ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಲಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

KannadaprabhaNewsNetwork |  
Published : Nov 13, 2025, 01:15 AM IST
ಕ್ರೀಡಾಕೂಟವನ್ನ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಾನಸಿಕ ಹಾಗೂ ದೈಹಿಕವಾಗಿ ಹೆಚ್ಚು ಚಟುವಟಿಕೆಯಿಂದ ಬಾಲ್ಯದ ಜೀವನ ಕೂಡಿರಬೇಕು. ಆಗ ಮಾತ್ರವೇ ಸದೃಢ ಹಾಗೂ ಆತ್ಮವಿಶ್ವಾಸ ಬೆಳವಣಿಗೆ ಸಾಧ್ಯ. ಕ್ರೀಡಾ ಸೌಲಭ್ಯ ಜಿಲ್ಲೆಯಲ್ಲಿ ಉತ್ತಮವಾಗಿದೆ. ಇವುಗಳನ್ನು ಬಳಸಿಕೊಂಡು ಕ್ರೀಡಾ ಸಾಧನೆ ಮಾಡಬೇಕೆಂದರು.

ಗದಗ: ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಿರಲಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಕೆ.ಎಚ್‌. ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ 14 ಮತ್ತು 17 ವಯೋಮಿತಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಮೇಲಾಟಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಮಾನಸಿಕ ಹಾಗೂ ದೈಹಿಕವಾಗಿ ಹೆಚ್ಚು ಚಟುವಟಿಕೆಯಿಂದ ಬಾಲ್ಯದ ಜೀವನ ಕೂಡಿರಬೇಕು. ಆಗ ಮಾತ್ರವೇ ಸದೃಢ ಹಾಗೂ ಆತ್ಮವಿಶ್ವಾಸ ಬೆಳವಣಿಗೆ ಸಾಧ್ಯ. ಕ್ರೀಡಾ ಸೌಲಭ್ಯ ಜಿಲ್ಲೆಯಲ್ಲಿ ಉತ್ತಮವಾಗಿದೆ. ಇವುಗಳನ್ನು ಬಳಸಿಕೊಂಡು ಕ್ರೀಡಾ ಸಾಧನೆ ಮಾಡಬೇಕೆಂದರು.

ಜಿಲ್ಲೆಯಲ್ಲಿರುವ ಕ್ರೀಡಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವದು ಸಹ ಉತ್ತಮ ನಡೆ. ಕ್ರೀಡೆಯಲ್ಲಿ ಸದಾ ಪಾಲ್ಗೊಳ್ಳಿ. ಸೋಲು- ಗೆಲುವು ಇದ್ದೇ ಇರುತ್ತದೆ. ಶಕ್ತಿ, ಶಿಸ್ತು, ಉತ್ಸಾಹ ಹಾಗೂ ಆತ್ಮವಿಶ್ವಾಸದ ಪ್ರತೀಕವಾಗಿರುವ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದೇ ಪ್ರಮುಖ ಎಂದರು.

ಕ್ರೀಡೆಯೆಂದರೆ ಕೇವಲ ಗೆಲುವು ಸೋಲಿನ ವ್ಯವಹಾರವಲ್ಲ. ಅದು ವ್ಯಕ್ತಿಯ ವಿಕಾಸದ ಪಾಠಶಾಲೆ. ಶಿಸ್ತಿನ ಪಾಠಪುಸ್ತಕ ಮತ್ತು ಸಹಕಾರದ ಪಠ್ಯ. ಅಥ್ಲೆಟಿಕ್ ಕ್ರೀಡೆಗಳು ನಮ್ಮ ದೈಹಿಕ ಸಾಮರ್ಥ್ಯ ಅಷ್ಟೇ ಅಲ್ಲ. ಮನೋಬಲ ಮತ್ತು ಧೈರ್ಯವನ್ನು ಪರೀಕ್ಷಿಸುತ್ತವೆ ಎಂದರು.

ಜಿಲ್ಲಾ ಕೆಡಿಪಿ ಸದಸ್ಯ ಎಸ್.ಎನ್. ಬಳ್ಳಾರಿ ಮಾತನಾಡಿ, ಕ್ರೀಡಾಪಟುಗಳಿಗೆ ಪೂರಕವಾದ ವಾತಾವರಣ ಗದಗ ಜಿಲ್ಲೆಯಲ್ಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆ ಹೆಚ್ಚಿನ ಸಾಧನೆ ಮಾಡಲಿ ಎಂಬುದು ಸಚಿವರ ಆಶಯ ಆಗಿದೆ. ಹಾಕಿ ಕ್ರೀಡೆಯಲ್ಲಿ ಬೇನು ಬಾಟ ಅವರ ಆಟ ನೋಡಲು ಹಿಟ್ಲರ್ ಅವರು ಬರುತ್ತಿದ್ದರು ಎಂದರೆ ಅವರು ಆಟದ ಶೈಲಿಯಲ್ಲಿ ವಿಶಿಷ್ಟವಾದ ಪ್ರದರ್ಶನ ನೀಡುತ್ತಿದ್ದರು ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಬಸವರಾಜ ಕಡೆಮನಿ, ಡಾ. ಬಸವರಾಜ ಬಳ್ಳಾರಿ, ಬಿ.ಎಫ್. ಪೂಜಾರ, ವಿ.ಎಂ. ಹಿರೇಮಠ, ವಿ.ಎಫ್. ಕಲಕಂಬಿ, ಎಂ.ಕೆ. ಲಮಾಣಿ, ರಾಜು ಚವಾಣ, ಶರಣಪ್ಪ ನಾವಳ್ಳಿ, ಎಲ್.ಸಿ. ಚೌಕಿಮಠ, ಎಸ್.ಡಿ. ಮುಳಗುಂದ, ರವಿರಾಜ ಪವಾರ, ವಿ.ವಿ. ನಡುವಿನಮನಿ, ಆರ್.ವಿ. ಶೆಟ್ಟೆಪ್ಪನವರ, ಶಂಕರ ಹಡಗಲಿ, ಶಿವಕುಮಾರ ಕುರಿಯವರ, ಶರಣು ಗೋಗೇರಿ, ವಸಂತ ಮಡ್ಲೂರ, ಎನ್.ಆರ್. ನಿಡಗುಂದಿ, ಎಂ.ವಿ. ಪಾಟೀಲ, ಎಲ್.ಡಿ. ಪಾಟೀಲ, ಆರ್.ಎಸ್. ನರೇಗಲ್, ಎಲ್.ಬಿ. ಹುಡೇದ, ಎಸ್.ಕೆ. ಮಂಗಳಗುಡ್ಡ ಸೇರಿದಂತೆ ಕ್ರೀಡಾಪಟುಗಳು, ವಿದ್ಯಾರ್ಥಿಗಳು ಇದ್ದರು. ಕೆಕೆಪಿಪಿಜಿ ಸಂಗೀತ ಪಾಠಶಾಲೆ ವಿದ್ಯಾರ್ಥಿಗಳು ನಾಡಗೀತೆ ಪ್ರಸ್ತುತಪಡಿಸಿದರು. ಎಂ.ಎಸ್. ಕುಚಬಾಳ ಕಾರ್ಯಕ್ರಮ ನಿರ್ವಹಿಸಿದರು. ಜೆ.ಬಿ. ಅಣ್ಣಿಗೇರಿ ವಂದಿಸಿದರು.

PREV

Recommended Stories

ಬಿಳಿಕೆರೆ ಬಳಿ ಒಂದು ಗಂಡು ಹುಲಿ ಮರಿ ಸೆರೆ
ಪ್ರಕೃತಿ ವಿಕೋಪಗಳ ಎದುರಿಸುವ ಧೈರ್ಯ ಎಲ್ಲರಲ್ಲಿರಲಿ: ಜಿಪಂ ಸಿಇಒ ಗಿತ್ತೆ ಮಾಧವ ರಾವ್‌