ಕನ್ನಡಪ್ರಭ ವಾರ್ತೆ, ಶಿಕಾರಿಪುರ
ತಾಲೂಕಿನ ಕಡೆನಂದಿಹಳ್ಳಿ ಶ್ರೀ ಮಳೆಮಲ್ಲೇಶ್ವರಸ್ವಾಮಿ ಜಾಗೃತ ಸ್ಥಳ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಶುಕ್ರವಾರ ಫೆ.2ರಿಂದ 13 ರವರೆಗೆ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಪ್ರಥಮ ಪ್ರಕಟಣೆ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅವರ 33ನೇ ವರ್ಷದ ಪೀಠಾರೋಹಣ ವರ್ಧಂತಿ ಮಹೋತ್ಸವ, ಶಿವಾನುಷ್ಠಾನ ಧ್ಯಾನ ಮಂದಿರ ಶಿಲಾ ಮಂಟಪ, ಶ್ರೀ ಜಗದ್ಗುರು ರೇಣುಕಾಚಾರ್ಯರ 36 ಅಡಿ ಎತ್ತರದ ಮೂರ್ತಿ ಲೋಕಾರ್ಪಣೆ, ಮಹಾಮಸ್ತಕಾಭಿಷೇಕ, ಶ್ರೀ ಜಗದ್ಗುರು ರೇಣುಕಾಚಾರ್ಯ ಪುರಾಣ ಪ್ರವಚನ, ಶ್ರೀ ರಂಭಾಪುರಿ ಜಗದ್ಗುರು ರೇವಣಸಿದ್ಧೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಹಾಗೂ ವಿವಿಧ ಸಾಂಸ್ಕೃತಿಕ ಧಾರ್ಮಿಕ ಸಮಾರಂಭಗಳನ್ನು ಫೆಬ್ರವರಿ 2ರಿಂದ 13ರವರೆಗೆ ಹಮ್ಮಿಕೊಳ್ಳಲಾಗಿದೆ. ಇದು ಹೆಮ್ಮೆಯ ಸಂಗತಿ. ವಿವಿಧ ಸೇವೆಗಳ ಅವಕಾಶ ಕಲ್ಪಿಸಲಾಗಿದ್ದು, ಸರ್ವ ಭಕ್ತರೂ ತನು ಮನ ಧನ ಸಹಾಯ ಮೂಲಕ ಕಾರ್ಯಕ್ರಮ ಯಶಸ್ವಿಗೆ ಮನವಿ ಮಾಡಿದರು.ಹಿರೇಕೆರೂರು ಶಾಸಕ ಯು.ಬಿ.ಬಣಕಾರ ಅವರು ವಾಲ್ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಜನಸಾಮಾನ್ಯರಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವಲ್ಲಿ ರೇವಣಸಿದ್ಧೇಶ್ವರ ಶಿವಾಚಾರ್ಯರು ನಿರಂತರ ಶ್ರಮಿಸುತ್ತಿರುವುದು ಭಕ್ತರ ಸೌಭಾಗ್ಯ ಎಂದರು.
ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು, ಸಿಂಧನೂರು- ಕನ್ನೂರು ಸೋಮನಾಥ ಶಿವಾಚಾರ್ಯ ಸ್ವಾಮಿಗಳು, ಚನ್ನೇಶ ಶಾಸ್ತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಗಣ್ಯರು ಇದ್ದರು.
- - - -22ಕೆಎಸ್ಕೆಪಿ2:ಶಿಕಾರಿಪುರ ತಾಲೂಕಿನ ಕಡೆನಂದಿಹಳ್ಳಿಯಲ್ಲಿ ಹಮ್ಮಿಕೊಳ್ಳಲಾದ ವಿವಿಧ ಧಾರ್ಮಿಕ ಕಾರ್ಯಕ್ರಮದ ಪ್ರಥಮ ಪ್ರಕಟಣೆ ಪತ್ರಿಕೆಯನ್ನು ಶುಕ್ರವಾರ ಸಂಸದ ರಾಘವೇಂದ್ರ ಬಿಡುಗಡೆಗೊಳಿಸಿದರು.