ಮಕ್ಕಳ ಹಕ್ಕು ಸಂರಕ್ಷಣೆಗೆ ಕಟಿಬದ್ಧರಾಗೋಣ: ಡಾ.ಬಸವರಾಜ

KannadaprabhaNewsNetwork |  
Published : Nov 18, 2024, 12:00 AM IST
17ಎಚ್‌ಪಿಟಿ5- ಹೊಸಪೇಟೆಯಲ್ಲಿ ನಡೆದ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ, ಕಾನೂನು ಬದ್ಧ ದತ್ತು ಕುರಿತ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ ಮಾತನಾಡಿದರು. | Kannada Prabha

ಸಾರಾಂಶ

ಈಗ ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಎಲ್ಲಾ ದೇಶಗಳು ಮುಂದಾಗಿವೆ.

ಹೊಸಪೇಟೆ: ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವಿಜಯನಗರ, ಕಾನೂನು ಸೇವೆ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಹಾಗೂ ಸರ್ಕಾರೇತರ ಮಕ್ಕಳ ಪಾಲನಾ ಸಂಸ್ಥೆಗಳು, ಜಿಲ್ಲಾ ಮಕ್ಕಳ ಸಹಾಯವಾಣಿ ವಿಜಯನಗರ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ, ಕಾನೂನು ಬದ್ಧ ದತ್ತು ಕುರಿತ ಅರಿವು ಮೂಡಿಸುವ ಕಾರ್ಯಕ್ರಮ ನಗರದ ಆರೋಗ್ಯ ಇಲಾಖೆಯಲ್ಲಿ ಇತ್ತೀಚೆಗೆ ನಡೆಯಿತು.ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ ಉದ್ಘಾಟಿಸಿ ಮಾತನಾಡಿ, ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಬೇಕು. ದತ್ತು ಪಡೆಯುವುದು ಹಾಗೂ ನೀಡುವುದು ಈಗ ಕಾನೂನು ಬದ್ಧವಾಗಿದೆ. ಕಾನೂನು ಮೀರಿ ಯಾರೂ ನಡೆದುಕೊಳ್ಳಬಾರದು. ಎಲ್ಲರಿಗೂ ಕಾನೂನಿನ ಅರಿವು ಅತಿ ಮುಖ್ಯ ಎಂದರು.

ಜಿಲ್ಲಾ ಮಕ್ಕಳ ಆರೋಗ್ಯಾಧಿಕಾರಿ ಎಂ.ಪಿ. ದೊಡಮನಿ ಮಾತನಾಡಿ, ಈಗ ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಎಲ್ಲಾ ದೇಶಗಳು ಮುಂದಾಗಿವೆ. ಭಾರತದಲ್ಲೂ ಮಕ್ಕಳ ಹಕ್ಕುಗಳ ಬಗ್ಗೆ ಹಲವು ಕಾನೂನುಗಳನ್ನು ಜಾರಿ ಮಾಡಲಾಗಿದೆ. ಈ ಪೈಕಿ ಮಕ್ಕಳ ದತ್ತು ಪಡೆಯುವುದಕ್ಕಾಗಿ ಬಾಲ ನ್ಯಾಯ ಕಾಯ್ದೆಯನ್ನು ಕೂಡ ಜಾರಿ ಮಾಡಲಾಗಿದೆ. ಇದರ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅರಿವು ಮೂಡಿಸಲಾಗುತ್ತಿದೆ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಪ್ಪ, ಮಕ್ಕಳ ಹಕ್ಕುಗಳು ಹಾಗೂ ದತ್ತು ಪಡೆಯಲು ಇರುವ ಕಾನೂನಿನ ಕುರಿತು ವಿಷಯ ಮಂಡಿಸಿದರು. ಸರ್ಕಾರಿ ವಿಶೇಷ ದತ್ತುಸಂಸ್ಥೆಯ ಜಿಲ್ಲಾ ಸಂಯೋಜಕಿ ವಿದ್ಯಾಬಾಯಿ ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಷಣ್ಮುಖ, ಪಂಪಾಪತಿ, ಯಶೋಧಾ, ನೇತ್ರಾವತಿ, ಬಷೀರ, ಲಲಿತಾ ಮತ್ತಿತರರಿದ್ದರು.

ಹೊಸಪೇಟೆಯಲ್ಲಿ ನಡೆದ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ, ಕಾನೂನು ಬದ್ಧ ದತ್ತು ಕುರಿತ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ