ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಪ್ರಸ್ತಾಪಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ಷೇಪ । ಅಲ್ಪಸಂಖ್ಯಾತರ ಓಲೈಕೆಗೆ ಟಿಪ್ಪು ಜಪ
ಟಿಪ್ಪು, ಬಾಬರ್, ಔರಂಗಜೇಬ, ಘಜ್ನಿ ಮಹಮ್ಮದ್ ಹೆಸರುಗಳು ಮಾತ್ರವೇ ಕಾಂಗ್ರೆಸ್ಸಿಗರ ನೆನಪಿಗೆ ಬರುತ್ತಿದ್ದು, ಇದೇ ಕಾರಣಕ್ಕೆ ಕಾಂಗ್ರೆಸ್ ನ ಸಚಿವರು ಟಿಪ್ಪು ಹೆಸರನ್ನೇ ಜಪ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸಚಿವರು ತಮ್ಮ ಮನೆಗಳಿಗೆ ಟಿಪ್ಪು ಮಂಜಿಲ್, ಔರಂಗಜೇಬ್ ಮಂಜಿಲ್ ಅಥವಾ ನಿವಾಸ ಅಂತಾ ಹೆಸರಿಟ್ಟುಕೊಳ್ಳಲಿ. ಆದರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ನಾವು ತೀವ್ರವಾಗಿ ಖಂಡಿಸುತ್ತೇವೆ. ಓಟು ಬ್ಯಾಂಕ್ಗಾಗಿ ಅಲ್ಪಸಂಖ್ಯಾತರ ಓಲೈಕೆಗಾಗಿ ಟಿಪ್ಪು ಜಪ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.ಕುಕ್ಕರ್ ಬ್ಲಾಸ್ಟ್ ಆದಾಗ ಅಲ್ಪಸಂಖ್ಯಾತರು ತಮ್ಮ ಸಹೋದರರೆಂದು ಇದೇ ಡಿಸಿಎಂ ಡಿ.ಕೆ.ಶಿವಕುಮಾರ ಹೇಳುತ್ತಾರೆ. ಮೈಸೂರು ಮಹಾರಾಜ, ಸುತ್ತೂರು ಶ್ರೀಗಳಂತಹವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಿ. ಆದರೆ, ಓಟು ಬ್ಯಾಂಕ್ಗಾಗಿ ಟಿಪ್ಪುನಂತಹ ಮತಾಂಧರ ಹೆಸರಿಡುವುದಲ್ಲ. ಯಾವುದೇ ಕಾರಣಕ್ಕೂ ಟಿಪ್ಪು ಹೆಸರಿಡಲು ನಾವು ಬಿಡುವುದೂ ಇಲ್ಲ ಎಂದು ಆಕ್ರೋಶ ಹೊರ ಹಾಕಿದರು. ಘೋಷಣೆ, ಭರವಸೆಗಳು ಮಾತಿಗೆ ಸೀಮಿತ:
ಡಿಕೆಶಿಯಿಂದ ಔತಣಕ್ಕೆ ಆಹ್ವಾನ:
ನಂತರ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನೇಕಾರ ಸಮಾಜ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಬ್ಯಾಟಿಂಗ್ ಮಾಡುವ ಮೂಲಕ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಉದ್ಘಾಟಿಸಿದರು. ಬಿಜೆಪಿ ಹಿರಿಯ ಮುಖಂಡ ಕಕ್ಕರಗೊಳ್ಳ ಕೆ.ಪಿ.ಕಲ್ಲಿಂಗಪ್ಪ, ಪ್ರವೀಣ ಜಾಧವ್, ರಾಜು ವೀರಣ್ಣ, ಅಣಜಿ ಬಸವರಾಜ ಇತರರಿದ್ದರು.
ಯತ್ನಾಳ್ ಹುಚ್ಚುನಾಯಿ ಇದ್ದಂತೆ, ನಾಯಿ ನಿಯತ್ತೂ ಇಲ್ಲದ ವ್ಯಕ್ತಿ
ದಾವಣಗೆರೆ: ಬಸವನಗೌಡ ಪಾಟೀಲ್ ಯತ್ನಾಳ್ ಒಂದು ಹುಚ್ಚುನಾಯಿ ಇದ್ದಂತೆ, ಯತ್ನಾಳ್ ಬಗ್ಗೆ ಮಾತನಾಡುವುದಕ್ಕೂ ನನಗೆ ಅಸಹ್ಯವೆನಿಸುತ್ತದೆ. ನಾಯಿಗೆ ಇರುವ ನಿಯತ್ತೂ ಯತ್ನಾಳ್ಗೆ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹರಿಹಾಯ್ದಿದ್ದಾರೆ.
ವಿಜಯೇಂದ್ರ, ಯಡಿಯೂರಪ್ಪಗೆ ಟೀಕೆ ಮಾಡಿದರೆ ಅದು ನರೇಂದ್ರ ಮೋದಿ ಸೇರಿ ಕೇಂದ್ರ ವರಿಷ್ಠರ ಟೀಕಿಸಿದಂತೆ. ಯಡಿಯೂರಪ್ಪ ಆನೆ ಇದ್ದಂತೆ. ಬಿಎಸ್ವೈ ಬಗ್ಗೆ ಮಾತನಾಡೋರು ಹುಚ್ಚುನಾಯಿ ಇದ್ದಂತೆ. ಹುಚ್ಚುನಾಯಿ ಬಗ್ಗೆ ಮಾತನಾಡುವುದೂ ವ್ಯರ್ಥ. ಇನ್ನು ಆ ಹುಚ್ಚು ನಾಯಿ ಬಗ್ಗೆ ಮಾತನಾಡಬಾರದೆಂದುಕೊಂಡಿದ್ದೇನೆ ಎಂದರು.
ಯತ್ನಾಳ್ ಎನ್ನುವ ಆ ಮನುಷ್ಯನಿಗೆ ನಿಯತ್ತಿಲ್ಲ
ಜೆಡಿಎಸ್ಗೆ ಹೋಗಿದ್ದ ಯತ್ನಾಳ್ ಗೆ ಮತ್ತೆ ಬಿಜೆಪಿಗೆ ಕರೆ ತಂದಿದ್ದೇ ಯಡಿಯೂರಪ್ಪ. ಮಾತೃಪಕ್ಷಕ್ಕೆ ವಾಪಸ್ ಕರೆ ತಂದ ವ್ಯಕ್ತಿಯ ಬಗ್ಗೆಯೇ ಹಾದಿ ಬೀದಿಯಲ್ಲಿ ಹಗುರವಾಗಿ ಮಾತನಾಡುವ ಯತ್ನಾಳ್ ಎನ್ನುವ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ. ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ