ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಲೂಟಿಕೋರರು ರಾಜ್ಯದ ಅನುದಾನ ಲೂಟಿ ಮಾಡಿದ್ದು, ಸಂಪನ್ಮೂಲ ಸೋರಿಕೆಯನ್ನೂ ತಡೆಯಲಿಲ್ಲ. ಸ್ವಯಂ ಘೋಷಿತ ಆರ್ಥಿಕ ತಜ್ಞ, ಅಹಿಂದ ನಾಯಕನೆಂದು ತಮ್ಮನ್ನು ತಾವು ಕರೆದುಕೊಳ್ಳುವ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ನಿಮಗೆ ಸಾಮರ್ಥ್ಯವಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿದು, ಹೊಸದಾಗಿ ಜನಾದೇಶ ಪಡೆಯಿರಿ ನೋಡೋಣ ಎಂದು ಸವಾಲು ಹಾಕಿದರು.
ವಾಲ್ಮೀಕಿ ನಿಗಮ, ಮುಡಾ ಹಗರಣ, ಭ್ರಷ್ಟಾಚಾರದ ಆರೋಪದ ಹಿನ್ನೆಲೆ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವಿಚಾರ ತೇಲಿ ಬಿಟ್ಟಿದ್ದಾರೆ. ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ. ಆದರೆ, ಅವೈಜ್ಞಾನಿಕ ಗಣತಿಗೆ ನಮ್ಮ ವಿರೋಧವಿದೆ. ನಮ್ಮ ಯಾರ ಮನೆಗೂ ಬಂದು ಗಣತಿಯನ್ನೇ ಮಾಡಿಲ್ಲ. ಇಂತಹ ಗಣತಿಯನ್ನು ಹೇಗೆ ಒಪ್ಪಲು ಸಾಧ್ಯ? ಕಾಂತರಾಜ್ ಆಯೋಗದ ವರದಿ ಸ್ವೀಕರಿಸಿದಾಗಲೇ ಯಾಕೆ ಅಂಗೀಕರಿಸಲಿಲ್ಲ? ಈಗ ನಿಮ್ಮ ಕುರ್ಚಿ ಬುಡಕ್ಕೆ ಆರೋಪಗಳು ಬಂದಾಗ ಜಾತಿ ಗಣತಿ ನೆನಪಾಯಿತೆ ಎಂದು ಅವರು ಪ್ರಶ್ನಿಸಿದರು.ಸಿಎಂ ಸಿದ್ದರಾಮಯ್ಯನವರೆ ನಿಮ್ಮ ಮೇಲೆ ಆರೋಪಗಳನ್ನು ಮರೆ ಮಾಚಲು ಕೇಂದ್ರದ ವಿರುದ್ಧ ತೆರಿಗೆ ಹಣ ಕೊಟ್ಟಿಲ್ಲವೆಂದು ಸುಳ್ಳು ಆರೋಪ ಮಾಡಿ, ಜನರನ್ನು ಪ್ರಚೋದಿಸುವುದು, ಕೇಂದ್ರದ ವಿರುದ್ಧ ಸಂಘರ್ಷ ಮಾಡುವುದನ್ನು ಮೊದಲು ಬಿಡಿ. ತೆರಿಗೆ ಪಾಲಿನ ಹಣ ನೀಡಿಲ್ಲವೆಂದು ಹೇಳುವ ಮೊದಲು ಕೇಂದ್ರದಿಂದ ವಿವಿಧ ಯೋಜನೆಗಳಡಿ ಬಂದ ಅನುದಾನದ ಬಗ್ಗೆಯೂ ನೀವು ನಾಡಿನ ಜನತೆಗೆ ತಿಳಿಸಬೇಕಲ್ಲವೇ? ಬಂದ ಅನುದಾನದ ಬಗ್ಗೆಯೂ ಮೊದಲು ಮಾತನಾಡಿ. ಹಿಂದೆ ಬಿಜೆಪಿ ಸರ್ಕಾರ ಅಭಿವೃದ್ಧಿಗೆ ನೀಡಿದ ಅನುದಾನವನ್ನೇ ಬೇರೆಯದ್ದಕ್ಕೆ ಬಳಕೆ ಮಾಡಿದ ಆಡಳಿತ ನಿಮ್ಮದು ಎಂದು ಅವರು ಟೀಕಿಸಿದರು.
ಪಿಎಫ್ಐ, ಕೆಎಫ್ಡಿ ಸಂಘಟನೆಗಳ ಮೇಲಿನ ಕೇಸ್ಗಳನ್ನು ದಾಖಲಿಸಿದ್ದು, ಅವುಗಳಲ್ಲಿದ್ದವರು ನಿಮ್ಮ ಬ್ರದರ್ಸ್ಗಳಾ? ಮತಾಂಧ ದಾಳಿಕೋರರ ಮೇಲಿನ ಕೇಸ್ ಹಿಂಪಡೆಯುವ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಮೇಲಿನ ಕೇಸ್ ಹಿಂಪಡೆದಿಲ್ಲ. ಇದೇ ಧೋರಣೆ ಮುಂದುವರಿದರೆ ಹಿಂದು ಸಂಘಟನೆಗಳ ಕಾರ್ಯಕರ್ತರ ಹಂತಕರ ಮೇಲಿನ ಕೇಸ್ಗಳನ್ನೂ ಕಾಂಗ್ರೆಸ್ ಸರ್ಕಾರ ಹಿಂಪಡೆದರೆ ಅಚ್ಚರಿಪಡಬೇಕಿಲ್ಲ ಎಂದರು.
ಈ ವೇಳೆ ಬಿಜೆಪಿ ಮುಖಂಡರಾದ ಮಾಡಾಳ ಮಲ್ಲಿಕಾರ್ಜುನ, ಬಿ.ಜಿ.ಅಜಯಕುಮಾರ, ಲೋಕಿಕೆರೆ ನಾಗರಾಜ, ವಾಟರ್ ಮಂಜುನಾಥ, ಎನ್.ಎಚ್.ಹಾಲೇಶ, ಸುಣಗೆರೆ ಕುಮಾರ, ಮಲ್ಲಿಕಾರ್ಜುನ ಇತರರು ಇದ್ದರು.
ಅಸಮರ್ಥ ಗೃಹಮಂತ್ರಿ ಡಾ.ಜಿ.ಪರಮೇಶ್ವರ, ಹುಬ್ಬಳ್ಳಿ ಕೇಸ್ಗಳನ್ನು ಹಿಂಪಡೆಯುವ ಸಿಎಂ ಸಿದ್ದರಾಮಯ್ಯ, ಮತಾಂಧ ಗಲಭೆಕೋರರರನ್ನು ತಮ್ಮ ಬ್ರದರ್ಸ್ ಎನ್ನುವ ಡಿಸಿಎಂ ಡಿ.ಕೆ.ಶಿವಕುಮಾರಂತಹವರಿಗೆ ಜನರೇ ಪಾಠ ಕಲಿಸಲಿದ್ದಾರೆ
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂಪರ್ ಸಿಎಂ ಎಂಬಂತೆ ವರ್ತಿಸುವ ಸಚಿವ ಪ್ರಿಯಾಂಕ ಖರ್ಗೆ ಅವದಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇದೆಯೋ, ಸತ್ತಿದೆಯೋ ಗೊತ್ತಾಗುತ್ತಿಲ್ಲ ಎಂದರು.