ಸರ್ಕಾರಿ ಶಾಲೆ ಉಳಿಸಲು ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡೋಣ: ಬಿ.ಪಿ.ದಯಾನಂದ ಕರೆ

KannadaprabhaNewsNetwork |  
Published : Jun 23, 2024, 02:05 AM IST
ನರಸಿಂಹರಾಜಪುರ ತಾಲೂಕಿನ ಬೆಮ್ಮನೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಿಸುವ ಸಮಾರಂಭದಲ್ಲಿ ನಿವೃತ್ತ ಶಿಕ್ಷಕ ಪುಟ್ಟಸ್ವಾಮಿ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ, ಎಸ್‌.ಡಿ.ಎಂ.ಸಿ.ಅಧ್ಯಕ್ಷ ಕೊನೋಡಿ ಗಣೇಶ್ ಮತ್ತಿತರ ದಾನಿಗಳು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಎಲ್ಲಾ ಪೋಷಕರು, ಗ್ರಾಮಸ್ಥರು ಒಟ್ಟಾಗಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ಕರೆ ನೀಡಿದರು.

- ಬೆಮ್ಮನೆಯಲ್ಲಿ ಸೀತೂರು ಗ್ರಾಪಂನ 8 ಸರ್ಕಾರಿ ಶಾಲೆ ಮಕ್ಕಳಿಗೆ ದಾನಿಗಳಿಂದ ಉಚಿತ ಕಲಿಕಾ ಸಾಮಗ್ರಿಗಳ ವಿತರಣೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಎಲ್ಲಾ ಪೋಷಕರು, ಗ್ರಾಮಸ್ಥರು ಒಟ್ಟಾಗಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ಕರೆ ನೀಡಿದರು.

ಶನಿವಾರ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಮ್ಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 8 ಸರ್ಕಾರಿ ಪ್ರಾಥಮಿಕ ಶಾಲೆಯ 150 ಮಕ್ಕಳಿಗೆ ದಾನಿಗಳು ನೀಡಿದ ಉಚಿತ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲದೆ ಮುಚ್ಚುವ ಹಂತಕ್ಕೆ ಬಂದಿದೆ. ಶಿಕ್ಷಣಕ್ಕಾಗಿ ಸರ್ಕಾರ ಕೋಟ್ಯಂತರ ರು. ಖರ್ಚು ಮಾಡುತ್ತಿದೆ. ಬಯಲು ಸೀಮೆಗಳಲ್ಲಿ ಅಲ್ಲಿನ ಗ್ರಾಮಸ್ಥರು ಬಹು ದೊಡ್ಡ ಹೋರಾಟ ಮಾಡಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆ ತಂದು ಶಾಲೆಗಳನ್ನು ಉಳಿಸಿ ಕೊಳ್ಳುತ್ತಿದ್ದಾರೆ. ಇದೇ ರೀತಿ ಮಲೆನಾಡು ಭಾಗದಲ್ಲೂ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಬೇಕು ಹಾಗೂ ಇತರ ಪೋಷಕರನ್ನು ಮನ ಒಲಿಸಬೇಕು ಎಂದರು.

ಈ ಭಾಗದ 8 ಸರ್ಕಾರಿ ಶಾಲೆ 150 ಮಕ್ಕಳಿಗೆ 16 ದಾನಿಗಳು ತಮ್ಮ ಕೈಲಾಸ ಸಹಾಯ ಮಾಡಿದ್ದಾರೆ. ಎಲ್ಲಾ ಮಕ್ಕಳಿಗೂ ಬ್ಯಾಗು ಹಾಗೂ ಇತರ ಕಲಿಕಾ ಸಾಮಗ್ರಿ ನೀಡಿದ್ದು ಪ್ರತಿ ಮಕ್ಕಳಿಗೆ 550 ರು. ಸಾಮಾಗ್ರಿ ನೀಡಲಾಗುತ್ತಿದೆ. ಇನ್ನರ್‌ ವೀಲ್‌ ಕ್ಲಬ್ ನವರು ಪ್ರತಿ ಮಕ್ಕಳಿಗೂ ಜಾಮಿಟ್ರಿ ಬಾಕ್ಸ್‌ ನೀಡಿದ್ದಾರೆ. ಅಂಗನವಾಡಿ ಮಕ್ಕಳಿಗೆ ದಾನಿಗಳು ಸಮವಸ್ತ್ರ ನೀಡಿದ್ದಾರೆ ಎಂದರು.

ಕೊನೋಡಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಬಿ.ಎಸ್‌.ಮಂಜುನಾಥ್ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಎಚ್‌.ಇ.ದಿವಾಕರ್‌ ಮಾತನಾಡಿದರು. ಬೆಮ್ಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಕೊನೋಡಿ ಗಣೇಶ್‌ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಇನ್ನರ್ ವೀಲ್‌ ಕ್ಲಬ್ ನ ನಿಯೋಜಿತ ಕಾರ್ಯದರ್ಶಿ ರಾಧಿಕ, ಸಿಆರ್‌ಪಿ. ಓಂಕಾರಪ್ಪ, ದಾನಿಗಳಾದ ರತ್ನಾಕರ್‌, ಬಿ.ಎಸ್‌.ಶ್ರೀನಿವಾಸ್, ಬೆಮ್ಮನೆ ಮೋಹನ್‌, ಅನಿಲ್ ಕುಮಾರ್‌, ಸುಬೋದ್‌, ಶಿವಮೊಗ್ಗದ ದೀಪಕ್, ಬಿ.ಟಿ.ರಘು, ಚಂದ್ರಶೇಖರ, ಕೃಷ್ಣಮೂರ್ತಿ, ಹೆಮ್ಮೂರು ಸದಾಶಿವ,ಶಾಲಾ ಮುಖ್ಯೋಪಾಧ್ಯಾಯ ರೇವಣಪ್ಪ ಇದ್ದರು.

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಪುಟ್ಟಸ್ವಾಮಿಯನ್ನು ಸನ್ಮಾನಿಸಲಾಯಿತು. ಸುಬೋದ್ ಸ್ವಾಗತಿಸಿದರು. ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!