ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ರೈಮ್ ನಡೆದೇ ಇಲ್ವಾ ? ಸಮಯ ಬಂದಾಗ ಎಲ್ಲಾ ಅಂಕಿ ಸಂಖ್ಯೆ ಬಿಡುಗಡೆ ಮಾಡುತ್ತೇನೆ, ಎರಡು ಅವಧಿಯನ್ನು ಹೋಲಿಸಿ ನೋಡೋಣ ಎಂದವರು ಖಾರವಾಗಿ ಪ್ರತಿಕ್ರಿಯಿಸಿದರು.
ಈಗ ಕೊಲೆ ಆಗಬಾರದಿತ್ತು, ಆಗಿದೆ, ಯಾಕಾಗಿದೆ ಅನ್ನೋದನ್ನು ಎಲ್ಲರೂ ಗಮನಿಸಿದ್ದಾರೆ. ಬಿಜೆಪಿ ಅವಧಿಯಲ್ಲಿಯೂ ಕೊಲೆಗಳಾಗಿದ್ದವಲ್ಲಾ ? ಹಾಗೇ ಈಗ ರಾಜಕೀಯ ಉದ್ದೇಶಕ್ಕಾಗಿ ಯಾವುದೇ ಕೊಲೆ ಆಗಿಲ್ಲ, ಎಲ್ಲಾದರೂ ಕೋಮು ಗಲಭೆ ಆಗಿದೆಯಾ ? ಗಣೇಶ ಹಬ್ಬ, ರಂಜಾನ್ ಹಬ್ಬಗಳಲ್ಲಿ ಸಾಮಾನ್ಯವಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದವು. ಆದರೆ ಈಗ ಎಲ್ಲವೂ ಸುಖಕರವಾಗಿ ಮುಗಿದಿದೆ ಎಂದರು.ನಾಗೇಂದ್ರ ರಾಜೀನಾಮೆ ಕೇಳಿಲ್ಲ: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ರಾಜಿನಾಮೆ ನೀಡುವ ಬಗ್ಗೆ ಸಚಿವ ನಾಗೇಂದ್ರ ಅವರೇ ತೀರ್ಮಾನ ತೆಗೆದುಕೊಳ್ಳಬೇಕು, ಯಾರೂ ಕೂಡ ಒತ್ತಾಯ ಮಾಡಿ ರಾಜಿನಾಮೆ ಕೊಡಿ ಎಂದು ಹೇಳಲು ಆಗಲ್ಲ.
ಯಾರೂ ದೂರು ಕೊಟ್ಟಿಲ್ಲ: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದಲ್ಲಿ 100 ಕೋಟಿ ರು. ಹಗರಣ ನಡೆದಿದೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ. ಈ ಬಗ್ಗೆ ಯಾರೂ ನಮಗೆ ದೂರು ಕೊಟ್ಟಿಲ್ಲ, ಆರೋಪ ಮಾಡುತ್ತಿರುವ ಗೂಳಿಹಟ್ಟಿ ಶೇಖರ್ ಅವರೂ ನಮಗೆ ದೂರು ಕೊಟ್ಟರೂ ಸಾಕು, ಅದನ್ನೂ ತನಿಖೆ ಮಾಡುತ್ತೇವೆ ಎಂದರು.
ರಾಜ್ಯದ ಸಚಿವ ಸಂಪುಟ ವಿಸ್ತರಣೆ ಬಗ್ಗೆ, ಡಿಸಿಎಂ ಸ್ಥಾನಕ್ಕೆ ತನ್ನ ಹೆಸರು ಪ್ರಸ್ತಾಪ ಆಗಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಸ್ಪರ್ಧೆ, ರಾಜಕೀಯದ ತೀರ್ಮಾನಗಳನ್ನು ಅಧ್ಯಕ್ಷರು ಕೈಗೊಳ್ಳುತ್ತಾರೆ ಎಂದವರು ಪ್ರಶ್ನೆಗಳಿಗೆ ಉತ್ತರಿಸಿದರು.
ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸರ್ಕಾರ ಗ್ಯಾರಂಟಿ ಯೋಜನಗೆಳನ್ನು ರಾಜಕೀಯ ಉದ್ದೇಶಕ್ಕಾಗಿ ಜಾರಿಗೊಳಿಸಿದ್ದಲ್ಲ, ಆದರೆ ಚುನಾವಣೆಯಲ್ಲಿ ಸಹಾಯವಾಗುತ್ತದೆ ಎಂಬ ನಿರೀಕ್ಷೆ ಇತ್ತು. ಪಟ್ಟಣ ಪ್ರದೇಶದಲ್ಲಿ ಗ್ಯಾರಂಟಿ ಯೋಜನೆಗಳ ಅವಶ್ಯಕತೆ ಇದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಗ್ರಾಮೀಣ ಭಾಗದ ಜನಕ್ಕೆ ಈ ಯೋಜನೆ ಉಪಯೋಗವಾಗುತ್ತಿದೆ. ಗ್ಯಾರೆಂಟಿ ಯೋಜನೆಗಳ ಮುಂದುವರಿಕೆ ಜೊತೆ ಅಭಿವೃದ್ಧಿ ಕಾರ್ಯ ಕೂಡಾ ಮಾಡುತ್ತೇವೆ. ರಾಜ್ಯದ ಬಜೆಟ್ ಗಾತ್ರ ಹಿಗ್ಗಿದೆ. ಗ್ಯಾರಂಟಿ ಜೊತೆಗೆ ಅಭಿವೃದ್ಧಿಗೆ ಕೂಡ ಹಣಕಾಸಿನ ವ್ಯವಸ್ಥೆ ಕೂಡ ಆಗಿದೆ. ಆದ್ದರಿಂದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಡಾ.ಪರಮೇಶ್ವರ್ ಸ್ಪಷ್ಟಪಡಿಸಿದರು.