ರಾಜಕೀಯ ಬೆರಸದೆ ಕನ್ನಡಿಗರ ಅಸ್ಮಿತೆ ಕಾಪಾಡೋಣ

KannadaprabhaNewsNetwork |  
Published : Jan 14, 2026, 02:30 AM IST
ಪೋಟೋ 2 : ದಾಬಸ್‍ಪೇಟೆ ಪಟ್ಟಣದಲ್ಲಿ ಸೋಂಪುರ ಕರುನಾಡ ವಿಜಯಸೇನೆ ಸಂಘಟನೆಯಿಂದ ಕನ್ನಡದ ಹಬ್ಬ ಸುಗ್ಗಿ ಸಂಭ್ರಮ ಕಾರ್ಯಕ್ರಮ ಹಾಗೂ ಪ್ರಖ್ಯಾತ ಗಾಯಕ ರಾಜೇಶ್ ನಾರಾಯಣ್ ಅವರನ್ನು ಕರುನಾಡ ವಿಜಯಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಹೆಚ್.ಎನ್.ದೀಪಕ್ ಹಾಗೂ ಪದಾಧಿಕಾರಿಗಳು ಅಭಿನಂದಿಸಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ದೇಶಕ್ಕಾಗಿ ಸೈನಿಕರು, ಅನ್ನಕ್ಕಾಗಿ ರೈತರು ಎಷ್ಟು ಮುಖ್ಯಮೋ ಹಾಗೆ ಕರುನಾಡಿಗಾಗಿ ಕನ್ನಡಪರ ಸಂಘಟನೆಗಳು, ಹೋರಾಟಗಾರರು ಅಷ್ಟೇ ಮುಖ್ಯವಾಗಿದ್ದು ತಾಯಿ ಹಾಗೂ ತಾಯ್ತಾಡು ಸ್ವರ್ಗಕ್ಕಿಂತಲೂ ಮಿಗಿಲು ಎಂದು ಕರುನಾಡ ವಿಜಯಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಎಚ್.ಎನ್.ದೀಪಕ್ ತಿಳಿಸಿದರು.

ದಾಬಸ್‍ಪೇಟೆ: ದೇಶಕ್ಕಾಗಿ ಸೈನಿಕರು, ಅನ್ನಕ್ಕಾಗಿ ರೈತರು ಎಷ್ಟು ಮುಖ್ಯಮೋ ಹಾಗೆ ಕರುನಾಡಿಗಾಗಿ ಕನ್ನಡಪರ ಸಂಘಟನೆಗಳು, ಹೋರಾಟಗಾರರು ಅಷ್ಟೇ ಮುಖ್ಯವಾಗಿದ್ದು ತಾಯಿ ಹಾಗೂ ತಾಯ್ತಾಡು ಸ್ವರ್ಗಕ್ಕಿಂತಲೂ ಮಿಗಿಲು ಎಂದು ಕರುನಾಡ ವಿಜಯಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಎಚ್.ಎನ್.ದೀಪಕ್ ತಿಳಿಸಿದರು.

ಪಟ್ಟಣದ ಮಾರುತಿ ಮಹಲ್ ಪಕ್ಕದ ಮೈದಾನದಲ್ಲಿ ಸೋಂಪುರ ಕರುನಾಡ ವಿಜಯಸೇನೆ ಸಂಘಟನೆಯಿಂದ ಕನ್ನಡದ ಹಬ್ಬ ಸುಗ್ಗಿ ಸಂಭ್ರಮ ಕಾರ್ಯಕ್ರಮ ಹಾಗೂ ಗಾಯಕ ರಾಜೇಶ್ ನಾರಾಯಣ್ ತಂಡದ ಸಂಗೀತ ರಸಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ವಲಸಿಗರಿಂದ ತುಂಬಿ ಹೋಗುತ್ತಿರುವ ನಗರಗಳಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗುತ್ತಿದ್ದು, ಕನ್ನಡಿಗರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ಅವನ್ನು ಹತ್ತಿಕ್ಕಲು ಕರುನಾಡ ವಿಜಯಸೇನೆ ಸಂಘಟನೆ ಕಟಿಬದ್ದವಾಗಿದ್ದು, ಇದರಲ್ಲಿ ರಾಜಕೀಯ ಬೆರಸದೆ ಕನ್ನಡಿಗರ ಅಸ್ಮಿತೆ ಕಾಪಾಡಬೇಕು. ಈ ನಿಟ್ಟಿನಲ್ಲಿ ಕರುನಾಡ ವಿಜಯಸೇನೆ ಆರಂಭವಾಗಿ 3 ವರ್ಷವಾದರೂ ಸಾಂಸ್ಕೃತಿಕ, ಸಾಮಾಜಿಕ ಸಂಘಟನೆಯಾಗಿ ನಾಡು ನುಡಿ ಸಂಸ್ಕೃತಿಯ ಉಳಿವು ಮತ್ತು ಪ್ರಸಾರಕ್ಕೆ ಸಂಘಟನೆ ಮುನ್ನಡೆಯಲಿದೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಸುಚೀಂದ್ರ.ಎಸ್ ಮಾತನಾಡಿ, ಬೃಹತ್ ಕೈಗಾರಿಕಾ ವಲಯವಾಗಿ ಬೆಳೆಯುತ್ತಿರುವ ಸೋಂಪುರ ಭಾಗದಲ್ಲಿ ನಮ್ಮ ಕನ್ನಡಿಗರಿಗೆ ಕೆಲಸ ನೀಡದೆ ಅನ್ಯ ರಾಜ್ಯದವರನ್ನು ಕರೆತಂದು ಕಂಪನಿಗಳಲ್ಲಿ ಕೆಲಸ ನೀಡಿದ್ದು ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಇಂತಹ ಪ್ರಾದೇಶಿಕ ವಿಚಾರಗಳಲ್ಲಿ ಮುಖಂಡರು ಜನರ ಧ್ವನಿಯಾಗಿ ಸ್ಥಳೀಯರಿಗೆ ಉದ್ಯೋಗದಲ್ಲಿ ಪ್ರಾತಿನಿಧ್ಯ ನೀಡುವಂತೆ ಎಲ್ಲಾ ಕಂಪನಿಗಳಿಗೆ ತಿಳಿಸಬೇಕಿದೆ ಎಂದರು.

ಸಂಘಟನೆಯ ತಾಲೂಕು ಅಧ್ಯಕ್ಷ ವಸಂತಕುಮಾರ್ ಮಾತನಾಡಿ, ವರುಣನ ಕೃಪೆಯಿಂದ ಕಾರ್ಯಕ್ರಮ ತಡವಾಗಿ ಆರಂಭವಾಯಿತಾದರೂ ಸಂಗೀತ ಕಾರ್ಯಕ್ರಮಕ್ಕೆ ಜನ ಮನಸೋತು, ಮಳೆಯ ನಡುವೆಯೂ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. ಯುವಕರು ಸಂಘಟಿತರಾದಾಗ ಮಾತ್ರ ಸಾಮಾಜಿಕ ಸಮಸ್ಯೆಗಳಿಗೆ ಮುಕ್ತಿ ನೀಡಲು ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ವಿಜಯಸೇನೆಯ ಪದಾಧಿಕಾರಿಗಳು ವರ್ಷದ 365 ದಿನಗಳೂ ಸಂಘಟನೆಯಲ್ಲಿ ತೊಡಗಿ ರಾಜ್ಯದ ಪ್ರಗತಿಗೆ ಶ್ರಮಿಸುತ್ತಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ, ಸಂಘಟನೆಯ ರಾಜ್ಯ ಉಪಾಧ್ಯಕ್ಷ ಅಂಚೇಮನೆ ವಿನಯ್, ತಾಲೂಕು ಅಧ್ಯಕ್ಷ ವಸಂತಕುಮಾರ್, ಹೋಬಳಿ ಅಧ್ಯಕ್ಷ ಭರತ್, ಜಿಲ್ಲಾ ಗೌರವಾಧ್ಯಕ್ಷರಾದ ಜಗಜ್ಯೋತಿಬಸವೇಶ್ವರ, ಎಚ್.ಪಿ.ಸುರೇಶ್, ರಾಜ್ಯ ಸಂಚಾಲಕ ವಿಜಯ್‍ಕುಮಾರ್, ಕಾರ್ಯಾಧ್ಯಕ್ಷ ಹರೀಶ್ ಕುಮಾರ್, ಪದಾಧಿಕಾರಿಗಳಾದ ಚಂದನ್, ಚೇತನ್, ಮಾರುತಿ, ಲಿಂಗರಾಜು ಸೇರಿದಂತೆ ಐದಾರು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಪೋಟೋ 2 :

ದಾಬಸ್‍ಪೇಟೆ ಪಟ್ಟಣದಲ್ಲಿ ಸೋಂಪುರ ಕರುನಾಡ ವಿಜಯಸೇನೆ ಸಂಘಟನೆಯಿಂದ ಕನ್ನಡದ ಹಬ್ಬ ಸುಗ್ಗಿ ಸಂಭ್ರಮ ಕಾರ್ಯಕ್ರಮ ಹಾಗೂ ಪ್ರಖ್ಯಾತ ಗಾಯಕ ರಾಜೇಶ್ ನಾರಾಯಣ್ ಅವರನ್ನು ಕರುನಾಡ ವಿಜಯಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಎಚ್.ಎನ್.ದೀಪಕ್ ಹಾಗೂ ಪದಾಧಿಕಾರಿಗಳು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ