ಕನ್ನಡಪ್ರಭ ವಾರ್ತೆ ವಿಜಯಪುರ
ಕರ್ನಾಟಕ ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಹಿಂದೆ ಬಂಗಾರಪ್ಪನವರು ಸಿಎಂ ಆಗಿದ್ದಾಗ ಕಾವೇರಿ ನೀರು ತಮಿಳುನಾಡಿಗೆ ಬಿಡುವುದಿಲ್ಲ ಎಂದಿದ್ದರು. ನಮ್ಮ ರಾಜ್ಯದ ರೈತರ ಸಮಸ್ಯೆ ನೋಡಬೇಕಲ್ಲ. ಕಾವೇರಿ ಕೊಳ್ಳದ ನೀರಿನ ಲಭ್ಯತೆ ಕುರಿತು ಅಧ್ಯಯನ ಸಮಿತಿ ಮಾಡಲಿ. ಎಷ್ಟು ನೀರಿದೆ, ಕರ್ನಾಟಕ್ಕೆ ಎಷ್ಟು ಬೇಕು, ಕುಡಿಯುವ ನೀರಿನ ಯೋಜನೆಗೆ ಎಷ್ಟು ಬೇಕು ಎಂದು ಲೆಕ್ಕ ಹಾಕಬೇಕೆಂದು ಒತ್ತಾಯಿಸಿದರು.
ಉತ್ತಮ ಮಳೆಯಾದರೆ ಸಮಸ್ಯೆಯಿಲ್ಲ, ಮಳೆ ಕಡಿಮೆಯಾದಾಗ ಲೆಕ್ಕ ಹಾಕಬೇಕು. ನ್ಯಾಯಾಧೀಕರಣವೇ ಒಂದು ಸಮಿತಿ ಮಾಡಬೇಕು, ನೀರಿನ ಲಭ್ಯತೆ ಆಧಾರದ ಮೇಲೆ ಎಷ್ಟು ನೀರು ಬಿಡಬೇಕೆಂದು ತಿಳಿಸಬೇಕು. ನೀರಿನ ಲಭ್ಯತೆ ಮೇಲೆ ತಮಿಳುನಾಡಿಗೆ ನೀಡು ಬಿಡಬೇಕು. ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಸರಿಯಾದ ಸಂವಹನ, ವಾದ ಮಂಡನೆ ಆಗುತ್ತಿಲ್ಲ. ಈ ಕಾರಣದಿಂದ ರಾಜ್ಯಕ್ಕೆ ವ್ಯತರಿಕ್ತ ತೀರ್ಪು ಬರುತ್ತಿದೆ, ತಮಿಳುನಾಡಿನಲ್ಲಿ ಕಾಂಗ್ರೆಸ್ ಬಿಟ್ಟು ಎಲ್ಲ ಹೋಗಿದ್ದಾರೆ.ಹಾಗಾಗಿ ಈಗಿರುವ ಸಿಎಂ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆಂದು ಶಾಸಕ ಯತ್ನಾಳ ವ್ಯಂಗ್ಯವಾಡಿದರು.ರಾಜ್ಯದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ಎರಡೂ ಸತ್ತಂತಾಗಿವೆ. ಬಿಡದಿ ಟೌನ್ಶಿಪ್ ಯೋಜನೆಯಲ್ಲಿ ರಾಜಕಾರಣಿಗಳ ಬೇನಾಮಿ ಜಮೀನುಗಳಿವೆ. ಬ್ಲಾಕ್ ಮನಿಯನ್ನು ವೈಟ್ ಮನಿಯನ್ನಾಗಿ ಮಾಡಲು ಜಮೀನುಗಳನ್ನು ಕೆಐಎಡಿಬಿಗೆ ನೀಡಲಾಗುತ್ತಿದೆ. ಬಿಡದಿ ರೈತರು ಹೈನುಗಾರಿಕೆ, ತೋಟಗಾರಿಕೆಯಿಂದ ಸ್ವಾವಲಂಬಿಗಳಾಗಿದ್ದಾರೆ. ಬಲವಂತವಾಗಿ ರೈತರ ಜಮೀನುಗಳನ್ನು ಸರ್ಕಾರ ಪಡೆದುಕೊಳ್ಳುತ್ತಿದೆ. ಬಿಡದಿ ಟೌನ್ಶಿಪ್ ಯೋಜನೆ ರಾಬರ್ಟ್ ವಾದ್ರಾಗೆ ಲಾಭವಾಗುವ ಯೋಜನೆ ಎಂದು ಆರೋಪಿಸಿದ ಅವರು, ಸಿದ್ದರಾಮಯ್ಯ ಬದಲಾಗಿ ಡಿ.ಕೆ.ಶಿವಕುಮಾರ್ ಸಿಎಂ ಆದ ಕಾರಣ ಆಸ್ತಿ ಒಪ್ಪಂದ ನಡೆದಿದೆ ಎಂಬ ಮಾಹಿತಿಯಿದೆ ಎಂದು ಯತ್ನಾಳ ಹೇಳಿದರು.
ವಿಜಯ ದಶಮಿಯೊಳಗೆ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: