ಸಹಕಾರಿ ಸಂಘಗಳು ರೈತರ ಹಿತ ಕಾಪಾಡುವಂತಾಗಲಿ

KannadaprabhaNewsNetwork |  
Published : Nov 17, 2024, 01:19 AM IST
71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ಶಾಸಕ ಬಸವರಾಜ ವಿ.ಶಿವಗಂಗಾ | Kannada Prabha

ಸಾರಾಂಶ

ಚನ್ನಗಿರಿ: ಸಹಕಾರಿ ಕ್ಷೇತ್ರಗಳು ರೈತರುಗಳ ಜೀವನಾಡಿಯಾಗಿದ್ದು, ಸಹಕಾರಿ ಸಂಘಗಳಲ್ಲಿ ರಾಜಕೀಯವನ್ನು ಬೆರೆಸದೆ ರೈತರ ಹಿತವನ್ನು ಕಾಪಾಡುವಂತಾಗಬೇಕಾಗಿದೆ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು.

ಚನ್ನಗಿರಿ: ಸಹಕಾರಿ ಕ್ಷೇತ್ರಗಳು ರೈತರುಗಳ ಜೀವನಾಡಿಯಾಗಿದ್ದು, ಸಹಕಾರಿ ಸಂಘಗಳಲ್ಲಿ ರಾಜಕೀಯವನ್ನು ಬೆರೆಸದೆ ರೈತರ ಹಿತವನ್ನು ಕಾಪಾಡುವಂತಾಗಬೇಕಾಗಿದೆ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು.

ಶನಿವಾರ ಪಟ್ಟಣದ ಹೊರ ವಲಯದಲ್ಲಿರುವ ಶ್ರೀ ಚನ್ನಮ್ಮಾಜಿ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಸಹಕಾರ ಇಲಾಖೆ, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ, ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸಹಕಾರಿ ಹಾಲು ಒಕ್ಕೂಟ, ತುಮ್ ಕೋಸ್, ಟಿ.ಎ.ಪಿ.ಎಂ.ಎಸ್, ಪಿಕಾರ್ಡ ಬ್ಯಾಂಕ್, ಚನ್ನಗಿರಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ವಿವಿಧ ರೀತಿಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಚನ್ನಗಿರಿ ತಾಲೂಕಿನಲ್ಲಿ ಸಹಕಾರ ಸಂಘಗಳು ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಸಹಕಾರ ಸಂಘಗಳ ಆಡಳಿತ ಮಂಡಳಿಯ ಚುನಾವಣೆಯ ಸಂದರ್ಭದಲ್ಲಿ ರಾಜಕಾರಣವನ್ನು ಬೆರೆಸಿಕೊಳ್ಳದೆ ಸಂಘದ ಚುನಾವಣೆಗಳು ನಡೆಯಬೇಕಾಗಿದೆ ಎಂದರು.

ಸಹಕಾರ ಸಂಘಗಳು ರೈತರಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಇದ್ದು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ವ್ಯವಸಾಯ ಮಾಡಲು ಅನುಕೂಲಮಾಡಿಕೊಟ್ಟಿದೆ ಎಂದ ಅವರು, ಚನ್ನಗಿರಿ ತಾಲೂಕಿನಲ್ಲಿ ಅತಿ ಹೆಚ್ಚು ರೈತರಿಗೆ ಸಹಕಾರ ಸಂಘಗಳಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಜಿಲ್ಲಾ ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಷಣ್ಮುಖಪ್ಪ, ಜಿ.ಪಂ ಮಾಜಿ ಸದಸ್ಯ ತೇಜಸ್ವಿ ವಿ.ಪಟೇಲ್, ಜಿ.ಎನ್.ಸ್ವಾಮಿ, ಎಚ್.ಕೆ.ಬಸಪ್ಪ, ಕರಿಯಮ್ಮ, ಕರೇಗೌಡ, ಶಿಮೂಲ್ ಹಾಲು ಉದ್ಫಾದಕರ ಸಂಘದ ಉಪಾಧ್ಯಕ್ಷ ಚೇತನ್ ನಾಡಿಗ್, ವಿಜಯ ಲಕ್ಷ್ಮಿ, ಪಿ.ಎಲ್.ಡಿ ಬ್ಯಾಂಕ್ ನ ಅಧ್ಯಕ್ಷ ಗಂಗಗೊಂಡನಹಳ್ಳಿ ಜಗದೀಶ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ