ಹೊಸಪೇಟೆ: ಅತಿ ತಂತ್ರಜ್ಞಾನದಿಂದ ಪ್ರಪಂಚ ಕೆಡಬಾರದು. ಆ ತಂತ್ರಜ್ಞಾನ ಜಗತ್ತನ್ನು ಉಳಿಸುವ ನಿಟ್ಟಿನಲ್ಲಿ ಬಳಕೆಯಾದರೆ ಅದೇ ಎಂಜಿನಿಯರ್ಗಳು ಕಂಡುಕೊಳ್ಳುವ ಯಶಸ್ಸು ಎಂದು ಸ್ಥಳೀಯ ಕೊಟ್ಟೂರುಸ್ವಾಮಿ ಸಂಸ್ಥಾನ ಮಠದ ಜ.ಶ್ರೀ ಬಸವಲಿಂಗ ಮಹಾಸ್ವಾಮೀಜಿ ಹೇಳಿದರು.ನಗರದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ 2024ನೇ ಸಾಲಿನ ತರಗತಿಗಳ ಪ್ರಾರಂಭೋತ್ಸವ ಶುಭಾರಂಭ-2024 ಸಮಾರಂಭವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಶ್ರೀಗಳು,
ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್, ಹೊಸಪೇಟ್ ಸ್ಟೀಲ್ಸ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾಂಕ್ ಪಾಲ್ ಮಾತನಾಡಿದರು.
ಪಿಡಿಐಟಿಯ ಆಡಳಿತ ಮಂಡಳಿ ಅಧ್ಯಕ್ಷ ಕರಿಬಸವರಾಜ ಬಾದಾಮಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಯು.ಎಂ. ರೋಹಿತ್, ಉಪ ಪ್ರಾಂಶುಪಾಲೆ ಡಾ. ಪಾರ್ವತಿ ಕಡ್ಲಿ ಮತ್ತಿತರರಿದ್ದರು.ಕೀರ್ತನ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಡಾ. ಶರಣ ಬಸಮ್ಮ ನಿರ್ವಹಿಸಿದರು.
ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ 2024ನೇ ಸಾಲಿನ ತರಗತಿಗಳ ಪ್ರಾರಂಭೋತ್ಸವ ‘ಶುಭಾರಂಭ-2024’ ಸಮಾರಂಭವನ್ನು ಸ್ಥಳೀಯ ಕೊಟ್ಟೂರುಸ್ವಾಮಿ ಸಂಸ್ಥಾನ ಮಠದ ಜ.ಶ್ರೀ ಬಸವಲಿಂಗ ಮಹಾಸ್ವಾಮೀಜಿ ಚಾಲನೆ ನೀಡಿದರು.