ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಭಾರತೀಯ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ ತುರುವನೂರು ರಸ್ತೆ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ ಹಮ್ಮಿಕೊಂಡಿರುವ ಹತ್ತು ದಿನಗಳ ಮಕ್ಕಳ ಉಚಿತ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ಮಕ್ಕಳ ದಿನಚರಿ ಮೊಬೈಲ್, ಕಂಪ್ಯೂಟರ್ನಲ್ಲೇ ಕಳೆದು ಹೋಗುತ್ತದೆ. ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ಅತಿಯಾದ ಮೊಬೈಲ್ ಬಳಕೆಯಿಂದ ದೈಹಿಕ ಹಾಗೂ ಮಾನಸಿಕ ಸಮಸ್ಯೆ ಎದುರಾಗಬಹುದು. ಆ ಕಾರಣಕ್ಕೆ ಬೇಸಿಗೆ ಶಿಬಿರ ಉತ್ತಮ ಎಂದು ಅಭಿಪ್ರಾಯ ಪಟ್ಟರು.ಮಕ್ಕಳಲ್ಲಿ ನಾಯಕತ್ವ ಗುಣ, ತಂಡಕ್ಕೆ ಮಾರ್ಗದರ್ಶನ ನೀಡುವ ಕೌಶಲವೂ ಅವರಲ್ಲಿ ತುಂಬಬೇಕು. ಈಗ ಬಹಳಷ್ಟು ಮಂದಿ ಬೇಸಿಗೆ ಶಿಬಿರಗಳನ್ನೂ ಸಹ ಹಣ ಮಾಡಿಕೊಳ್ಳುವ ವ್ಯವಹಾರವನ್ನಾಗಿ ಮಾಡಿಕೊಂಡಿದ್ದಾರೆ. ಭಾರತೀಯ ಯೋಗ ಶಿಕ್ಷಣ ಸಂಸ್ಥೆ ಮಕ್ಕಳಿಗೆ ಉಚಿತ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಮಕ್ಕಳು ಸದುಪಯೋಗ ಪಡಿಸಿಕೊಂಡು ಶಿಬಿರದಲ್ಲಿ ಕಲಿಸಲಾಗುವ ವಿವಿಧ ರೀತಿ ಕಲೆ ಕಲಿತು ಉತ್ತಮ ಪ್ರಜೆಗಳಾಗಿ ಬೆಳೆಯುವಂತಾಗಲಿ ಎಂದರು.
ಸುಮಾರು 55ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದ ಶಿಬಿರವನ್ನು ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗಿಡಕ್ಕೆ ನೀರೆರೆಯುವುದರೊಂದಿಗೆ ಪ್ರಾರಂಭಗೊಂಡಿತು. ಶಿಬಿರದಲ್ಲಿ ಬಾಲಗೋಕುಲದ ಮಾತಾ ನಾಗಲತಾರವರು ಹೇಳಿಕೊಟ್ಟ ಸ್ವಾಗತ ಗೀತೆಯೊಂದಿಗೆ ಪ್ರಾರಂಭಗೊಂಡು, ಶ್ರೀಮತಿ ನಿರ್ಮಲ ಗುರುವಂದನಾ ಹಾಡು, ಇಂಡಿಯನ್ ಇಂಟರ್ನ್ಯಾಷನಲ್ ಶಾಲೆ ಶಿಕ್ಷಕ ತಿಪ್ಪೇರುದ್ರಪ್ಪ ಹೇಳಿಕೊಟ್ಟ ಅಬಾಕಸ್ ಮಕ್ಕಳಿಗೆ ಖುಷಿನೀಡಿದವು. ಶಿಬಿರದ ಆಯೋಜಕ ರವಿ ಅಂಬೇಕರ್ ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸಿ, ವಂದಿಸಿದರು. ಈ ಸಂಧರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ನೃತ್ಯ ಕಲಾವಿದೆ ಕು.ಗಗನ, ಭಜನೆ ಹಾಡುಗಾರ್ತಿ ಶ್ರೀಮತಿ ಅಂಬುಜಾಕ್ಷಿ, ನಳಿನಾಕ್ಷಿ, ಚೈತ್ರ, ಶಿಕ್ಷಕಿ ರೇಣುಕಾ, ಸುನೀತಾ, ಇನ್ನಿತರರು ಭಾಗವಹಿಸಿದ್ದರು.