ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣ ಸಂಬಂಧ 14 ನಿವೇಶನಗಳ ಬಗ್ಗೆ ಬಿಜೆಪಿ 3 ತಿಂಗಳ ಹಿಂದೆ ಪ್ರಶ್ನಿಸಿದ್ದಕ್ಕೆ 62 ಕೋಟಿ ನೀಡಿ ವಾಪಾಸ್ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದರು ಎಂದರು.
ಆದರೆ, ಲೋಕಾಯುಕ್ತ ತನಿಖೆ ಬಿರುಸುಗೊಂಡಿರುವ ಜೊತೆಗೆ ಇಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಎಲ್ಲಾ ಬೆಳವಣಿಗೆಯಿಂದ ತಮಗೆ ಕಾನೂನು ಸಂಕಷ್ಟು ಬಿಗಿಯಾಗುವುದನ್ನು ಅರಿತು, ಮುಡಾಗೆ 14 ನಿವೇಶನಗಳನ್ನು ಹಿಂತಿರುಗಿಸಿದ್ದೀರಿ. ನಿವೇಶನ ವಾಪಾಸ್ ಪಡೆಯುವ ಬಗ್ಗೆ ಸಿಎಂ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದ 24 ಗಂಟೆಯಲ್ಲಿ ನಿವೇಶನಗಳನ್ನು ರದ್ದು ಪಡಿಸಲಾಗಿದೆ. ಇದರಲ್ಲಿ ಕನಿಷ್ಠ ಕಾನೂನು ನಿಯಮ ಪಾಲನೆಯಾಗಿಲ್ಲ ಎಂದು ಅವರು ಆರೋಪಿಸಿದರು.ಸಿದ್ದರಾಮಯ್ಯ ಅವರು ಯಾವುದೇ ಪ್ರಭಾವ ಬೀರದಿದ್ದರೂ ಅವರ ಸ್ಥಾನ ಮತ್ತು ಅಧಿಕಾರದಿಂದ ಎಲ್ಲವೂ ನಡೆದು ಹೋಗುತ್ತದೆ. ಸಿಎಂ ಪತ್ನಿ ನಿವೇಶನಗಳನ್ನು ವಾಪಾಸ್ ನೀಡುವುದಾಗಿ ಹೇಳಿದಾಕ್ಷಣ ತುರ್ತಾಗಿ ಅಧಿಕಾರಿಗಳು ಪಡೆದಿದ್ದೇಕೆ. ಪ್ರಕರಣ ತನಿಖೆಯಲ್ಲಿರುವಾಗ ಹೀಗೆ ಪಡೆಯಲು ಸಾಧ್ಯವಾ? ಸಿದ್ದರಾಮಯ್ಯ ಅವರು ಎಲ್ಲಿಯವರೆಗೆ ಸಿಎಂ ಆಗಿ ಇರುತ್ತಾರೋ ಅಲ್ಲಿಯವರೆಗೆ ನಿಸ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಅವರು ದೂರಿದರು.
ನಿಮ್ಮ 40 ವರ್ಷಗಳ ನಿಷ್ಕಳಂಕ ರಾಜಕಾರಣದಲ್ಲಿ ಕಪ್ಪು ಚುಕ್ಕೆ ಎದ್ದು ಕಾಣುತ್ತಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ಮಾಡಬಹುದೆಂಬ ಮುಂದಾಲೋಚನೆಯಿಂದ ಸಿಬಿಐಗೆ ಇದ್ದ ಮುಕ್ತ ಅನುಮತಿಯನ್ನು ರದ್ದು ಪಡಿಸಿದ್ದೀರಿ. ಮುಂದಿನ ದಿನಗಳಲ್ಲಿ ನಿಮ್ಮ ಈ ನಿರ್ಧಾರ ಸರಿಯೇ ಎಂಬುದನ್ನು ಕಾನೂನು ಪಂಡಿತರು ತಿಳಿಸುತ್ತಾರೆ. ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ನೀವು ದಸರಾ ಉತ್ಸವದ ಒಳಗೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ. ಇದರಿಂದ ನಿಮ್ಮ ಗೌರವ ಉಳಿಯುತ್ತದೆ ಎಂದರು.
ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಾಯ:
ಯತ್ನಾಳ್ ಅವರ ಹೇಳಿಕೆ ಪಕ್ಷದ ಸಂಘಟನಾತ್ಮಕ ಪ್ರಕ್ರಿಯೆಗೆ ಧಕ್ಕೆಯಾಗಲಿದೆ. ಯತ್ನಾಳ್ ಹೇಳಿಕೆ ವಿಚಿತ್ರ, ವಿಪರ್ಯಾಸ ಹಾಗೂ ದುರಂತದಿಂದ ಕೂಡಿದೆ. ಪಕ್ಷದ ಸದಸ್ಯತ್ವ ಅಭಿಯಾನ ನಡೆಯುವ ವೇಳೆಯಲ್ಲಿ ಯತ್ನಾಳ್ ಪದೇ ಪದೇ ಮಾತನಾಡಬಾರದು. ಏನೇ ಭಿನ್ನಾಭಿಪ್ರಾಯವಿದ್ದರೂ ಹೈಕಮಾಂಡ್ ಜೊತೆಗೆ ಮಾತನಾಡಿ ಬಗೆಹರಿಸಿಕೊಳ್ಳಲಿ ಎಂದು ತಿಳಿಸಿದರು.