ಕನ್ನಡಪ್ರಭ ವಾರ್ತೆ ಹೊಳಲ್ಕೆರೆ
ಚಿಕ್ಕಮಗಳೂರು ವ್ಯಾಪ್ತಿಗೆ ಬರುವ ಅಜ್ಜಂಪುರ ಸಮೀಪದ ಅಬ್ಬಿನಹೊಳಲು ಮತ್ತು ಹೆಗಡೆಹಳ್ಳಿ, ಹೆಬ್ಬೂರು ಗ್ರಾಮಗಳಲ್ಲಿ ಭದ್ರಾ ಮೇಲ್ದಂಡೆ ಕಾಮಗಾರಿಗಳನ್ನು ರೈತ ಮುಖಂಡರಾದ ಲವಕುಮಾರ್, ಮಂಜಣ್ಣ ನೇತೃತ್ವದಲ್ಲಿ ಗುರುವಾರ ವೀಕ್ಷಿಸಿ ಮಾತನಾಡಿದರು.
ಐದಾರು ವರ್ಷಗಳಿಂದ ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿ ಕುಂಟುತ್ತಾ ಸಾಗಿವೆ. ಇದು ರೈತ ಸಮುದಾಯದಲ್ಲಿ ಅಸಂತೋಷ ಉಂಟು ಮಾಡಿದೆ. ಯೋಜನಾ ಕಾಮಗಾರಿಗೆ ಸಂಬಧಿಸಿದ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಸಾವಿರಾರು ರೈತರೊಂದಿಗೆ ಅಗಸ್ಟ್ ತಿಂಗಳಿನಲ್ಲಿ ಕಾಮಗಾರಿಯನ್ನು ವೀಕ್ಷಿಸಿದ ಸಂದರ್ಭದಲ್ಲಿ ರೈತರು ಮತ್ತು ಅಧಿಕಾರಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದರು. ಆಗ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಲ್ಲಿ ಈ ವಿಚಾರ ಪ್ರಸ್ತಾಪ ಮಾಡಿ ಯೋಜನೆಗೆ ಅಡ್ಡಿಯಾಗಿರುವ ಪ್ರಕರಣಗಳನ್ನು ಕೂಡಲೇ ಬಗೆಹರಿಸಲು ತಿಳಿಸಲಾಗಿತ್ತು.ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಧೀಶರು ಪ್ರಕರಣವನ್ನು ಲೋಕ ಅದಾಲತ್ಗೆ ವರ್ಗಾಯಿಸಿದರು. ಬಳಿಕ ಈ ಕಾಮಗಾರಿಗೆ ಅಡ್ಡಿ ಮಾಡುತ್ತಿದ್ದ ರೈತರನ್ನು ಕರೆಸಿ ಚರ್ಚೆ ಮಾಡಿದ ನಂತರ ಸಮಸ್ಯೆಯನ್ನು ಬಗೆಹರಿಸಲಾಗಿತ್ತು ಎಂದು ಚಂದ್ರಪ್ಪ ಹೇಳಿದರು.
ಐದು ಜಿಲ್ಲೆಗಳಲ್ಲಿರುವ ರೈತರು ಭದ್ರಾ ಮೇಲ್ಡಂಡೆ ಯೋಜನೆಯಿಂದ ಅನುಕೂಲ ಪಡೆಯಲಿದ್ದಾರೆ. ಅವರಿಗೆ ನೆರವಾಗುವಂತೆ ನಾವು ಕೆಲಸ ಮಾಡಬೇಕಾಗಿದೆ. ಅಧಿಕಾರಿಗಳು ಈ ಯೋಜನೆಯ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿದರೆ ಯೋಜನಾ ವ್ಯಾಪ್ತಿಯಲ್ಲಿ ಬರುವ ರೈತರು ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ ಎಂದರು.
ಪರಮೇಶಣ್ಣ, ಚಂದ್ರಪ್ಪ, ಜಗದೀಶ್, ಚಂದ್ರಶೇಖರ್, ನಂದಕುಮಾರ್, ನಾಗರಾಜ್, ವಸಂತಕುಮಾರ್, ರಾಜಣ್ಣ, ಪ್ರಭಾಕರ್, ರೈತ ಸಂಘದ ಮುಖಂಡರಾದ ನಾಗರಾಜ್, ಶಿವಕುಮಾರ್, ಮಲ್ಲಿಕಾರ್ಜುನ್, ಕುರುಬ ಸಮಾಜದ ಅಧ್ಯಕ್ಷ ಹಳ್ಳಪ್ಪ, ರೈತರು ಹಾಜರಿದ್ದರು.