟಿನಲ್ಲಿ ನಾವೆಲ್ಲರೂ ಒಂದೇ ಕುಟುಂಬದ ರೀತಿ ಪ್ರೀತಿ-ವಿಶ್ವಾಸ ಉತ್ತಮ ಸಂಬಂಧ ಇಟ್ಟುಕೊಂಡು ಕೆಲಸ ಮಾಡೋಣ. ಎಲ್ಲ ಪದಾಧಿಕಾರಿಗಳು ಇದನ್ನು ಸವಾಲಾಗಿ ಸ್ವೀಕರಿಸಿ ಹೆಚ್ಚು ಜನರು ಸಮ್ಮೇಳನಕ್ಕೆ ಆಗಮಿಸುವಂತೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಹುಸ್ಕೂರು ಕೃಷ್ಣೇಗೌಡ ಮಾತನಾಡಿದರು. ಸಭೆಯಲ್ಲಿ ಕೇಂದ್ರ ಸಾಹಿತ್ಯ ಪರಿಷತ್ ಕಾರ್ಯದರ್ಶಿಗಳಾದ ಪದ್ಮಿನಿ ನಾಗರಾಜ್, ನೇ.ಭ.ರಾಮಲಿಂಗಶೆಟ್ಟಿ, ಕೋಶಾಧ್ಯಕ್ಷ ಪಟೇಲ್ ಪಾಂಡು, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಹರ್ಷ ವಿ ಪಣ್ಣೆದೊಡ್ಡಿ, ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ ಸೇರಿದಂತೆ ಜಿಲ್ಲೆ ತಾಲೂಕು ಮತ್ತು ಹೋಬಳಿ ಘಟಕದ ಪದಾಧಿಕಾರಿಗಳು ಹಾಜರಿದ್ದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ತಾಲೂಕಿನ ಚಾಮಲಾಪುರ ಗ್ರಾಮದ ಸಿ.ಆರ್.ಚಂದ್ರಶೇಖರ್ ಅವರು ಜು.29ರಂದು ಅಧಿಕಾರ ಸ್ವೀಕರಿಸಲಿದ್ದಾರೆ.ಪಟ್ಟಣದ ಶ್ರೀ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಸಂಜೆ 5.30ಕ್ಕೆ ನಡೆಯಲಿರುವ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವನ್ನು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಉದ್ಘಾಟಿಸುವರು. ತಹಸೀಲ್ದಾರ್ ನಯೀಂಉನ್ನೀಸಾ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್ ಅತಿಥಿಗಳಾಗಿ ಪಾಲ್ಗೊಳ್ಳುವರು. ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಖರಡ್ಯ ಬಸವೇಗೌಡ ಅಧಿಕಾರ ಹಸ್ತಾಂತರಿಸುವರು.