ಕನ್ನಡಪ್ರಭ ವಾರ್ತೆ ಉಡುಪಿ
ಮುಂದೊಂದು ದಿನ ವಿಶ್ವಾದ್ಯಂತ ಭಗವದ್ಗೀತಾ ಜಯಂತಿ ದಿನಾಚರಣೆ ನಡೆಯಲಿ. ಗೀತಾಚಾರ್ಯನ ನುಡಿಗಳು ನಡೆಯಲ್ಲಿ ಮೂಡಿ ಬರಲಿ ಎಂದು ಆಶಿಸಿದರು.ಪತಂಜಲಿಯ ಮಂಡಲ ಪ್ರಭಾರಿ ಶ್ರೀ ರಾಘವೇಂದ್ರ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಬೀಜ ಮಂತ್ರ ಸಹಿತವಾಗಿ ಅಷ್ಟ ಚಕ್ರದ ಧ್ಯಾನ ನಡೆಸಿಕೊಟ್ಟರು.ಪತಂಜಲಿ ಜಿಲ್ಲಾ ಪ್ರಭಾರಿ ಕೆ. ರಾಘವೇಂದ್ರ ಭಟ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಆರ್.ಜಿ. ಬಿರದಾರಣ್ಣ, ಶ್ರೀ ಕೃಷ್ಣ ಯೋಗ ಕೇಂದ್ರ ಬ್ರಹ್ಮಗಿರಿಯ ಅಮಿತ್ ಕುಮಾರ್ ಶೆಟ್ಟಿ, ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಬನ್ನಂಜೆಯ ರಾಜೇಶ್ ಶೆಟ್ಟಿ, ನಿರಂತರ ಯೋಗ ಕೇಂದ್ರ ಚಿಟ್ಪಾಡಿಯ ಮಮತಾ ಶೆಟ್ಟಿಗಾರ್ ಅವರನ್ನು ಹೂ ನೀಡಿ ಸ್ವಾಗತಿಸಿದರು.ಶ್ರೀ ಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯ, ರಮೇಶ್ ಭಟ್, ಪತಂಜಲಿಯ ಅಜೀವ ಸದಸ್ಯ ವಿಶ್ವನಾಥ್ ಭಟ್, ಪ್ರಭಾರಿಗಳಾದ ಅನಂತರಾಯ ಶೆಣೈ, ಜಗದೀಶ ಕುಮಾರ್, ಶ್ರೀಪತಿ ಭಟ್, ಲೀಲಾ ಆರ್. ಅಮೀನ್, ಗಿರೀಶ್, ರವೀಂದ್ರ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಂಜಿತ್ ಕೆ.ಎಸ್. ಕಾರ್ಯಕ್ರಮ ನಿರ್ವಹಿಸಿ, ಲಕ್ಷ್ಮಣ ಕಾಮತ್ ವಂದಿಸಿದರು.