ಕಿತ್ತೂರರಾಣಿ ಚೆನ್ನಮ್ಮ ಆದರ್ಶ ಎಲ್ಲರಿಗೂ ಮಾದರಿಯಾಗಲಿ

KannadaprabhaNewsNetwork |  
Published : Nov 07, 2024, 12:36 AM IST
ಚಿತ್ರ ಶೀರ್ಷಿಕೆ6ಎಂ ಎಲ್ ಕೆ5ಮೊಳಕಾಲ್ಮುರು ತಾಲೂಕಿನ  ರಾಂಪುರ ಗ್ರಾಮದಲ್ಲಿ  ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ತಾಲೂಕು ಘಟಕದಿಂದ ಆಯೋಜಿಸಲಾಗಿದ್ದ ಕಿತ್ತೂರಾಣಿ ಚೆನ್ನಮ್ಮನ ವಿಜಯೋತ್ಸವ ಕಾರ್ಯಕ್ರಮವನ್ನು ಶಾಸಕ ಎನ್.ವೈ.ಜಿ.ಉದ್ಘಾಟಿಸಿದರು. | Kannada Prabha

ಸಾರಾಂಶ

Let the ideal of Kitturarani Chennamma be a role model for all

-ಕಿತ್ತೂರುರಾಣಿ ಚೆನ್ನಮ್ಮನ 2೦೦ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಶ್ರೀವಚನಾನಂದ ಮಹಾಸ್ವಾಮೀಜಿ

-----

ಕನ್ನಡಪ್ರಭವಾರ್ತೆ ಮೊಳಕಾಲ್ಮುರು

ಅನೇಕ ಸಂಸ್ಥಾನಗಳು ಬ್ರಿಟಿಷರಿಗೆ ತಲೆಬಾಗಿ ಕಪ್ಪ ನೀಡಿ ಅವರ ಶರತ್ತುಗಳಿಗೆ ಒಳಪಟ್ಟು ಸಂಸ್ಥಾನಗಳನ್ನುನಡೆಸುತ್ತಿದ್ದಂತ ಕಾಲ ಘಟ್ಟದಲ್ಲಿ ಒಬ್ಬ ಮಹಿಳೆಯಾಗಿ ಬ್ರಿಟಿಷರಿಗೆ ತಲೆತಗ್ಗಿಸದೆ ಎದೆಯೊಡ್ಡಿ ಹೋರಾಟ ಮಾಡಿದ್ದ ಕಿತ್ತೂರ ರಾಣಿ ಚೆನ್ನಮ್ಮ ಆದರ್ಶಗಳು ಪ್ರತಿಯೊಬ್ಬರಿಗೂ ಮಾದರಿಯಾಗಬೇಕೆಂದು ಜಗದ್ಗುರು ಶ್ರೀ ವಚನಾನಂದ ಮಹಾ ಸ್ವಾಮೀಜಿ ಹೇಳಿದರು.

ತಾಲೂಕಿನ ರಾಂಪುರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ತಾಲೂಕು ಘಟಕದಿಂದ ಆಯೋಜಿಸಲಾಗಿದ್ದ ಕಿತ್ತೂರುರಾಣಿ ಚೆನ್ನಮ್ಮನ 2೦೦ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸದೃಢ ಸಮಾಜ ಕಟ್ಟುವುದರಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯ.ಇದಕ್ಕೆ ಉದಾಹರಣೆ ರಾಣಿ ಚೆನ್ನಮ್ಮನ ಹೋರಾಟ ಪ್ರಮುಖ ಎನ್ನಬಹುದು.

ಬೆರಳೆಣಿಕೆಯಷ್ಟು ಸೈನ್ಯವಿದ್ದರೂ ಬ್ರಿಟಿಷರಿಗೆ ತಲೆತಗ್ಗಿಸದೆ ಧೈರ್ಯವಾಗಿ ಎದೆಯೊಡ್ಡಿ ಬ್ರಿಟಿಷರ ವಿರುದ್ಧ ಹೋರಾಡಿ ಜಯ ಸಾಧಿಸಿದರು. ಮಹಿಳೆಯರು ಜಾಗೃತರಾಗಬೇಕು. ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾದರೆ ಪ್ರತಿಯೊಬ್ಬರು ಸಂಘಟಿತರಾಗಬೇಕು. ಸದೃಢ ಸಮಾಜವನ್ನು ಕಟ್ಟಬೇಕಾದರೆ ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು ಎಂದರು.

ಶಾಸಕ ಎನ್.ವೈ.ಗೋಪಾಲಕೃಷ್ಣ ಮಾತನಾಡಿ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಸದಾ ಕಾಯಕ ಜೀವಿಗಳು. ನಿಮ್ಮ ಒಗ್ಗಟ್ಟು ಮತ್ತೊಬ್ಬರಿಗೆ ಮಾದರಿಯಾಗಿದೆ. ಪ್ರತಿಬಾರಿ ಕಾರ್ಯಕ್ರಮ ವಿಜೃಂಭಣೆಯಿಂದ ಆಚರಿಸುತ್ತಿರುವುದು ಶ್ಲಾಘನೀಯ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಕಲ್ಪಿಸುತ್ತೇನೆಂದು ತಿಳಿಸಿದರು.

ಇದೇ ವೇಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ರಾಂಪುರ ಗ್ರಾಮದ ನಿವೃತ್ತ ನ್ಯಾಯಾಧೀಶ ಎ.ಜಿ.ಗಂಗಾಧರ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ್, ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಉಲ್ಲತಿ ಜಿಲ್ಲಾಧ್ಯಕ್ಷ ಪ್ರಕಾಶ್, ತಾಲೂಕು ಅಧ್ಯಕ್ಷ, ಆರ್.ಜಿ. ಜಯಕುಮಾರ್, ಜಿ. ಸಿ. ನಾಗರಾಜ್, ಯುವ ಘಟಕ ಅಧ್ಯಕ್ಷ ವಿನಯ್ ಕುಮಾರ್, ಮಹಿಳಾ ಘಟಕ ಅಧ್ಯಕ್ಷರಾದ ಸಿದ್ದಮ್ಮ, ಶ್ರುತಿ, ನಿವೃತ ಪ್ರಾಂಶುಪಾಲ ಮೋಹನ್, ರಮೇಶ್, ಮಲ್ಲಿಕಾರ್ಜುನ್ ಕುಮಾರ್, ನವೀನ್, ಬಳೆ ಗಂಗಾಧರ್ ಹಿರೇಕಹಳ್ಳಿ ಪ್ರಭಾಕರ್, ನಾಗಸಮುದ್ರ ಸುಧಾಕರ್, ಸಿದ್ದಾಪುರ ಉಮಾಶಂಕರ್ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌