ಕನ್ನಡಪ್ರಭ ವಾರ್ತೆ ಸಿರಿಗೆರೆ
ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆಯ 3ನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.ಅಧಿಕಾರದಲ್ಲಿರುವ ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿಯವರ ಮೇಲೆ ಒತ್ತಡ ತಂದು ಈ ಕೆಲಸ ಮಾಡಿಸಬೇಕು. ಹಲವು ವರ್ಷಗಳ ಕಾಲ ಅಧಿಕಾರದಲ್ಲಿರುವ ಯುವ ಶಾಸಕರು ಈ ಕೆಲಸಕ್ಕೆ ಮುಂದಾಗಬೇಕು. ನಿಮ್ಮ ಜೊತೆ ಸಿಎಂ ಬಳಿ ಬರಲು ನಾನು ಸಿದ್ಧವಾಗಿದ್ದೇನೆ ಎಂದರು.
ಸರ್ಕಾರವನ್ನು ನಂಬಿಕೊಳ್ಳದೆ ರೈತರು ಸ್ವಂತ ಬಡವಾಳ ಹೂಡಿಕೊಂಡು ಸುಮಾರು 16 ಲಕ್ಷ ಎಕರೆ ಭೂಮಿಗೆ ನೀರಿನ ಸೌಲಭ್ಯವನ್ನು ಕಲ್ಪಿಸಿಕೊಂಡಿದ್ದಾರೆ. ಇವರಿಗೆ ನೆರವಾಗುವ ಚಿಂತನೆ ಸರ್ಕಾರಕ್ಕೆ ಇರಬೇಕು. 66 ಲಕ್ಷ ಹೆಕ್ಟೇರ್ ಭೂಮಿಯನ್ನು ನೀರಾವರಿಗೆ ಒಳಪಡಿಸಬಹುದಾಗಿದ್ದು, ಬೃಹತ್ ನೀರಾವರಿ ಇಲಾಖೆಯಿಂದ 40 ಲಕ್ಷ ಹೆಕ್ಟೇರ್ ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ 10 ಲಕ್ಷ ಹೆಕ್ಟೇರ್ ಭೂಮಿಗೆ ನೀರು ಸಿಕ್ಕಿದೆ. ಉಳಿದಿರುವ ಭೂಮಿಗೆ ನೀರಿನ ಅಗತ್ಯವಿದೆ. ಅದನ್ನು ಸರ್ಕಾರ ಒದಗಿಸಬೇಕು ಎಂದು ಒತ್ತಾಯಿಸಿದರು.ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳು ಸಾಮಾಜಿಕ ಕಳಕಳಿ ಉಳ್ಳವರು. ಆದ್ದರಿಂದಲೇ ಅವರು ದೂರದೃಷ್ಟಿಯಿಂದ ಹಲವು ಕೆರೆಗಳನ್ನು ತುಂಬಿಸಿದ್ದಾರೆ. ಇದರಿಂದ ರೈತರು ಸಂತೋಷವಾಗಿದ್ದಾರೆ. ಜಾನುವಾರುಗಳಿಗೆ ನೀರು ಸಿಕ್ಕಿದೆ. ಇಂತಹ ಸಮಾಜಮುಖಿ ಕೆಲಸ ಮಾಡುವ ಮೂಲಕ ಅವರು ಬಸವಾದಿ ಶರಣರ ತೇರನ್ನು ಎಳೆಯುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಚ್.ಡಿ.ತಮ್ಮಯ್ಯ, ವೀರೇಂದ್ರ ಪಪ್ಪಿ, ಬಿ.ದೇವೇಂದ್ರಪ್ಪ, ಧನಂಜಯ ಸರ್ಜಿ, ಪ್ರಕಾಶ್ ಕೋಳಿವಾಡ, ಕೆ.ಎಸ್.ಬಸವಂತಪ್ಪ, ಬಿ.ಪಿ. ಹರೀಶ್, ಎಚ್.ಕೆ.ಸುರೇಶ್, ಮಿಮಿಕ್ರಿ ಗೋಪಿ ಮುಂತಾದವರು ಉಪಸ್ಥಿತರಿದ್ದರು.