ಹಳಿಯಾಳ: ಪಟ್ಟಣದ ಶ್ರೀ ವಿ.ಆರ್.ಡಿ.ಎಂ. ಟ್ರಸ್ಟ್ನ ವಿಮಲಾ ವಿ. ದೇಶಪಾಂಡೆ ಸ್ಕೂಲ್ ಆಫ್ ಎಕ್ಸಲೆನ್ಸ್ ಶಾಲೆಯಲ್ಲಿ ಸೋಮವಾರ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಾಲೆಯ ಧರ್ಮದರ್ಶಿ ರಾಧಾ ಆರ್. ದೇಶಪಾಂಡೆ ಅವರ ಜನ್ಮದಿನ ಆಚರಿಸಲಾಯಿತು.
ಶಾಲೆಯ ಪ್ರಾಂಶುಪಾಲ ಬಸವರಾಜು ಎಚ್.ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಿಂಡರ್ ಗಾರ್ಡನ್ ವಿದ್ಯಾರ್ಥಿಗಳು ರಾಧಾ ಮತ್ತು ಕೃಷ್ಣರ ವೇಷಧಾರಿಗಳಾಗಿ ನೃತ್ಯ ಪ್ರದರ್ಶಿಸಿದರು. ಪ್ಲೆ ಹೋಮ್ ವಿದ್ಯಾರ್ಥಿಗಳು ಕೃಷ್ಣ ಮತ್ತು ಸುಧಾಮರ ಗೆಳೆತನದ ಸಂಬಂಧದ ಕುರಿತಾಗಿ ಕಿರು ನಾಟಕ ಹಾಗೂ ಶ್ರೀಕೃಷ್ಣನ ಬಾಲಲೀಲೆಯ ಪ್ರಾರ್ಥನಾ ಗೀತೆಗಳನ್ನು ಹಾಡಿದರು.
ಲೈಬಾ ಬಸರಿಕಟ್ಟಿ, ಸುಧನ್ವಾ ಜೋಶಿ, ಮನಸ್ವಿ ಗುನಗಾ ಮತ್ತು ಇಶಾ ಬೊಬ್ಲಿ ಕಾರ್ಯಕ್ರಮ ನೆರವೇರಿಸಿದರು.ಮುಂಡಗೋಡದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಪೂಜಾ ಕಾರ್ಯಕ್ರಮ
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ
ಯಲ್ಲಾಪುರ ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಆ. ೨೬ರಂದು ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಪುರುಷಸೂಕ್ತ ಪಾರಾಯಣ, ತುಳಸಿ ಅರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.