ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕೋವಿಡ್ ಪ್ರಾರಂಭದ ಸಮಯದಲ್ಲಿ ಪಿಪಿಇ ಕಿಟ್ ಗಳನ್ನು ರಾಜ್ಯಕ್ಕೆ ತರಿಸಿದಾಗ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಹಾಗೂ ಬಿ.ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. ಪಿಪಿಇ ಕಿಟ್ ತರಿಸುವ ನಿರ್ಧಾರ ಏಕಾಏಕಿ ತೆಗೆದುಕೊಂಡಿದ್ದಲ್ಲ, ತಾಂತ್ರಿಕ ಸಮಿತಿ ಮತ್ತು ಟಾಸ್ಕ್ ಫೋರ್ಸ್ ಜೊತೆ ಚರ್ಚೆ ನಡೆಸಿ ಕೇಂದ್ರ ಸರ್ಕಾರದಿಂದ ವಿಶೇಷ ವಿಮಾನ ಚೀನಾಗೆ ಕಳಿಸಿ ತರಿಸಿದ್ದು, ಆಗ ಕೇವಲ ಕರ್ನಾಟಕದಲ್ಲಿ ಮಾತ್ರ ಪಿಪಿಇ ಕಿಟ್ ಲಭ್ಯವಿದ್ದವು ಎಂದು ಹೇಳಿದರು.
ಕೋವಿಡ್ ತನಿಖೆಗೆ ನ್ಯಾ. ಕುನ್ಹಾ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಆ ತನಿಖೆ ಪೂರ್ಣವೇ ಆಗಿಲ್ಲ. ಪೂರ್ಣಯಾಗದೆ ಅವರ ಹತ್ತಿರ ಪ್ರಾಥಮಿಕ ವರದಿ ತರಿಸಿಕೊಂಡು ಅದರ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ 7 ಮಂದಿ ಪ್ರಭಾವಿ ಸಚಿವರ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿ, ಅವರಿಗೂ ವರದಿ ನೀಡುವಂತೆ ಆದೇಶಿಸಿದೆ ಎಂದರು.ಇದಾದ ತಿಂಗಳ ಕಳೆಯುವುದರಲ್ಲಿ ಈಗ ಎಸ್ಐಟಿ ತನಿಖೆ ರಚನೆ ಮಾಡಲಾಗಿದೆ. ಇಡೀ ಪ್ರಪಂಚದಲ್ಲಿ ಕೋವಿಡ್ ಕ್ರಮಗಳ ಬಗ್ಗೆ ತನಿಖೆ ನಡೆಯುತ್ತಿರುವುದು ಕರ್ನಾಟಕದಲ್ಲಿ ಮಾತ್ರ. ಅವತ್ತು ಯಾವುದು ಎಷ್ಟು? ಅಥವಾ ಅವತ್ತಿನ ಪರಿಕರಗಳು ಸಿಗುತ್ತಿತ್ತಾ, ಇಲ್ಲವಾ ಎಂದು ಇವರು ಹೇಳಲಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹರಿಹಾಯ್ದರು.
ಈ ವೇಳೆ ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಉಪಾಧ್ಯಕ್ಷ ಜೆ.ನಾಗರಾಜ್, ಖಾದಿ ಮಂಡಲಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್,ಮತ್ತಿತರರು ಇದ್ದರು.ಕೋಟ್.....ಕರ್ನಾಟಕಕ್ಕೆ ಬಂದ ದಿನ ದೇಶದ ಯಾವ ರಾಜ್ಯಕ್ಕೆ ಪಿಪಿಇ ಕಿಟ್ ಬಂದಿತ್ತು ಎಂಬುದನ್ನು ಇವರು ಹೇಳಲಿ ನೋಡೋಣ. ಆಗ ಕೋವಿಡ್ಗೆ ಹೆದರಿ ಪಾಪ ಮನೆಗಳಲ್ಲಿ ಇದ್ದವರಿಗೆ ಈಗ ಅಧಿಕಾರ ಸಿಕ್ಕಿದೆ.
ಡಾ.ಕೆ.ಸುಧಾಕರ್, ಸಂಸದಸಿಕೆಬಿ-7 ಸುದ್ದಿಗಾರರೊಂದಿಗೆ ಸಂಸದ ಡಾ.ಕೆ.ಸುಧಾಕರ್ ಮಾತನಾಡಿದರು.