ಸ್ವಾತಂತ್ರ್ಯ ದಿನಾಚರಣೆ ಲೋಪವಿಲ್ಲದಂತೆ ನಡೆಯಲಿ

KannadaprabhaNewsNetwork |  
Published : Aug 15, 2026, 04:00 AM IST
(ಪೋಟೋ-14ಬಿಕೆಟಿ2, ಆಗಸ್ಟ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಅವರು ನವನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಸಿದ್ದತೆಗಳನ್ನು ಪರಿಶೀಲಿಸಿದರು.) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ ಆಗಸ್ಟ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಅವರು ನವನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಸಿದ್ದತೆಗಳನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಆಗಸ್ಟ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಅವರು ನವನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಸಿದ್ದತೆಗಳನ್ನು ಪರಿಶೀಲಿಸಿದರು.

ಕಾರ್ಯಕ್ರಮ ನಡೆಯುವ ವೇದಿಕೆ, ಧ್ವಜಾರೋಹಣ ಸ್ಥಳ, ಪಥ ಸಂಚಲನ, ಆಸನ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯಾವುದೇ ಲೋಪವಿಲ್ಲದೇ ಅಚ್ಚುಕಟ್ಟಾಗಿ ನಡೆಯುವಂತೆ ಸಂಬಂಧಿಸಿದ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮನ್ವಯದಿಂದ ನಿರ್ವಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ಸುರಕ್ಷತಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್, ಧ್ವನಿವರ್ಧಕ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ವಿವಿಧ ಸಮಿತಿಗಳಿಗೆ ನಿರ್ದೇಶನ ನೀಡಿದರು. ಪರಿಶೀಲನೆ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸದಾಶಿವ ಬಡಿಗೇರ, ಡಿವೈಸ್ಪಿ ಪ್ರಭು ಪಾಟೀಲ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

-------

ಬಾಕ್ಸ್.......

ಸ್ವಾತಂತ್ರ್ಯೋತ್ಸವ ಅಂಗವಾಗಿ ನಾನಾ ಕಾರ್ಯಕ್ರಮ

80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 8.30ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಸಚಿವ ವಿಜಯಾನಂದ ಕಾಶಪ್ಪನವರಿಂದ ಮಾಲಾರ್ಪಣೆ, 9 ಗಂಟೆಗೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ದ್ವಜಾರೋಹಣ ನಂತರ ರಾಷ್ಟ್ರಗೀತೆ, ನಾಡಗೀತೆಯ ನಂತರ ಪರೇಡ್‌ ವೀಕ್ಷಣೆ, ಪಥ ಸಂಚಲನ, ಸಚಿವರಿಂದ ಸ್ವಾತಂತ್ರೋತ್ಸವದ ಸಂದೇಶ, ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿವೆ.

ಅಧ್ಯಕ್ಷತೆಯನ್ನು ಶಾಸಕ ಉಮೇಶ ಮೇಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ನವದೆಹಲಿ ರಾಜ್ಯ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ. ಸಂಜೆ 5.30ಕ್ಕೆ ನವನಗರದ ಕಲಾಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ನೃತ್ಯ ರೂಪಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ಡಿಸಿ ಭೇಟಿ
ಗ್ರಂಥಾಲಯಗಳು ಜ್ಞಾನ ವೃದ್ಧಿ ಕೇಂದ್ರಗಳು