ವಿದ್ಯಾರ್ಥಿಗಳಿಗೆ ವಿಜ್ಞಾನ ಮೇಳಗಳು ವೈಜ್ಞಾನಿಕ ಚಿಂತನೆ ಬೆಳೆಸಲಿ

KannadaprabhaNewsNetwork |  
Published : Jan 12, 2025, 01:16 AM IST
ಹೊನ್ನಾಳಿ ಫೋಟೋ 11 ಎಚ್.ಎಲ್.ಐ1ಎ. ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ವಿಜ್ಞಾನ ಮೇಳದಲ್ಲಿನ ವಿಜ್ಞಾನ ಮಾದರಿಗಳನ್ನು ಶಾಲಾ ಅಡಳಿತ ಮಂಡಳಿ, ಅತಿಥಿಗಳು,ಪೋಷಕರು ವೀಕ್ಷಿಸಿದರು.   | Kannada Prabha

ಸಾರಾಂಶ

ಹೊನ್ನಾಳಿ: ವಿಜ್ಞಾನ ಮೇಳಗಳು ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುವ ವೇದಿಕೆಗಳಾಗಬೇಕು ಎಂದು ಪಟ್ಟಣದ ಸ್ವಾಮಿ ವಿವೇಕಾನಂದ ಅಂಗ್ಲಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಎನ್.ರಾಯ್ಕರ್ ಹೇಳಿದರು.

ಹೊನ್ನಾಳಿ: ವಿಜ್ಞಾನ ಮೇಳಗಳು ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುವ ವೇದಿಕೆಗಳಾಗಬೇಕು ಎಂದು ಪಟ್ಟಣದ ಸ್ವಾಮಿ ವಿವೇಕಾನಂದ ಅಂಗ್ಲಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಎನ್.ರಾಯ್ಕರ್ ಹೇಳಿದರು.

ಶನಿವಾರ ಪಟ್ಟಣದ ಸ್ವಾಮಿ ವಿವೇಕಾನಂದ ಅಂಗ್ಲಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಮೇಳ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿಜ್ಞಾನ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂಗ್ಲೀಷ್ ಅಕಾಡೆಮಿ ಸಂಸ್ಥಾಪಕ ಇದ್ರೀಸ್ ಪಾಷಾ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳು ಮುಂದಿನ 40 ವರ್ಷಗಳಲ್ಲಿ ಅತ್ಯಂತ ಸಂತೋಷದಾಯಕ ಜೀವನ ನಡೆಸಬೇಕು ಎಂಬ ಮನಸ್ಥಿತಿಯನ್ನು ತಲೆಯಲ್ಲಿಟ್ಟುಕೊಂಡು ಎಲ್.ಕೆ.ಜಿ. ಯುಕೆಜಿಯಿಂದಲೇ ತಮ್ಮ ಮಕ್ಕಳನ್ನು ಬಾಲ್ಯ ಸಹಜವಾದ ಅಟ, ತುಂಟಾಟಗಳಿಂದ ದೂರವಿಸಿ ಸ್ವತಂತ್ರ ನೀಡಿದೇ ಕೇವಲ ಓದು ಹಾಗೂ ಹೋಂ ವರ್ಕ್‌ಗಳಿಗೆ ಸೀಮಿತಗೊಳ್ಳಿಸಿ ಮಕ್ಕಳ ಸುಂದರ ಬಾಲ್ಯ ಸಹಜ ಜೀವನವನ್ನು ಪರೋಕ್ಷವಾಗಿ ಕಸಿದುಕೊಳ್ಳುತ್ತಿದ್ದಾರೆ ಎಂದರು.

ಶಾಲಾ ಸಂಸ್ಥೆಯ ಕಾರ್ಯದರ್ಶಿ ಜೆ.ಕೆ.ಬಾಬು ಮಾತನಾಡಿದರು.

ಇದೇ ವೇಳೆ ಕಳೆದ ವರ್ಷ ಎಸ್‌ಎಸ್ಎಲ್‌ಸಿಯಲ್ಲಿ ಆತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಡಳಿತ ಮಂಡಳಿಯ ಖಂಜಾಚಿ ಕಿರಣ್ ಎಂ.ರಾಯ್ಕರ್, ಅಡಳಿತಾಧಿಕಾರಿ ಸಮನಾ, ಶಾಲೆಯ ಮುಖ್ಯ ಶಿಕ್ಷಕ ಗಿರೀಶ್ ಪಾಟೀಲ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌
2 ದಿನದಲ್ಲಿ 2ನೇ ಬಾರಿ ಸಿದ್ದು ಆಪ್ತ ರಾಜಣ್ಣ- ಡಿಕೆಶಿ ಭೇಟಿ