ರಾಮನಗರ: ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಸ್ಮರಣೀಯರ ಸಂಖ್ಯೆ ಬಹುದೊಡ್ಡದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಇಂದು ಅಖಂಡ ಕರ್ನಾಟಕ ಅಸ್ತಿತ್ವಕ್ಕೆ ಬಂದ ದಿನ. 1956ಕ್ಕೂ ಮೊದಲು ಕರ್ನಾಟಕ ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ದಕ್ಷಿಣದ ಕೆಲವು ಜಿಲ್ಲೆಗಳು ಮೈಸೂರು ಸಂಸ್ಥಾನದಲ್ಲಿದ್ದರೆ, ಕಲಬುರಗಿ, ಬೀದರ, ರಾಯಚೂರು ಜಿಲ್ಲೆಗಳು ಹೈದರಾಬಾದ್ ನಿಜಾಮರ ಆಳ್ವಿಕೆಗೆ ಒಳಪಟ್ಟಿದ್ದವು. ರಾಜ್ಯದ ವಾಯುವ್ಯ ಭಾಗ ಮುಂಬೈ ಪ್ರಾಂತ್ಯಕ್ಕೆ ಸೇರಿದ್ದರೆ, ದಕ್ಷಿಣ ಕನ್ನಡ, ಕೊಳ್ಳೇಗಾಲ, ಬಳ್ಳಾರಿ ಮುಂತಾದ ಪ್ರದೇಶಗಳು ಮದ್ರಾಸ್ ಪ್ರಾಂತ್ಯಕ್ಕೆ ಸೇರಿದ್ದವು. ಕೊಡಗು ಜಿಲ್ಲೆ ಬ್ರಿಟಿಷರ ಒಂದು ಅಧೀನ ರಾಜ್ಯವಾಗಿ ಉಳಿದಿತ್ತು ಎಂದರು.
ಸ್ವಾತಂತ್ರ್ಯದ ನಂತರ ಪ್ರತ್ಯೇಕ ರಾಜ್ಯದ ಕೂಗು ಕೇಳಿಸಿದಾಗ ಆಂಧ್ರ ಪ್ರದೇಶದಲ್ಲಿ ತೆಲುಗು ಮಾತನಾಡುವವರು ಶ್ರೀ ಪೊಟ್ಟಿ ಶ್ರೀರಾಮುಲು ರವರ ನೇತೃತ್ವದಲ್ಲಿ ಒಂದು ದೊಡ್ಡ ಪ್ರಮಾಣದಲ್ಲಿ ಅಮರಣಾಂತರ ಉಪವಾಸ ಸತ್ಯಾಗ್ರಹವನ್ನು ಕೈಗೊಂಡು ಮಡಿದರು.ಆಗಿನ ಮದ್ರಾಸ್ ಮುಖ್ಯಮಂತ್ರಿಯಾಗಿದ್ದ ರಾಜಗೋಪಾಲಚಾರಿ ತೆಲುಗು ಮಾತನಾಡುವವರನ್ನು ಆಂಧ್ರ ಪ್ರದೇಶವೆಂದು ಪ್ರತ್ಯೇಕ ರಾಜ್ಯ ಮಾಡುವುದು ಸೂಕ್ತವೆಂದು ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಪತ್ರ ಬರೆಯುತ್ತಾರೆ. ಆಗ ನೆಹರುರವರು ಒಂದು ಸಮಿತಿಯನ್ನು ರಚಿಸಿ ವರದಿಯನ್ನು ಪಡೆದು ಭಾಷೆಯ ಆಧಾರಿತ ರಾಜ್ಯಗಳನ್ನು ರಚಿಸಲು ಅನುಮೋದನೆ ನೀಡುತ್ತಾರೆ. 1956ರ ನವೆಂಬರ್ 1ರಂದು ಮೈಸೂರು ರಾಜ್ಯವೆಂದು ನಾಮಕರಣಗೊಂಡು ಉದಯವಾಯಿತು ಎಂದು ಹೇಳಿದರು.
ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಮತ್ತಿತರರು ಉಪಸ್ಥಿತರಿದ್ದರು.
1ಕೆಆರ್ ಎಂಎನ್ 1,2,3,4.ಜೆಪಿಜಿ
2.ಸಚಿವ ರಾಮಲಿಂಗಾರೆಡ್ಡಿರವರು ಕವಾಯಿತು ತಂಡಗಳಿಗೆ ಗೌರವ ಸಲ್ಲಿಸಿದರು.
4.ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಾಂಸ್ಕೃತಿಕ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಬಹುಮಾನ ವಿತರಿಸಿದರು.