ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ, "ಬೇಟಿ ಬಚಾವೋ, ಬೇಟಿ ಪಡಾವೋ.. " ಜಾಗೃತಿ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದಲ್ಲಿ ಮಹಿಳೆಯರನ್ನು ದೇವತೆಯ ರೂಪವೆಂದು ಪರಿಗಣಿಸಲಾಗುತ್ತದೆ. ಮಹಿಳೆಯರಿಗೆ ಗೌರವ ನೀಡಬೇಕು, ಅವರ ಆಲೋಚನೆಗಳಿಗೆ ಗಮನ ಕೊಡಬೇಕು. ಆ ಮಹಿಳೆ ನಮ್ಮ ತಾಯಿ, ಸಹೋದರಿ, ಪತ್ನಿ, ಸಹೋದ್ಯೋಗಿ ಯಾರೇ ಆಗಿರಲಿ ಅವರಿಗೆ ಸಮಾನ ಹಕ್ಕು ಸಿಗಲು ಎಲ್ಲರೂ ಕೊಡುಗೆ ನೀಡಬೇಕು ಮತ್ತು ಅದಕ್ಕೆ ನಾವೇ ಪ್ರತ್ಯಕ್ಷ ಉದಾಹರಣೆ ಆಗಬೇಕು ಎಂದರು.ಇಂದಿನ ಯುಗದಲ್ಲಿ ಮಹಿಳೆಯರು ಯಾವುದೇ ಕ್ಷೇತ್ರದಲ್ಲೂ ಪುರುಷರಿಗಿಂತ ಹಿಂದೆ ಬಿದ್ದಿಲ್ಲ ಎಂದರೆ ಅವರಿಗೇಕೆ ಹಲವು ತಾರತಮ್ಯ, ಇಂದಿನಿಂದ ನಾವೆಲ್ಲರೂ ಮಹಿಳೆಯರನ್ನು ಗೌರವಿಸಿ ಅವರ ಪ್ರಗತಿಗೆ ಕೈಜೋಡಿಸೋಣ ಎಂದರು.
ನಮ್ಮ ಜಿಲ್ಲೆಯಲ್ಲಿ ಬಾಲ್ಯವಿವಾಹ, ಲಿಂಗ ಆಧರಿತ ತಾರತಮ್ಯಗಳನ್ನು ಸಂಪೂರ್ಣ ತೊಡೆದು ಹಾಕಬೇಕು ಎಂದರು. ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಮತ್ತು ಕೆಲವೊಮ್ಮೆ ಪ್ರತಿಯೊಂದು ಕ್ಷೇತ್ರದಲ್ಲೂ ಅವರಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಬಲ್ಲರು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ಮಾತನಾಡಿ, ನಿಮ್ಮ ಪರಿಶ್ರಮದ ಮೇಲೆಯೇ ಮುಂದಿನ ಭವಿಷ್ಯ ನಿರ್ಧಾರವಾಗುತ್ತದೆ. ಹಾಗಾಗಿ ಹೆಣ್ಣುಮಕ್ಕಳು ಸ್ವಾವಲಂಬಿಯಾಗಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಲಕ್ಷ್ಮೀಕಾಂತ ಕೆಂಗೇರಿ, ಜಿಲ್ಲಾ ಪಂಚಾಯ್ತಿ ಸಿಪಿಓ ಗರುನಾಥ ಗೌಡಪ್ಪನ್ನೋರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕ ವೀರನಗೌಡ, ಕ್ರೀಡಾ ಇಲಾಖೆ ಅಧಿಕಾರಿ ರಾಜು ಬಾವಿಹಳ್ಳಿ, ಜಿಲ್ಲಾ ನಿರೂಪಣಾಧಿಕಾರಿ ಪ್ರೇಮಮೂರ್ತಿ ಕೆ, ಯಾದಗಿರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಲಾಲಸಾಬ್ ಸೇರಿದಂತೆ ಇತರರಿದ್ದರು.