ಮಠಾಧೀಶರು ಧಾರ್ಮಿಕ ವಾತಾವರಣ ನಿರ್ಮಿಸಲಿ

KannadaprabhaNewsNetwork |  
Published : Dec 15, 2025, 04:00 AM IST
ದೇವರು, ತಾಯಿ-ತಂದೆ, ಪೂಜ್ಯರು ಮತ್ತು ಜನರ ಆಶೀರ್ವಾದದಿಂದ ನಾವು ಜಿಲ್ಲೆಯಲ್ಲಿಯೇ ಗಟ್ಟಿಯಾಗಿ ಜನರ ಮುಂದೆ ನಿಲ್ಲಲು ಕಾರಣ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮೂಡಲಗಿ ಕ್ಷೇತ್ರದ ಪ್ರತಿ ಹಳ್ಳಿ- ಹಳ್ಳಿಗೂ ತೆರಳಿ ಮಠಾಧೀಶರು ಧಾರ್ಮಿಕ ವಾತಾವರಣ ನಿರ್ಮಿಸಬೇಕು. ಈ ಮೂಲಕ ತಪ್ಪುತ್ತಿರುವ ಸಮಾಜವನ್ನು ಸರಿದಾರಿಗೆ ತರಬೇಕು. ದುಶ್ಚಟಗಳನ್ನು ಮಟ್ಟ ಹಾಕಬೇಕು.‌ ಸುಂದರ ಸಮಾಜ ನಿರ್ಮಾಣಕ್ಕೆ ಮಠಗಳು ಮುಂದಾಗಬೇಕೆಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಕ್ಷೇತ್ರದ ಪ್ರತಿ ಹಳ್ಳಿ- ಹಳ್ಳಿಗೂ ತೆರಳಿ ಮಠಾಧೀಶರು ಧಾರ್ಮಿಕ ವಾತಾವರಣ ನಿರ್ಮಿಸಬೇಕು. ಈ ಮೂಲಕ ತಪ್ಪುತ್ತಿರುವ ಸಮಾಜವನ್ನು ಸರಿದಾರಿಗೆ ತರಬೇಕು. ದುಶ್ಚಟಗಳನ್ನು ಮಟ್ಟ ಹಾಕಬೇಕು.‌ ಸುಂದರ ಸಮಾಜ ನಿರ್ಮಾಣಕ್ಕೆ ಮಠಗಳು ಮುಂದಾಗಬೇಕೆಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.

ತಾಲೂಕಿನ ಮುನ್ಯಾಳ- ರಂಗಾಪೂರ ಮಠದಲ್ಲಿ ಶನಿವಾರ ನೂತನವಾಗಿ ಅಸ್ತಿತ್ವಕ್ಕೆ ಬಂದ ಅರಭಾವಿ ಮತಕ್ಷೇತ್ರದ ಮಠಾಧೀಶರ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಠ- ಮಾನ್ಯಗಳಿಂದ ಮಾತ್ರ ಸಮಾಜ ಪ್ರಗತಿ ಸಾಧಿಸಲಿಕ್ಕೆ ಸಾಧ್ಯವಿದೆ. ಸಮಾಜದ ಪರಿವರ್ತನೆಯಲ್ಲಿ ಮಠಾಧೀಶರ ಪಾತ್ರ ಮಹತ್ವದ್ದಾಗಿದ್ದು., ಈ ದಿಸೆಯಲ್ಲಿ ಅಸ್ತಿತ್ವಕ್ಕೆ ಬಂದಿರುವ ಮಠಾಧೀಶರ ವೇದಿಕೆಗೆ ಸಂಪೂರ್ಣ ಸಹಾಯ, ಸಹಕಾರವನ್ನು ನೀಡುತ್ತೇನೆ. ಎಲ್ಲ ಪೂಜ್ಯರು ಸೇರಿಕೊಂಡು ಮಠಾಧೀಶರ ವೇದಿಕೆಯನ್ನು ಹುಟ್ಟುಹಾಕಿರುವುದು ಒಳ್ಳೆಯ ಬೆಳವಣಿಗೆ. ಈ ಹಿಂದೆಯೇ ಗೋಕಾಕದಲ್ಲಿ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಇಂಥದ್ದೊಂದು ವೇದಿಕೆಯು ನಿರ್ಮಾಣವಾಗಿದ್ದನ್ನು ಸ್ಮರಿಸಿದ ಅವರು, ಮೂಡಲಗಿ ತಾಲೂಕಿನ ಮಠಾಧೀಶರ ವೇದಿಕೆಗೆ ಸದಾ ತಮ್ಮ ಮಾರ್ಗದರ್ಶನವು ಅವಶ್ಯವಾಗಿದೆ ಎಂದು ಶ್ರೀಗಳನ್ನು ಕೋರಿದರು.

ಸಾನಿಧ್ಯವನ್ನು ಗೋಕಾಕ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು. ಮಠಾಧೀಶರ ವೇದಿಕೆಯ ಅಧ್ಯಕ್ಷ, ಮುನ್ಯಾಳ- ರಂಗಾಪೂರ ಮಠದ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ಮಠ- ಮಂದಿರಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯವೆಂದರು.

ಹುಣಶ್ಯಾಳ ಪಿ.ಜಿ ಕೈವಲ್ಯಾಶ್ರಮದ ನಿಜಗುಣ ದೇವರು, ವೇದಿಕೆಯ ಸದುದ್ದೇಶಗಳನ್ನು ವಿವರಿಸಿದರು. ‌ನೂತನ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ಸುಣಧೋಳಿಯ ಶಿವಾನಂದ ಮಹಾಸ್ವಾಮಿಗಳು, ಹೊಸ ಯರಗುದ್ರಿಯ ಸಿದ್ಧಪ್ರಭು ಶಿವಾಚಾರ್ಯ ಮಹಾಸ್ವಾಮಿಗಳು, ಮನ್ನಿಕೇರಿಯ ವಿಜಯಸಿದ್ದೇಶ್ವರ ಮಹಾಸ್ವಾಮಿಗಳು, ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು, ಯಾದವಾಡ ಚಕ್ರೇಶ್ವರ ದೇವರು ಹಡಗಿನಾಳದ ಮುತ್ತೇಶ್ವರ ಸ್ವಾಮಿಗಳು, ಜೋಕ್ಕಾನಟ್ಟಿಯ ಬಿಳಿಯಾನ ಸಿದ್ಧ ಸ್ವಾಮಿಗಳು, ಬಸವಾನಂದ ಸ್ವಾಮಿಗಳು, ಗುರುಬಸವ ಸ್ವಾಮಿಗಳು, ನಾಗನೂರಿನ ಡಾ.ಕಾವ್ಯಶ್ರೀ ಅಮ್ಮನವರು, ಕಪರಟ್ಟಿಯ ಬಸವರಾಜ ಸ್ವಾಮಿಗಳು ಸೇರಿದಂತೆ ಅರಭಾವಿ ಕ್ಷೇತ್ರದ ಅನೇಕ ಮಠಾಧೀಶರು ಉಪಸ್ಥಿತರಿದ್ದರು.

ಅರಭಾವಿ ಕ್ಷೇತ್ರದ ಮಠಾಧಿಪತಿಗಳ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ಕೋಟ್‌

ಮಠಾಧೀಶರ ವೇದಿಕೆಯು ಸಮಾಜಮುಖಿಯಾಗಿ ಕೆಲಸ ಮಾಡಲಿ. ಸ್ವಾಮಿಗಳು ನಿಜವಾದ ಸಮಾಜ ಸೇವಕರು. ಪ್ರತಿ ಗ್ರಾಮಗಳಿಗೆ ತೆರಳಿ ಗ್ರಾಮಗಳ ನೈರ್ಮಲ್ಯಿಕರಣಕ್ಕೆ ಆದ್ಯತೆ ನೀಡಬೇಕು. ಪ್ರಸಂಗ ಬಂದರೆ ಕಸಗೂಡಿಸಲಿಕ್ಕೆ ಹಿಂಜರಿಯಬಾರದು. ಬಡ ವಿದ್ಯಾರ್ಥಿಗಳನ್ನು ದತ್ತು ಪಡೆದುಕೊಂಡು ಉತ್ತಮ ಶಿಕ್ಷಣ, ಸಂಸ್ಕಾರ, ಆಚಾರ, ವಿಚಾರಗಳನ್ನು ನೀಡಬೇಕು. ಕೊಪ್ಪಳ ಗವಿ ಸಿದ್ಧೇಶ್ವರ ಮಹಾಸ್ವಾಮಿಗಳ ಮಾದರಿಯಲ್ಲಿ ಸಮಾಜ ಸೇವೆ ಮಾಡಬೇಕು.

-ಮುರುಘರಾಜೇಂದ್ರ ಮಹಾಸ್ವಾಮೀಜಿ, ಪೀಠಾಧಿಪತಿ, ಶೂನ್ಯ ಸಂಪಾದನ ಮಠ, ಗೋಕಾಕ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ