ಶಿಕ್ಷಕರು ಎಐ ಜ್ಞಾನ ಸಂಪನ್ನರಾಗಲಿ: ಡಾ.ರಾಮಚಂದ್ರ

KannadaprabhaNewsNetwork |  
Published : Jun 21, 2026, 02:00 AM IST
ಕ್ಯಾಪ್ಷನ19ಕೆಡಿವಿಜಿ31 ದಾವಣಗೆರೆಯ ಯುಬಿಡಿಟಿ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸಮ್ಮೇಳನವನ್ನು ಡಾ.ವಿ.ರಾಮಚಂದ್ರ ವಿ.ಪೂಜಾರಿ, ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ದಾವಣಗೆರೆ ನಗರದ ಬಾಪೂಜಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ (ಬಿಐಇಟಿ)ದ ವಿದ್ಯುತ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದಿಂದ ಸ್ಮಾರ್ಟ್ ಎಲೆಕ್ಟ್ರಿಕಲ್ಸ್ ಸಿಸ್ಟಮ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಉದಯೋನ್ಮುಖ ಸುಸ್ಥಿರ ತಂತ್ರಜ್ಞಾನಗಳು **(SEEST-2026)** ಕುರಿತ 2 ದಿನಗಳ ಕಾಲ ಆಯೋಜಿಸಿದ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ ಕಾಲೇಜಿನ ಪ್ಲೇಸ್‌ಮೆಂಟ್ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

- ಬಿಐಇಟಿ ಪ್ಲೇಸ್‌ಮೆಂಟ್ ಸೆಮಿನಾರ್ ಹಾಲ್‌ನಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ನಗರದ ಬಾಪೂಜಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ (ಬಿಐಇಟಿ)ದ ವಿದ್ಯುತ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದಿಂದ ಸ್ಮಾರ್ಟ್ ಎಲೆಕ್ಟ್ರಿಕಲ್ಸ್ ಸಿಸ್ಟಮ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಉದಯೋನ್ಮುಖ ಸುಸ್ಥಿರ ತಂತ್ರಜ್ಞಾನಗಳು **(SEEST-2026)** ಕುರಿತ 2 ದಿನಗಳ ಕಾಲ ಆಯೋಜಿಸಿದ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ ಕಾಲೇಜಿನ ಪ್ಲೇಸ್‌ಮೆಂಟ್ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

ಪುಣೆ ಎಐಟಿಯ ಪ್ರೊ-ಚಾನ್ಸಲರ್ ಡಾ. ವಿ.ರಾಮಚಂದ್ರ ವಿ. ಪೂಜಾರಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ದಿವಂಗತ ಶಾಮನೂರು ಶಿವಶಂಕರಪ್ಪ ಅವರೊಂದಿಗಿದ್ದ ತಮ್ಮ ಒಡನಾಟ ಸ್ಮರಿಸಿದರು. ಬೌದ್ದಿಕವಾಗಿ ಚುರುಕಾದ, ಮಾನಸಿಕವಾಗಿ, ಜಾಗ್ರತವಾಗಿ, ಆಧ್ಯಾತ್ಮಿಕವಾಗಿ ಉನ್ನತ ಮತ್ತು ದೈಹಿಕವಾಗಿ ಸದೃಢ ಮಕ್ಕಳೇ ಸಮಾಜದ ಅಮೂಲ್ಯ ಸಂಪತ್ತು. ಉದ್ಯೋಗ ಭದ್ರತೆಗೆ ಶಿಕ್ಷಕರು ಎಐ ಸಜ್ಜಿತರಾಗಿ ಮತ್ತು ಜ್ಞಾನ ಸಂಪನ್ನರಾಗಬೇಕಾಗಿದೆ. ರಾಷ್ಟ್ರಪತಿಯಾಗಿದ್ದ ಡಾ.ಅಬ್ದುಲ್ ಕಲಾಂ ನಿರ್ದೇಶನದಂತೆ ತಮಿಳುನಾಡಿನ ಕರಾವಳಿ ಜನರಿಗೆ ಉಪ್ಪುನೀರು ಶುದ್ಧೀಕರಣ ಘಟಕ ಸ್ಥಾಪಿಸಿದ್ದನ್ನು ಈ ಸಂದರ್ಭ ಸ್ಮರಿಸಿದರು.

ಬಿ.ಐ.ಇ.ಟಿ. ನಿರ್ದೇಶಕ ಪ್ರೊ. ವೈ.ವೃಷಭೇಂದ್ರಪ್ಪ ಮಾತನಾಡಿ, ಡೇಟಾ ಸೆಂಟರ್‌ಗಳು ಭಾರಿ ಪ್ರಮಾಣದಲ್ಲಿ ವಿದ್ಯುತ್ ಬಳಕೆ ಮಾಡುತ್ತಿವೆ. ವಿದ್ಯುತ್ ಉತ್ಪಾದನೆಗೆ ಹೊಸ ಅವಿಷ್ಕಾರಗಳನ್ನು ಮಾಡಬೇಕು. ನೈಸರ್ಗಿಕ ಅನಿಲ ಮತ್ತು ಹೈಡ್ರೋಜನ್ ಮಿಶ್ರಣದಿಂದ ವಿದ್ಯುತ್ ಉತ್ಪಾದನೆ, ಚಂದ್ರನ ಮೇಲೆ ಸೌರಫಲಕಗಳನ್ನು ಅಳವಡಿಸಿ, ವಿದ್ಯುತ್ ಉತ್ಪಾದಿಸುವುದು ಸೇರಿದಂತೆ ವಿವಿಧ ಆವಿಷ್ಕಾರಗಳ ಕುರಿತು ಮಾಹಿತಿ ನೀಡಿದರು.

ವಿಭಾಗದ ಮುಖ್ಯಸ್ಥ ಡಾ. ಎಂ.ಎಸ್. ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತ ಮತ್ತು ವಿದೇಶಗಳ ಸಂಶೋಧಕರಿಂದ ಸಮ್ಮೇಳನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಟ್ಟು 480 ಸಂಶೋಧನಾ ಪ್ರಬಂಧಗಳು ಸಲ್ಲಿಕೆಯಾಗಿವೆ. ಇವುಗಳಲ್ಲಿ 80 ಪ್ರಬಂದಗಳನ್ನು ಆಯ್ಕೆ ಮಾಡಲಾಗಿದೆ. ಈ ಸಮ್ಮೇಳನಕ್ಕೆ ನಾಸಿಕ್, ಮುಂಬೈನ ಎಂ.ಜಿ. ಅರಿಸೆಂಟ್ ಎಜುಕೇಷನಲ್ ಫೌಂಡೇಷನ್ ತಾಂತ್ರಿಕ ಪ್ರಾಯೋಜಕತ್ವ ನೀಡಿದೆ ಎಂದರು.

ಸ್ಮಾರ್ಟ್ ಎಲೆಕ್ಟ್ರಿಕಲ್ಸ್ ಸಿಸ್ಟಂಸ್ ವಿದ್ಯುತ್ ಮತ್ತು ಇಂಧನ ತಂತ್ರಜ್ಞಾನಗಳು, ಎಲೆಕ್ಟ್ರಾನಿಕ್ಸ್, ಕೃತಕ ಬುದ್ಧಿಮತ್ತೆ ಅನ್ವಯಗಳು, ಸುಸ್ಥಿರ ಇಂಧನ ಪರಿಹಾರಗಳು, ಸ್ಮಾರ್ಟ್ ಗ್ರಿಡ್‌ಗಳು, ಎಲೆಕ್ಟ್ರಿಕ್ ವಾಹನಗಳು, ಐಒಟಿ, ಆಟೋಮೇಷನ್ ಮತ್ತು ಯದ್ಯೋನ್ಮುಖ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನಗಳಲ್ಲಿ ಇತ್ತೀಚಿನ ಪ್ರಗತಿಗಳನ್ನು ಪ್ರದರ್ಶಿಸುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಡಾ. ಎಚ್.ಬಿ. ಅರವಿಂದ್ ಸಮ್ಮೇಳನಕ್ಕೆ ಶುಭ ಹಾರೈಸಿದರು. ಡಾ. ಎಚ್.ಎನ್.ಮಂಜುನಾಥ ಸ್ವಾಗತಿಸಿ, ಡಾ.ಕರಿಬಸವರಾಜು ವಂದಿಸಿದರು. ಸುಮಾರು 300 ಜನ ಸಂಶೋಧಕರು, ವಿದ್ಯಾರ್ಥಿಗಳು, ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

- - -

-19ಕೆಡಿವಿಜಿ31:

ದಾವಣಗೆರೆಯ ಯುಬಿಡಿಟಿ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸಮ್ಮೇಳನವನ್ನು ಡಾ. ವಿ.ರಾಮಚಂದ್ರ ವಿ. ಪೂಜಾರಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆಗಳ ಎಲ್‌ಕೆಜಿ–ಯುಕೆಜಿಗೆ ಉತ್ತಮ ಸ್ಪಂದನೆ
ಶಿಥಿಲಾವಸ್ಥೆ ತಲುಪಿದ ಶಿರಸಿ ಪೊಲೀಸ್ ವಸತಿಗೃಹ, ಸೋರುವ ಮನೆಯಲ್ಲೇ ವಾಸ