- ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಯಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಆಗ್ರಹ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಸಮಿತಿ ಹಾಗೂ ಬಿಜೆಪಿ ಮುಖಂಡ ಎ.ಬಿ.ಹನುಮಂತಪ್ಪ ಮಾತನಾಡಿ, ಬಾಂಗ್ಲಾ ದೇಶದಲ್ಲಿ ರಾಜಕೀಯ ಅರಾಜಕತೆಯ ಹಿನ್ನೆಲೆ ಸಾಕಷ್ಟು ಗಲಭೆಗಳು ನಡೆಯುತ್ತಿವೆ. ಹಿಂದೂಗಳನ್ನು ಗುರಿಯಾಗಿಸಿಕೊಂಡು ಕೋಮುವಾದಿ ಮನಸ್ಸುಗಳು ಕಗ್ಗೊಲೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಹಿಂದೂ ಹೆಣ್ಣುಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯ ಖಂಡನೀಯ ಎಂದು ಹೇಳಿದರು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಕೊಲೆ, ಸುಲಿಗೆ ಹಾಗೂ ಅತ್ಯಾಚಾರಗಳು ನಡೆಯುತ್ತಿರುವುದು ಗಮನಿಸಿದರೆ 1947 ರಲ್ಲಿ ಪಾಕಿಸ್ತಾನದಲ್ಲಿ ನಡೆದ ಘಟನೆ ಮರುಕಳಿಸಿದಂತಾಗಿದೆ. ಯಾರೂ ಹಿಂದೂಗಳ ರಕ್ಷಣೆಗೆ ಬಾರದ ಹಿನ್ನೆಲೆ ಬಾಂಗ್ಲಾ ಹಿಂದೂಗಳೇ ತಮ್ಮ ಆತ್ಮರಕ್ಷಣೆಗೆ ಮಾಡಿಕೊಳ್ಳುತ್ತಿದ್ದಾರೆ. ಪ್ರಾಣಭಯದಿಂದ ನಲುಗುತ್ತಿದ್ದಾರೆ. ಬಹಳಷ್ಟು ಹಿಂದೂಗಳು ಬಾಂಗ್ಲಾ ಬಿಟ್ಟು ಭಾರತದ ಗಡಿಯಲ್ಲಿ ಪ್ರಾಣ ಉಳಿಸಿ ಎಂದು ಮನವಿ ಮಾಡುತ್ತಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಬಾಂಗ್ಲಾ ಹಿಂದೂಗಳ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಮಿತಿ ಸದಸ್ಯರು 1 ಗಂಟೆ ಕಾಲ ಮಾನವ ಸರಪಳಿ ನಿರ್ಮಿಸಿದರು. ಅಲ್ಲಿಂದ ತಾಲೂಕು ಕಚೇರಿವರೆಗೆ ಬಾಂಗ್ಲಾ ಕೋಮುವಾದಿಗಳ ವಿರುದ್ಧ ಧಿಕ್ಕಾರ ಕೂಗುತ್ತ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಉಪ ತಹಸೀಲ್ದಾರ್ ಸುಭಾಷ್ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು.
- - - -12ಎಚ್.ಎಲ್.ಐ3:
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಕಗ್ಗೊಲೆ ಹಾಗೂ ಅತ್ಯಾಚಾರ ಖಂಡಿಸಿ ಕೂಡಲೇ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿ ಹೊನ್ನಾಳಿ, ನ್ಯಾಮತಿ ಹಿಂದೂ ಹಿತರಕ್ಷಣಾ ಸಮಿತಿ ಸದಸ್ಯರು ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.