ದತ್ತಾಂಶ ಸಂಗ್ರಹ ಕಾರ್ಯ ಇಂದೇ ಕೊನೆ ಆಗಲಿ

KannadaprabhaNewsNetwork |  
Published : Jun 22, 2025, 01:18 AM IST
ಮಾಜಿ ಸಚಿವ ಆಂಜನೇಯ ಸುದ್ದಿಗೋಷ್ಠಿ(ಕಡ್ಡಾಯ) | Kannada Prabha

ಸಾರಾಂಶ

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಆಂಜನೇಯ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಡೆಯುತ್ತಿರುವ ದತ್ತಾಂಸ ಸಂಗ್ರಹಣೆ ಕಾರ್ಯ ಜೂನ್ 21ಕ್ಕೆ ಅಂತಿಮಗೊಳಿಸಬೇಕು. ಯಾವುದೇ ಕಾರಣದಿಂದ ವಿಸ್ತರಣೆ ಮಾಡಬಾರದೆಂದು ಮಾಜಿ ಸಚಿವ ಎಚ್.ಆಂಜನೇಯ ಆಗ್ರಹಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಮೀಕ್ಷೆ ಕಾರ್ಯಕ್ಕೆ ತೀವ್ರ ಹಿನ್ನಡೆಯಾಗಿತ್ತು. ಹಾಗಾಗಿ ದಿನಾಂಕವನ್ನು ವಿಸ್ತರಿಸಲಾಗಿತ್ತು. ಇದೀಗ ಶೇ.90ರಷ್ಟು ಪೂರ್ಣಗೊಂಡಿರುವ ಮಾಹಿತಿ ಇದ್ದು ಇಷ್ಟಕ್ಕೆ ಗಣತಿ ನಿಲ್ಲಿಸಿ ವರದಿ ಸಲ್ಲಿಸುವ ಕಾರ್ಯವಾಗಬೇಕು. ಜು.15ರ ಒಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಒಳ ಮೀಸಲು ಜಾರಿಗೊಳಿಸಬೇಕು ಎಂದರು.

ಒಳ ಮೀಸಲು ಜಾರಿ ಸಂಬಂಧ ಸರ್ಕಾರಿ ಉದ್ಯೋಗದ ನೇಮಕಾತಿಗಳಿಗೆ ತಡೆ ನೀಡುವಂತೆ ಸಿಎಂ ಅವರನ್ನು ಕೋರಲಾಗಿತ್ತು. ನಮ್ಮ ಮಾತಿಗೆ ಮನ್ನಣೆ ನೀಡಲಾಗಿದೆ. ಹೊಸದಾಗಿ ಉದ್ಯೋಗ ನೇಮಕಾತಿ ಶುರು ಮಾಡಿದರೆ ವಯೋಮಿತಿ ಮೀರುವವರಿಗೆ ಒಂದು ವರ್ಷ ರಿಯಾಯಿತಿ ನೀಡುವಂತೆ ಕೂಡ ಮನವಿ ಮಾಡಿಕೊಳ್ಳಲಾಗಿದೆ ಎಂದು ಆಂಜನೇಯ ಹೇಳಿದರು.

ಸಮೀಕ್ಷಾ ಕಾರ್ಯದ ಅವಧಿಯನ್ನು ಮೂರು ಬಾರಿ ವಿಸ್ತರಣೆ ಮಾಡಲಾಗಿದೆ. ಬಹಳಷ್ಟು ಅವಕಾಶವನ್ನು ನ್ಯಾ.ನಾಗಮೋಹನ್ ದಾಸ್ ಆಯೋಗ ನೀಡಿದೆ. ಆದರೂ ಬೆಂಗಳೂರಂತ ಶಿಕ್ಷಿತರ ಪ್ರದೇಶದಲ್ಲಿ ಶೇ.50 ಆಗಿದ್ದು, ರಾಜ್ಯದ ಉಳಿದ ಪ್ರದೇಶಗಳಲ್ಲಿ ಶೇ.90ರಷ್ಟು ಸಮೀಕ್ಷೆ ಕಾರ್ಯ ಆಗಿದೆ. ಆದ್ದರಿಂದ ವಿಸ್ತರಣೆ ಮಾಡುವುದರಲ್ಲಿ ಅರ್ಥವಿಲ್ಲ. 12 ಸಾವಿರ ಮಂದಿ ಆನ್ಲೈನ್ ಮೂಲಕ ನೋಂದಣಿಗೆ ಪ್ರವೇಶ ಪಡೆದು, ಬಳಿಕ ಹಿಂದೆ ಸರಿದಿದ್ದಾರೆ. ಇವರಿಗೆ ಎಷ್ಟೇ ಸಮಯಾವಕಾಶ ನೀಡಿದರೂ ಅಷ್ಟೇ ಎಂದು ಬೇಸರ ವ್ಯಕ್ತಪಡಿಸಿದರು.

ಆಯೋಗವು ಸರ್ವೇ ಮಾಹಿತಿ ಪಡೆದು ಯಾವ ಜಾತಿ ಎಷ್ಟು ಸಂಖ್ಯೆಯಲ್ಲಿದೆ, ಅವರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಾಗೂ ಸರ್ಕಾರಿ-ಅರೇ ಸರ್ಕಾರಿ ಸಂಸ್ಥೆಗಳಲ್ಲಿ ಎಷ್ಟು ಮಂದಿ ಉದ್ಯೋಗಸ್ಥರು ಇದ್ದಾರೆಂಬ ಸಮಗ್ರ ದತ್ತಾಂಶದ ವರದಿಯನ್ನು ಸಿದ್ಧಪಡಿಸಿ ಈ ತಿಂಗಳ ಅಂತ್ಯದೊಳಗೆ ಸರ್ಕಾರಕ್ಕೆ ಸಲ್ಲಿಸಬೇಕು. ಸರ್ಕಾರ ಸಚಿವ ಸಂಪುಟದಲ್ಲಿ ಒಪ್ಪಿಗೆ, ಅಗತ್ಯವಿದ್ದರೇ ವಿಶೇಷ ವಿಧಾನಸಭೆ ಅಧಿವೇಶನ ಕರೆದು ಚರ್ಚಿಸಿ ಒಳಮೀಸಲಾತಿ ಅನುಷ್ಠಾನಕ್ಕೆ ಜುಲೈ 15ರೊಳಗೆ ಶಾಸನಾತ್ಮಕ ಕ್ರಮಕೈಗೊಳ್ಳಬೇಕು ಎಂದು ಆಂಜನೇಯ ಆಗ್ರಹಿಸಿದರು.

ಈ ವೇಳೆ ಜಿಪಂ ಮಾಜಿ ಸದಸ್ಯರಾದ ಬಿ.ಪಿ.ಪ್ರಕಾಶಮೂರ್ತಿ, ಆರ್.ನರಸಿಂಹರಾಜು, ಮುಖಂಡರಾದ ಟಿ.ಹನುಮಂತಪ್ಪ, ಮಜಾದ್ ಖಾನ್, ರವಿಚಂದ್ರ, ಬಂಜಗೊಂಡನಹಳ್ಳಿ ಜಯಪ್ಪ, ಶರಣಪ್ಪ, ಮಂಜುನಾಥ್ ಕುಂದವಾಡ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ