ಕನ್ನಡಪ್ರಭ ವಾರ್ತೆ ಸಿದ್ದಾಪುರ
ನಮ್ಮಲ್ಲಿ ಯಾವುದೇ ಜಾತಿ ಮತ ಬೇಧವಿಲ್ಲದೆ ನಾವೆಲ್ಲರೂ ಒಂದೇ ಎಂಬ ಸಂದೇಶ ನೀಡುತ್ತಾ ಹಿಂದೂಗಳ ಸಂಗಮದೊಂದಿಗೆ ಜಾಗೃತ ಹಿಂದೂ ಸಮಾಜ ನಿರ್ಮಾಣವಾಗಬೇಕಿದೆ ಎಂದರು.ಕಾರ್ಯಕ್ರಮದ ಆಯೋಜನಾ ಸಮಿತಿ ಸಂಚಾಲಕ ವಿ.ಕೆ. ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ನೂರನೇ ವರ್ಷದ ಆಚರಣೆ ಅಂಗವಾಗಿ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಿದ್ದು, ಹಿಂದೂಗಳಲ್ಲಿ ಪರಸ್ಪರ ಭಾವೈಕ್ಯತೆ ಮೂಡಿಸಲು ಇಂತಹ ಕಾರ್ಯಕ್ರಮಗಳ ಆಯೋಜನೆ ಸಹಕಾರಿಯಾಗಲಿದೆ. ನಮ್ಮ ಸಂಸ್ಕೃತಿ ಬಗ್ಗೆ ನಮ್ಮ ಮಕ್ಕಳಿಗೆ ಅರಿವು ಮೂಡಿಸಿ
ನಮ್ಮ ಸಂಸ್ಕೃತಿ ಧರ್ಮವನ್ನು ಉಳಿಸಲು ನಾವೆಲ್ಲ ಕಟಿಬದ್ದರಾಗಬೇಕು ಎಂದರು.ಕಾರ್ಯಕ್ರಮದ ಭಾಗವಾಗಿ ನೆಲ್ಯಹುದಿಕೇರಿ ಕಾವೇರಿ ನದಿಯ ಸೇತುವೆಯಿಂದ ನೆಲ್ಯಹುದಿಕೇರಿ ಮುತ್ತಪ್ಪ ದೇವಾಲಯದವರೆಗೆ ಚೆಂಡೆ ವಾದ್ಯಗಳೊಂದಿಗೆ ಶೋಭಾಯಾತ್ರೆ ನಡಯಿತು. ಮಹಿಳೆಯರು ಮಕ್ಕಳು ಹೆಚ್ಚಾಗಿ ಶೋಭಾಯತ್ರೆಯಲ್ಲಿ ಭಾಗವಹಿಸಿದ್ದರು. ಪುಟಾಣಿ ಮಕ್ಕಳ ನೃತ್ಯವು ಶೋಭಾಯತ್ರೆಗೆ ಹೆಚ್ಚಿನ ಮೆರುಗು ನೀಡಿತು.ಕಾರ್ಯಕ್ರಮದ ಭಾಗವಾಗಿ ಆಗಮಿಸಿದ ಎಲ್ಲರಿಗೂ ಅನ್ನ ಸಂತರ್ಪಣೆ ನಡೆಯಿತು. ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ನೇತ್ರತ್ವದಲ್ಲಿ ಹೆಚ್ಚಿನ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.