ಕನ್ನಡಪ್ರಭ ವಾರ್ತೆ ಬೀದರ್
ಸೋಮವಾರ ಜಿಲ್ಲಾಡಳಿತ. ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರ ಕಂಡ ಮಹಾಪುರುಷ ಶಿವಾಜಿ ಮಹಾರಾಜ ಆಗಿದ್ದರು. ಅವರು ಚಿಕ್ಕಂದಿನಲ್ಲಿಯೇ ತಮ್ಮ ತಾಯಿ ಜಿಜಾಬಾಯಿಯವರಿಂದ ರಾಮಾಯಣ, ಮಹಾಭಾರತ ಕಲಿತು ರಾಷ್ಟ್ರೀಯತೆಯ ಪ್ರೇಮ ಅವರಲ್ಲಿ ಮೂಡಿತ್ತು. ಶಿವಾಜಿ ಮಹಾರಾಜರು ತಮ್ಮ ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಿ ಅವರೊಬ್ಬ ಆದರ್ಶ ರಾಜ, ಪ್ರಜೆಗಳ ರಾಜ ಆಗಿದ್ದರು ಎಂದು ಹೇಳಿದರು.ಗಡಿ ಭಾಗದಲ್ಲಿ ಮರಾಠಿಗರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದೆ:
ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ಖಾನ್ ಮಾತನಾಡಿ, ಶಿವಾಜಿ ಮಹಾರಾಜರು ಮಾನವೀಯತೆಗಾಗಿ ಹೋರಾಡಿದ್ದರು. ಅವರು ಸಮಾಜದ ಜನರಲ್ಲಿ ಯಾವುದೇ ಭೆದ ಭಾವ ಮಾಡಿರಲಿಲ್ಲ. ದೊಡ್ಡ ದೊಡ್ಡ ವಿಚಾರ ಮತ್ತು ಮನಸ್ಸಿನ ವ್ಯಕ್ತಿಗಳು ಮಹಾತ್ಮರಾಗುತ್ತಾರೆ ಎಂದರು.
ಶಿವಾಜಿ ಮಹಾರಾಜ ಭಾವಚಿತ್ರದ ಭವ್ಯ ಮೆರವಣಿಗೆ:
ಬೀದರ್ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕೇಂದ್ರ ಸಚಿವರಾದ ಭಗವಂತ ಖೂಬಾ. ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮ್ಖಾನ್, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೇರಿದಂತೆ ಇತರೆ ಗಣ್ಯರು ಚಾಲನೆ ನೀಡಿದರು.ಈ ಕಾರ್ಯಕ್ರಮದಲ್ಲಿ ಬೀದರ್ ನಗರ ಸಭೆ ಅಧ್ಯಕ್ಷರಾದ ಮಹ್ಮದ ಗೌಸ್. ಜಿಲ್ಲಾಧಿಕಾರಿ ಗೋವಿಂದರೆಡ್ಡಿ. ಜಿಪಂ ಸಿಇಒ ಡಾ. ಗಿರೀಶ ದಿಲೀಪ ಬದೊಲೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಛತ್ರಪತಿ ಶಿವಾಜಿ ಮಹಾರಾಜ ಉತ್ಸವ ಸಮಿತಿ ಅಧ್ಯಕ್ಷರಾದ ಅನಿಲ ಕಾಳೆ. ಆನಂದ ದೇವಪ್ಪ. ಅಮೃತರಾವ್ ಚಿಮಕೋಡೆ. ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ ಸೇರಿದಂತೆ ಮರಾಠಾ ಸಮಾಜದ ಹಲವಾರು ಜನ ಉಪಸ್ಥಿತರಿದ್ದರು.