ರಾಮಮಂದಿರ ಉದ್ಘಾಟನೆ ದಿನ ಸಂಭ್ರಮ ಮೇಳೈಸಲಿ: ಡಾ. ಎ ಮಹೇಶ್ ಶರ್ಮ

KannadaprabhaNewsNetwork |  
Published : Jan 09, 2024, 02:00 AM ISTUpdated : Jan 09, 2024, 05:21 PM IST
ಬಿಜೆಪಿ ಹಿರಿಯ ಮುಖಂಡ ಗಣಪಾಲ್ ಐನಾಥ ರೆಡ್ಡಿ ನಿವಾಸದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣ ದಿನವನ್ನು ರಾಮಭಕ್ತರು ಸಡಗರ ಸಂಭ್ರಮದಿಂದ ಆಚರಿಸುವಂತೆ ತಿಳಿಸಲಾಯಿತು. | Kannada Prabha

ಸಾರಾಂಶ

ಜ. 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಹಾಗೂ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಶ್ರದ್ಧಾಭಕ್ತಿಯಿಂದ ನಡೆಯುತ್ತಿದ್ದು, ಅಂದು ಎಲ್ಲ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಸಡಗರ, ಸಂಭ್ರಮದಿಂದ ಆಚರಿಸಬೇಕು ಎಂದು ಅಧ್ಯಾತ್ಮ ಮತ್ತು ಯೋಗಗುರು ಡಾ. ಎ. ಮಹೇಶ್ ಶರ್ಮ ತಿಳಿಸಿದರು.

ಬಳ್ಳಾರಿ: ಜ. 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಹಾಗೂ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಶ್ರದ್ಧಾಭಕ್ತಿಯಿಂದ ನಡೆಯುತ್ತಿದ್ದು, ಅಂದು ಎಲ್ಲ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಸಡಗರ, ಸಂಭ್ರಮದಿಂದ ಆಚರಿಸಬೇಕು ಎಂದು ಅಧ್ಯಾತ್ಮ ಮತ್ತು ಯೋಗಗುರು ಡಾ. ಎ. ಮಹೇಶ್ ಶರ್ಮ ತಿಳಿಸಿದರು.

ಬಿಜೆಪಿ ಹಿರಿಯ ಮುಖಂಡ ಗಣಪಾಲ ಐನಾಥ ರೆಡ್ಡಿ ಅವರ ನಿವಾಸದ ಅಂಗಳದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಕೋಟ್ಯಂತರ ಹಿಂದೂಗಳ ಆಶಯದಂತೆ ಅಯೋಧ್ಯೆಯಲ್ಲಿ ಅತ್ಯಂತ ಭವ್ಯವಾದ ರಾಮಮಂದಿರ ನಿರ್ಮಾಣಗೊಂಡಿದ್ದು, ಜ. 22ರಂದು ಲೋಕಾರ್ಪಣೆಗೊಳ್ಳುತ್ತಿದೆ. ಇದು ಪ್ರತಿಯೊಬ್ಬರ ಪಾಲಿಗೆ ಅತ್ಯಂತ ಸುದೈವದ ದಿನವಾಗಿದೆ. ಇಡೀ ದೇಶವೇ ಅಯೋಧ್ಯೆಯ ಕಡೆಗೆ ದೃಷ್ಟಿ ನೆಟ್ಟಿದೆ. ರಾಮಮಂದಿರ ಉದ್ಘಾಟನೆ ಭಾರತವಷ್ಟೇ ಅಲ್ಲ; ಇಡೀ ವಿಶ್ವದಲ್ಲಿರುವ ಎಲ್ಲ ಭಾರತೀಯರು ಸಂಭ್ರಮಿಸುವ ಕ್ಷಣವಾಗಿದೆ. ಸುಮಾರು 500 ವರ್ಷಗಳ ಕನಸು ನನಸಾಗುತ್ತಿದ್ದು, ಅಂದು ಎಲ್ಲ ರಾಮಭಕ್ತರು ದೀಪಾವಳಿ ಹಬ್ಬದಂತೆ ಸಂಭ್ರಮಿಸಬೇಕು. ಮನೆಮನೆಗಳಲ್ಲಿ ವಿಶೇಷ ಪೂಜೆಗಳನ್ನು ಕೈಗೊಳ್ಳಬೇಕು. ಶ್ರೀರಾಮನ ಕುರಿತು ಪ್ರವಚನ ಏರ್ಪಡಿಸಬೇಕು. ಮನೆಯಲ್ಲಿ ದೀಪಲಂಕಾರ ಮಾಡಬೇಕು ಎಂದರು.

ಬಿಜೆಪಿ ಹಿರಿಯ ಮುಖಂಡ ಗಣಪಾಲ ಐನಾಥ ರೆಡ್ಡಿ ಮಾತನಾಡಿ, ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆ ಕ್ಷಣವನ್ನು ಇಡೀ ಜಗತ್ತೇ ಎದುರು ನೋಡುತ್ತಿದೆ. ಕರ್ನಾಟಕದ ಶಿಲ್ಪಿಯೊಬ್ಬರು ಶ್ರೀರಾಮಚಂದ್ರನ ಮೂರ್ತಿಯನ್ನು ನಿರ್ಮಿಸಿದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ಕೆ ಜಗತ್ತಿನ ನಾನಾ ದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಿದ್ದು, ಜ. 22ರಂದು ಇಡೀ ದೇಶವೇ ಸಡಗರ, ಸಂಭ್ರಮದಲ್ಲಿರಲಿದೆ. ಆ ಸುದಿನಕ್ಕಾಗಿ ದೇಶದ ಕೋಟ್ಯಂತರ ಜನರು ಎದುರು ನೋಡುತ್ತಿದ್ದಾರೆ ಎಂದರಲ್ಲದೆ, ಅಯೋಧ್ಯೆಯಲ್ಲಿ ಇರುವ ಸಂಭ್ರಮ ಎಲ್ಲ ಕಡೆಯೂ ಇರಬೇಕು. ಎಲ್ಲರ ಮನೆಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿ ಮಾಡಬೇಕು. ವಿಶೇಷ ಪೂಜಾ ವಿಧಿ ವಿಧಾನಗಳ ಮೂಲಕ ಶ್ರೀರಾಮನ ಭಜನೆ ಮಾಡಬೇಕು ಎಂದರು.

ವಿಶ್ವ ಹಿಂದೂ ಪರಿಷತ್ ಅಶೋಕ, ಹಿಂದೂ ಜಾಗರಣ ವೇದಿಕೆ ಶ್ರೀರಾಮುಲು, ಯೋಗಗುರು ರಾಮಕೃಷ್ಣ, ಯೋಗ ಶಿಬಿರಾರ್ಥಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!