ಸಿಎಂ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ

KannadaprabhaNewsNetwork |  
Published : Oct 02, 2024, 01:08 AM IST
ಕೆಕೆಪಿ ಸುದ್ದಿ :02 : ಕನಕಪುರದಲ್ಲಿ ತಾಲ್ಲೂಕು ಪ್ರಗತಿಪರ ಹಾಗೂ ರೈತ ಸಂಘಟನೆ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಮಾತನಾಡಿದರು. | Kannada Prabha

ಸಾರಾಂಶ

ಕನಕಪುರ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರು ಭಾಗಿಯಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಹೇಳಿದರು.

ಕನಕಪುರ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರು ಭಾಗಿಯಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಹೇಳಿದರು.

ನಗರದ ರೈತ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದುವರೆಗಿನ ತಮ್ಮ ರಾಜಕೀಯ ಜೀವನ ತೆರೆದ ಹಾಳೆಯಂತೆ ಪರಿಶುದ್ಧವಾದುದು ಎಂದು ಸ್ವ-ಗುಣಗಾನ ಮಾಡಿಕೊಂಡು ಬರುತ್ತಿದ್ದ ಸಿದ್ದರಾಮಯ್ಯನವರ ಮುಖವಾಡ ಈಗ ಕಳಚಿ ಬಿದ್ದಿದೆ, ಇಷ್ಟು ದಿನ ಹಗರಣ ನಡೆದೇ ಇಲ್ಲ, ನೈಜ ಫಲಾನುಭವಿಯಾಗಿ ನಿಯಮಾನುಸಾರ ಸೈಟ್ ಪಡೆಯಲಾಗಿದೆ ಎಂದು ವಾದಿಸುತ್ತ ಬಂದಿದ್ದ ಮುಖ್ಯಮಂತ್ರಿಗಳು, ಸೋಮವಾರ ಶ್ರೀಮತಿ ಪಾರ್ವತಿ ಸಿದ್ದರಾಮಯ್ಯ ನವರು 14 ಸೈಟ್ ಹಿಂದಿರುಗಿಸುವುಗಾಗಿ ಪತ್ರ ಬರೆದಿರುವುದೇತಕೆ ? ಇದು ತಪ್ಪು ಒಪ್ಪುಕೊಂಡಂತಾಗಿದೆಯಲ್ಲವೇ ? ಇದೊಂತರ ಮಾಲು ಸಹಿತ ಕಳ್ಳ ಸಿಕ್ಕಂತಾಯಿತು ಅಲ್ಲವೇ ಎಂದ ಅವರು, ಮುಖ್ಯಮತ್ರಿಗಳು ನೈತಿಕ ಹೊಣೆ ಹೊತ್ತು ಅಪರಾಧವನ್ನು ಒಪ್ಪಿಕೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯದ ಜನರ ಬಳಿ ಕ್ಷಮೆ ಯಾಚಿಸುವುದೇ ಈಗ ಉಳಿದಿರುವ ಮಾರ್ಗ ಎಂದರು.

ಹಿಂದೆ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಆಡಳಿತ ಪಕ್ಷದ ಸಚಿವರ ಮೇಲೆ ಆರೋಪ ಕೇಳಿ ಬಂದಾಗ ರಾಜೀನಾಮೆ ನೀಡುವಂತೆ ಅಬ್ಬರಿಸುತ್ತಿದ್ದರು. ಇಂದು ಅವರ ಮೇಲಿನ ಆರೋಪ ಸಾಬೀತಾದರೂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳುತ್ತಿರುವುದು, ಅವರ ಅಧಿಕಾರದ ಲಾಲಸೆ ಸಾಬೀತುಪಡಿಸುತ್ತದೆ‌ ಎಂದು ಕಿಡಿಕಾರಿದರು.

ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ಮುಖ್ಯಮಂತ್ರಿಗಳ ಮೇಲೆ ಆರೋಪ ಬಂದ ದಿನದಿಂದ ಎದುರಾಳಿಗಳ ಮೇಲೆ ದ್ವೇಷದ ರಾಜಕಾರಣ ಮಾಡುತ್ತಾ ಈಗಾಗಲೇ ಕೇಂದ್ರ ಮಂತ್ರಿ ನಿರ್ಮಲಾ ಸೀತಾರಾಮನ್ ರವರ ಮೇಲೂ ಎಫ್‌ಐಆರ್ ದಾಖಲಿಸಲಾಗಿದೆ. ನಾವು ಅವರ ರಾಜೀನಾಮೆಗೂ ಆಗ್ರಹಿಸಿದ್ದು, ಕುಮಾರಸ್ವಾಮಿಯವರ ಮೇಲೆ ಸಹ ಆರೋಪ ಮಾಡಿದ್ದು, ಅವರ ಮೇಲೆ ಎಫ್‌ಐಆರ್ ದಾಖಲಾದರೆ ನಮ್ಮ ಸಂಘಟನೆ ಅವರ ರಾಜೀನಾಮೆಗೂ ಆಗ್ರಹಿಸುತ್ತದೆ ಎಂದು ತಿಳಿಸಿದರು.

ಕಂದಾಯ ಇಲಾಖೆಯ ಅಧಿಕಾರಿಗಳು ಕಳೆದ 5 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಸಾಮಾನ್ಯ ಜನರು, ರೈತರು ದಿನಂಪ್ರತಿ ತಾಲೂಕು ಕಚೇರಿಗಳಿಗೆ ಎಡೆತಾಕುತ್ತಿದ್ದು ಹಣ, ಸಮಯ ವ್ಯರ್ಥವಾಗುತ್ತಿರುವುದಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ‌. ಆದರೆ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಅದರ ಅರಿವೇ ಇಲ್ಲ. ಇದು ಹೀಗೆಯೇ ಮುಂದುವರೆದರೆ ರಾಜ್ಯದ ಕೋಟ್ಯಾಂತರ ಜನರ ಪಾಡೇನು ? ಈಗಲೂ ಸರ್ಕಾರ ಇದೇ ನಿರ್ಲಕ್ಷ್ಯ ವಹಿಸಿದರೆ ಜನ ಬೀದಿಗಿಳಿದು ಕಲ್ಲು ಹೊಡೆಯುವ ದಿನ ದೂರ ಉಳಿದಿಲ್ಲ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ, ಸ್ವತಂತ್ರ ಕರ್ನಾಟಕ ರಕ್ಷಣ ವೇದಿಕೆಯ ಕನ್ನಡ ಭಾಸ್ಕರ್ ಸೇರಿದಂತೆ ಹಲವು ಮುಖಂಡರು ಈ ವೇಳೆ ಹಾಜರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...