ಇಂದು ಬೆಂಗಳೂರು ವಿಶ್ವಕ್ಕೆ ಮಾದರಿಯಾಗುವಂತೆ ನಿರ್ಮಾಣ ಮಾಡಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ಸಾಗೋಣ
ಕುಂದಗೋಳ: ಇಲ್ಲಿಯ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕಾಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.
ತಹಸೀಲ್ದಾರ್ ರಾಜು ಮಾವರಕರ ಸೇರಿದಂತೆ ವಿವಿಧ ಗಣ್ಯರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ತಹಸೀಲ್ದಾರ್ ರಾಜು ಮಾವರಕರ, ಇಂದು ಬೆಂಗಳೂರು ವಿಶ್ವಕ್ಕೆ ಮಾದರಿಯಾಗುವಂತೆ ನಿರ್ಮಾಣ ಮಾಡಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ಸಾಗೋಣ. ಅವರ ಆದರ್ಶ ತತ್ವಗಳನ್ನು ಪಾಲಿಸೋಣ ಎಂದು ಹೇಳಿದರು.
ಶಿಕ್ಷಣ ಇಲಾಖೆಯ ಅಧಿಕಾರಿ ಭೀಮಪ್ಪ ಸಾವಳಗಿ ಉಪನ್ಯಾಸ ನೀಡಿದರು. ಮಾಣಿಕ್ಯ ಚಿಲ್ಲೂರ, ಒಕ್ಕಲಿಗ ಸಮಾಜದ ಮಹಿಳಾ ಅಧ್ಯಕ್ಷೆ ಕುಮ್ಮಕ್ಕ ಸ್ವಾದಿ, ವಿದ್ಯಾರ್ಥಿಗಳಾದ ಶೈಲಾ ದೊಡ್ಡವಾಡ, ಬಸವರಾಜ ಗೋಜನೂರ ಮಾತನಾಡಿದರು.
ಈ ವೇಳೆ ತಹಸೀಲ್ದಾರ್ ರಾಜು ಮಾವರಕರ, ಇಒ ಜಗದೀಶ ಕಮ್ಮಾರ, ಸಿಪಿಐ ಶಿವಾನಂದ ಅಂಬಿಗೇರ, ಸಿಇಒ ಮಹಾದೇವಿ ಮಾಡಲಗೇರಿ ಹಾಗೂ ಗ್ರಾಮ ಆಡಳಿತಾಧಿಕಾರಿ ಮಮ್ಮದಲಿ ಸೌದಾಗಾರ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಒಕ್ಕಲಿಗ ಸಮಾಜದ ಶತಾಯುಶಿ ತಿಪ್ಪವ್ವ ಬಾಳಪ್ಪ ನೇಗಿನಹಾಳ, ಸಮಾಜದ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.
ಒಕ್ಕಲಿಗ ಸಮಾಜದ ಮುಖಂಡರಾದ ಹನುಮಂತಪ್ಪ ನೇಗಿನಹಾಳ, ಹನುಮಂತಪ್ಪ ಗೊಜನೂರ, ಡಾ. ಕಲ್ಲಪ್ಪ ನವಲಗುಂದ, ನೀಲಪ್ಪ ಬಟ್ಟೂರ, ನಾಗಪ್ಪ ಬಟ್ಟೂರ, ರಾಜು ಕುಡವಕ್ಕಲರ, ನಿಂಗಪ್ಪ ಗೋಜನೂರ ಸೇರಿದಂತ ಅನೇಕರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.