ಕನ್ನಡಪ್ರಭ ವಾರ್ತೆ ಕಾರ್ಕಳ
ಬಿಹಾರ ಚುನಾವಣೆಗೆ ರಾಜ್ಯ ಸರ್ಕಾರ ಹಣ ನೀಡಿದೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ, ಕೇಂದ್ರದಲ್ಲಿ ನಿಮ್ಮದೇ ಸರ್ಕಾರ ಇರುವಾಗ, ಐಟಿ, ಈಡಿ ಎಲ್ಲವೂ ನಿಮ್ಮದೇ ಸರ್ಕಾರದ ಅಧೀನದಲ್ಲಿ ಇರುವಾಗ ವ್ಯರ್ಥ ಆರೋಪ ಮಾಡದೆ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿಸಿ ಎಂದು ಸವಾಲು ಎಸೆದಿದ್ದಾರೆ.
ರಾಜ್ಯದಲ್ಲಿ 136 ಸೀಟುಗಳ ಭರ್ಜರಿ ಬಹುಮತದಿಂದ ಗೆದ್ದಿರುವ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಹಗರಣ, ಭ್ರಷ್ಟಾಚಾರದಲ್ಲಿಯೇ ಮುಳುಗಿರುವ ಸುನೀಲ್ ಕುಮಾರ್ ವಿರುದ್ಧ ಸ್ವತಃ ಬಿಜೆಪಿಯಲ್ಲಿಯೇ ಅಪಸ್ವರಗಳು ಕೇಳಿ ಬರುತ್ತಿದ್ದು, ಮುಂದಿನ ಬಿಜೆಪಿ ಟಿಕೆಟ್ ಸಿಗುವುದೋ ಇಲ್ಲವೋ ಎನ್ನುವ ಆತಂಕದಲ್ಲಿರುವ ಸುನೀಲ್ ಕುಮಾರ್ ಪರಿಸ್ಥಿತಿಯೇ ಅಸಲಿಯಾಗಿ ಅಯ್ಯೋ ಎನ್ನುವಂತಾಗಿದೆ ಎಂದು ಪ್ರದೀಪ್ ಬೇಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.