ಕನ್ನಡ ರಾಜ್ಯೋತ್ಸವವನ್ನು ಕನ್ನಡನಾಡಿನ ಜನ್ಮದಿನವಾಗಿ ಆಚರಿಸೋಣ

KannadaprabhaNewsNetwork |  
Published : Nov 02, 2025, 02:30 AM IST
ಫೋಟೋ: 1 ಹೆಚ್‌ಎಸ್‌ಕೆ 1ಹೊಸಕೋಟೆ ತಾಲೂಕಿನ ಕಸಬಾ ಹೋಬಳಿಯ ದೊಡ್ಡಘಟ್ಟಿಗನಬ್ಬೆ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಗ್ರಾಪಂ ಅಧ್ಯಕ್ಷ ಪೂಜೇನ ಅಗ್ರಹಾರ ಸುರೇಶ್ ಧ್ವಜಾರೋಹಣ ನೆರವೇರಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ನವೆಂಬರ್‌ 1ರಂದು ನಾಡಿನ ಪ್ರಜೆಗಳೆಲ್ಲರೂ ಎಲ್ಲೇ ಇದ್ದರೂ ಕನ್ನಡ ನಾಡಿನ ಜನ್ಮ ದಿನವನ್ನು ಗೌರವಾಭಿಮಾನಗಳಿಂದ ಆಚರಣೆ ಮಾಡಬೇಕು ಎಂದು ಗ್ರಾಪಂ ಅಧ್ಯಕ್ಷ ಪೂಜೇನ ಅಗ್ರಹಾರ ಸುರೇಶ್ ತಿಳಿಸಿದರು.

ಹೊಸಕೋಟೆ: ನವೆಂಬರ್‌ 1ರಂದು ನಾಡಿನ ಪ್ರಜೆಗಳೆಲ್ಲರೂ ಎಲ್ಲೇ ಇದ್ದರೂ ಕನ್ನಡ ನಾಡಿನ ಜನ್ಮ ದಿನವನ್ನು ಗೌರವಾಭಿಮಾನಗಳಿಂದ ಆಚರಣೆ ಮಾಡಬೇಕು ಎಂದು ಗ್ರಾಪಂ ಅಧ್ಯಕ್ಷ ಪೂಜೇನ ಅಗ್ರಹಾರ ಸುರೇಶ್ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ದೊಡ್ಡಘಟ್ಟಿಗನಬ್ಬೆ ಗ್ರಾಪಂ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, 1956ರ ನವೆಂಬರ್ ೧ರಂದು ನಾಡಿನ ಎಲ್ಲಾ ಪ್ರದೇಶಗಳನ್ನು ಒಟ್ಟುಗೂಡಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. ನಂತರ 1973ರಲ್ಲಿ ಅದಕ್ಕೆ "ಕರ್ನಾಟಕ " ಎಂಬ ಹೆಸರು ನೀಡಲಾಯಿತು. ಕನ್ನಡ ರಾಜ್ಯೋತ್ಸವ ನಮ್ಮ ಭಾಷೆಯ ಗೌರವ, ಸಂಸ್ಕೃತಿ, ಐಕ್ಯತೆ ಹಾಗೂ ಆತ್ಮಸಮ್ಮಾನದ ಸಂಕೇತ. ಆದ್ದರಿಂದ ನೆರೆಯ ರಾಜ್ಯದವರಿಗೂ ಕೂಡ ಕನ್ನಡ ಭಾಷೆ ಕಲಿಸುವ ಮೂಲಕ ಕನ್ನಡವನ್ನು ಉಳಿಸಿ ಬೆಳೆಸಬೇಕು. ಇದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಎಂದರು.

ಪಿಡಿಒ ಸುಬ್ರಹ್ಮಣಿ ಮಾತನಾಡಿ, ಕನ್ನಡ ನಾಡು ನುಡಿಗಾಗಿ ಹಲ ಹೋರಾಟಗಾರರು, ಕನ್ನಡಾಭಿಮಾನಿಗಳು ಹೋರಾಟಗಳನ್ನು ಮಾಡಿದ ಫಲವೇ ಕರ್ನಾಟಕ ರಾಜ್ಯ ಉದಯವಾಗಲು ಕಾರಣ. ನವೆಂಬರ್ 1ಕ್ಕೆ ಮಾತ್ರ ರಾಜ್ಯೋತ್ಸವ ಆಚರಣೆ ಸೀಮಿತವಾಗದೆ ವರ್ಷಪೂರ್ತಿ ಆಚರಿಸಬೇಕು. ಅಲ್ಲದೆ ನಿತ್ಯ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಾಗಿ ಮಾಡಿದರೆ ಮಾತ್ರ ಭಾಷೆಯ ಉಳಿವು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಪಂಚಾಯತಿ ಉಪಾಧ್ಯಕ್ಷೆ ರೂಪ, ಸದಸ್ಯರಾದ ಎಸ್‌ಟಿಬಿ ಮುನಿರಾಜು, ಮೀನಮ್ಮ, ಮಮತ, ರಮೇಶ್, ನಿರ್ಮಲ, ಶೈಲಮ್ಮ, ಗಿರಿಜಾ, ನಾಗವೇಣಿ, ಕಾರ್ಯದರ್ಶಿ ಚೌಡರೆಡ್ಡಿ ಹಾಗು ಸಿಬ್ಬಂದಿ ಹಾಜರಿದ್ದರು.

ಫೋಟೋ: 1 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ದೊಡ್ಡಘಟ್ಟಿಗನಬ್ಬೆ ಗ್ರಾಪಂ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಗ್ರಾಪಂ ಅಧ್ಯಕ್ಷ ಪೂಜೇನ ಅಗ್ರಹಾರ ಸುರೇಶ್ ಧ್ವಜಾರೋಹಣ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ