ಆರ್‌ಎಸ್‌ಎಸ್‌ ಮೇಲೆ ಇಡಿ ದಾಳಿ ನಡೆಯಲಿ: ತಂಗಡಗಿ

KannadaprabhaNewsNetwork |  
Published : Jul 12, 2026, 03:30 AM IST
11ಉಳಉ3 | Kannada Prabha

ಸಾರಾಂಶ

ರಾಜ್ಯದಲ್ಲಿ ಎಸ್‌ಐಆರ್‌ ಕಾರ್ಯ ಚೆನ್ನಾಗಿ ನಡೆದಿದೆ. ಇದರಿಂದ ಬಿಜೆಪಿಗೆ ಟೆನ್ಷನ್ ಶುರುವಾಗಿದೆ.

ಗಂಗಾವತಿ: ಆರ್‌ಎಸ್‌ಎಸ್‌ ಮೇಲೆ ಇಡಿ ದಾಳಿ ಮಾಡಿದಾಗ ಇವರ ನಾಟಕ ಬಯಲಾಗುತ್ತದೆ ಎಂದು ಶಾಸಕ ಶಿವರಾಜ ತಂಗಡಗಿ ಹೇಳಿದರು.

ನಗರದ ಐಎಂಎ ಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಸಂಘಟನೆಗೆ ಸಾವಿರಾರು ಕೋಟಿ ಹಣ ಎಲ್ಲಿಂದ ಬರುತ್ತದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಹೇಳಿದ ಅವರು, ಕರ್ನಾಟಕದಲ್ಲಿ ವೋಟ್ ಚೋರಿ ಮಾಡಲು ಆಗಲ್ಲ ಅಂತ ಬಿಜೆಪಿಗೆ ಟೆನ್ಷನ್ ಶುರುವಾಗಿದೆ ಎಂದರು.

ರಾಜ್ಯದಲ್ಲಿ ಎಸ್‌ಐಆರ್‌ ಕಾರ್ಯ ಚೆನ್ನಾಗಿ ನಡೆದಿದೆ. ಇದರಿಂದ ಬಿಜೆಪಿಗೆ ಟೆನ್ಷನ್ ಶುರುವಾಗಿದೆ. ಎಸ್‌ಐಆರ್‌ ಕಾಂಗ್ರೆಸ್‌ ಪಕ್ಷ ಮಾಡುತ್ತಿಲ್ಲ. ಚುನಾವಣಾ ಆಯೋಗ ಮಾಡುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕು ಸಿಗಬೇಕು ಎನ್ನುವುದು ನಮ್ಮ ವಾದವಾಗಿದೆ ಎಂದರು.

ಯಾವ ಹಂತದಲ್ಲಿ ರಾಜ್ಯ ಸರ್ಕಾರ ದುರಪಯೋಗ ಮಾಡುತ್ತಿದೆ ಎನ್ನುವುದರ ಬಗ್ಗೆ ಸಾಕ್ಷಿ ನೀಡಲಿ. ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಕುಮಾರಸ್ವಾಮಿ ಅವರು ವಿನಾ ಕಾರಣ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಪಶ್ಚಿಮ ಬಂಗಾಳ ಹಾಗೂ ಮದ್ಯಪ್ರದೇಶದಲ್ಲಿ 86 ಲಕ್ಷ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ್ದಾರೆ ಇದಕ್ಕೆ ಉತ್ತರ ನೀಡಲಿ ಎಂದರು.

ಅಯೋದ್ಯೆ ನಂತರ ಅಂಜನಾದ್ರಿಗೆ ಬಿಜೆಪಿಯವರು ಕೈ ಹಾಕುತ್ತಾರೆ:

ಈಗಾಗಲೇ ಅಯೋಧ್ಯೆಯಲ್ಲಿ ನಡೆದಿರುವ ಕಾಣಿಕೆ ಹುಂಡಿಯ ಭ್ರಷ್ಟಾಚಾರ ಬಯಲಾಗಿದ್ದು, ಈಗ ಕೊಪ್ಪಳ ಜಿಲ್ಲೆಯ ಅಂಜನಾದ್ರಿಯ ಕಾಣಿಕೆ ಹುಂಡಿಗೆ ಕೈ ಹಾಕಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಶಾಸಕ ತಂಗಡಗಿ ಅರೋಪಿಸಿದರು. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಬಂದರೆ ಹುಷಾರ್‌ ಅಂತ ಹೇಳುವ ಪರಿಸ್ಥಿತಿ ಒದಗಿ ಬಂದಿದೆ ಎಂದರು.

2029ರ ಲೋಕಸಭಾ ಚುನಾವಣೆಗೆ ಒನ್‌ ನೇಷನ್‌ ಒನ್‌ ಇಲೆಕ್ಷನ ವಿಚಾರಕ್ಕೆ ನನ್ನ ಸಂಪೂರ್ಣ ವಿರೋಧವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿ ಮಾಡಲು ಸಾಧ್ಯ ಇದೆಯೇ ಎಂದು ಪ್ರಶ್ನಿಸಿದ ಅವರು, ದೇಶದಲ್ಲಿ ಬಿಜೆಪಿ ಗಾಳಿ ಹೋಗಿದೆ. ಕಾಂಗ್ರೆಸ್ ಮಹಿಳಾ ಕಾನೂನಿಗೆ ವಿರೋಧ ಮಾಡಿಲ್ಲ ಸಂಪೂರ್ಣವಾಗಿ ಬೆಂಬಲ ಇದೆ ಎಂದರು.

ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ವೇಳೆ ತಮಗೆ ಅವಕಾಶ ಸಿಕ್ಕೆ ಸಿಗುತ್ತದೆ, ನಾನು ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೃಹಲಕ್ಷ್ಮಿ ವದಂತಿಗೆ ಕಿವಿಗೊಡದಿರಿ: ಧರ್ಮಜ ಉತ್ತಪ್ಪ
ಅಡಕೆ ಸಾಗಾಟ ಕಂಟೈನರ್‌ಗೆ ‘ಮಹಾ’ ತಡೆ ನಿವಾರಣೆ: ಡೀವಿ