ಹೊಸಪೇಟೆ: ನೀರಾವರಿ ಸಲಹಾ ಸಮಿತಿಯ ನಿರ್ಧಾರದಂತೆ ತುಂಗಭದ್ರಾ ಎಡದಂಡೆಯ ಕಾಲುವೆಯಲ್ಲಿ ಹರಿಸಲಾಗುತ್ತಿರುವ ೩೮೦೦ ಕ್ಯುಸೆಕ್ ನೀರು ಕಾಲುವೆಯ ಕೊನೆಯ ಭಾಗದ ರೈತರಿಗೂ ಸಮರ್ಪಕವಾಗಿ ಸರಬರಾಜು ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಾರಕಿಹೊಳಿ ಮನೆಯಲ್ಲಿ ರಾಜಕೀಯ ಚರ್ಚೆಯಾಗಿಲ್ಲ: ಬೋಸರಾಜು
ಹೊಸ ವರ್ಷದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸತೀಶ್ ಜಾರಕಿಹೋಳಿ ಊಟಕ್ಕೆ ಕರೆದಿದ್ದರು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು.ಇಲ್ಲಿನ ಟಿಬಿ ಡ್ಯಾಂನಲ್ಲಿ ಶುಕ್ರವಾರ ಕಾಂಗ್ರೆಸ್ ಡಿನ್ನರ್ ಪಾರ್ಟಿ ವಿಚಾರಕ್ಕೆ ಪ್ರಶ್ನೆಗೆ ಉತ್ತರಿಸಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸದ್ಯ ಕಾಂಗ್ರೆಸ್ನಲ್ಲಿ ಯಾವುದೇ ಚರ್ಚೆಯಾಗಿಲ್ಲ. ಹೊರಗಡೆ ಕೇವಲ ಊಹಾಪೋಹಗಳು ಅಷ್ಟೆ. ಸಚಿವ ಸಂಪುಟ ಸಭೆ ಮುಗಿಯುವುದು ತಡವಾಯಿತು. ಹಾಗೆ ಸತೀಶ್ ಜಾರಕಿಹೊಳಿ ಮನೆಗೆ ಊಟಕ್ಕೆ ಹೋಗಿದ್ದರು ಅಷ್ಟೆ. ಅಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ. ಎಲ್ಲರನ್ನು ಇಟ್ಟುಕೊಂಡು ನಾವು ಚರ್ಚೆ ಮಾಡಲು ಸಾಧ್ಯವೇ ಹೇಳಿ ನೋಡೋಣ? ಯಾವ ಬಣವೂ ನಮ್ಮಲ್ಲಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೇಗೆ ಜಂಟಿಯಾಗಿ ಕೆಲಸ ಮಾಡುತ್ತಿದ್ದಾರೆ ನೋಡಿದಿರಲ್ಲ. ಸಚಿವ ಸಂಪುಟ ವಿಸ್ತರಣೆ ವಿಚಾರ, ಖಾಲಿ ಇರುವ ಸ್ಥಾನಗಳನ್ನು ತುಂಬಿಕೊಳ್ಳಲಾಗುತ್ತದೆ ಅಷ್ಟೆ. ಕೆಲವರ ಕೊಕ್ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಹೇಳಿದರು.ಪ್ರತಿ ಎರಡ್ಮೂರು ವರ್ಷಕ್ಕೆ ನಾವು ಬಸ್ ದರ ಏರಿಕೆ ಮಾಡಬೇಕು. ತೈಲ ಬೆಲೆ ಏರಿಕೆಯಾದಂತೆ ಏರಿಕೆ ಮಾಡಲಾಗಿದೆ. ಸಾರಿಗೆ ನೌಕರರ ಮುಷ್ಕರಕ್ಕೂ ಬಸ್ ದರ ಏರಿಕೆಗೂ ಸಂಬಂಧವಿಲ್ಲ. ಸಂಕ್ರಾಂತಿ ಬಳಿಕ ಅವರ ಸಮಸ್ಯೆ ಬಗೆಹರಿಸಲಾಗುತ್ತದೆ. ಈ ಕುರಿತು ಮುಖ್ಯಮಂತ್ರಿ ಮಾತನಾಡಿದ್ದಾರೆ ಎಂದರು.ಬಿಜೆಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಬಿ.ವೈ. ವಿಜಯೇಂದ್ರ ಒಬ್ಬರಿಗೊಬ್ಬರು ಹೋರಾಟ ಮಾಡುತ್ತಿದ್ದಾರೆ. ಅವರಲ್ಲಿ ಮೂರ್ನಾಲ್ಕು ಬಣಗಳಿವೆ. ಬಿಜೆಪಿ ನಾಯಕರ ಮೇಲೆ ಕೇಸ್ಗಳಿವೆ, ಅವರ್ಯಾರೂ ರಾಜೀನಾಮೆ ಕೊಡಲಿಲ್ಲ. ಸುಮ್ಮನೆ ಕಾಂಗ್ರೆಸ್ ನಾಯಕರ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.