(ಟಿಂಟ್‌ ಬಾಟಂ) ಬುದ್ಧನ ತತ್ವ ಪಾಲಿಸೋಣ: ಭೀಮುನಾಯಕ

KannadaprabhaNewsNetwork |  
Published : May 24, 2024, 12:48 AM IST
 ಯಾದಗಿರಿ ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಭಗವಾನ್ ಗೌತಮ ಬುದ್ಧರವರ 2568ನೇ ಬುದ್ಧ ಪೂರ್ಣಿಮಾ ದಿನ ಆಚರಿಸಲಾಯಿತು. | Kannada Prabha

ಸಾರಾಂಶ

ಯಾದಗಿರಿ ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಭಗವಾನ್ ಗೌತಮ ಬುದ್ಧರವರ 2568ನೇ ಬುದ್ಧ ಪೂರ್ಣಿಮಾ ದಿನ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಯಾದಗಿರಿ

ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಗಿಂಕ ಮಾರ್ಗವನ್ನು ಕಂಡುಹಿಡಿದ ದಾರ್ಶನಿಕ ಭಗವಾನ್ ಗೌತಮ ಬುದ್ಧನ ತತ್ವವನ್ನು ನಾವೆಲ್ಲರೂ ಪಾಲಿಸೋಣ ಎಂದು ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಹೇಳಿದರು.

ನಗರದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ನಡೆದ ಭಗವಾನ್ ಗೌತಮ ಬುದ್ಧರ 2568ನೇ ಬುದ್ಧ ಪೂರ್ಣಿಮಾ ದಿನದ ನಿಮತ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡಿ ಅವರು ಮಾತನಾಡಿದರು.

ಗೌತಮ ಬುದ್ಧನ ಮೂಲ ಹೆಸರು ಸಿದ್ಧಾರ್ಥ, ಜ್ಞಾನ ಸಂಪಾದನೆಯಾದ ಮೇಲೆ ಬುದ್ಧನೆಂದು ಕರೆಯಲಾಗಿದೆ. ಬೌದ್ಧ ಧರ್ಮದಲ್ಲಿ ಕೋಪ, ಲೋಭ, ಮೌಢ್ಯಗಳನ್ನು ಸಂಪೂರ್ಣವಾಗಿ ಜಯಿಸಿದವನನ್ನು ಬುದ್ಧನೆಂದು ಕರೆಯುತ್ತಾರೆ ಎಂದು ಹೇಳಿದರು.

ಈ ವೇಳೆ ಕರವೇ ಯುವ ಘಟಕದ ಅಧ್ಯಕ್ಷ ವಿಶ್ವರಾಧ್ಯ ದಿಮ್ಮೆ, ಮುಖಂಡರಾದ ಸಂತೋಷ ನಿರ್ಮಲಕರ್, ಹಣಮಂತನಾಯಕ ಖಾನಹಳ್ಳಿ, ಶರಣು ಸಾಹುಕಾರ, ಸಿದ್ದಪ್ಪ ಕುಯಿಲೂರು, ವಿಶ್ವರಾಜ ಹೋನಗೇರಾ, ಯೆಲ್ಲಪ್ಪ ಚಾಮನಳ್ಳಿ, ವಿಶ್ವಜೀತ್ ಕಟ್ಟಿ, ರಮೇಶ ಡಿ. ನಾಯಕ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲು ಹೆಚ್ಚಳ: ಸಿದ್ದು vs ಬೆಲ್ಲದ್‌ ಜಟಾಪಟಿ
ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ