ಕೂಲಿಕಾರರಿಗೆ ಸ್ಕೀಂನ ಲಾಭ ಪಡೆಯಲಿ: ಪಾಟೀಲ್

KannadaprabhaNewsNetwork |  
Published : Aug 19, 2026, 02:15 AM IST
ಯಲಬುರ್ಗಾ ತಾಲೂಕಿನ ಹೊಸೂರಿಲ್ಲಿ ವಿಬಿಜಿ ರಾಮ್‌ಜಿ ಯೋಜನೆಯಡಿ ಕೂಲಿಕಾರರಿಗೆ ಜಾಬ್ ಕಾರ್ಡ್ ವಿತರಿಸಲಾಯಿತು. | Kannada Prabha

ಸಾರಾಂಶ

ತಾಲೂಕಿನಲ್ಲಿ ಬರಗಾಲದ ಪರಿಸ್ಥಿತಿ ಹಿನ್ನೆಲೆ ಕೂಲಿಕಾರರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಲಾಗುತ್ತಿದೆ.

ಯಲಬುರ್ಗಾ: ತಾಲೂಕಿನ ಹಿರೇಅರಳಿಹಳ್ಳಿ ಗ್ರಾಪಂ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಯೋಜನೆಯಡಿ ಕೂಲಿಕಾರರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜಾಬ್ ಕಾರ್ಡ್ ಮೇಳ ಅಭಿಯಾನಕ್ಕೆ ತಾಪಂ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ್ ಕೂಲಿಕಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಹನುಮಂತಗೌಡ ಪಾಟೀಲ್ ಮಾತನಾಡಿ, ಆ.೧೫ರಿಂದ ಸೆ೧೫ರ ವರೆಗೆ ನಡೆಯಲಿರುವ ಜಾಬ್ ಕಾರ್ಡ್ ಮೇಳ ಅಭಿಯಾನದಡಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಜಾಬ್ ಕಾರ್ಡ್ ವಿತರಿಸಲು ಈಗಾಗಲೇ ಪಿಡಿಒರವರಿಗೆ ತಿಳಿಸಲಾಗಿದೆ.

ತಾಲೂಕಿನಲ್ಲಿ ಬರಗಾಲದ ಪರಿಸ್ಥಿತಿ ಹಿನ್ನೆಲೆ ಕೂಲಿಕಾರರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಲಾಗುತ್ತಿದೆ. ಜಾಬ್ ಕಾರ್ಡ್‌ಗಾಗಿ ಬೇಡಿಕೆ ಸಲ್ಲಿಸುವ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಹೊಸ ಜಾಬ್ ಕಾರ್ಡ್ ವಿತರಿಸಲಾಗುವುದು ಎಂದರು.

ಗ್ರಾಮೀಣ ಭಾಗದ ರೈತರ, ಕೂಲಿಕಾರರ ಮತ್ತು ಜೀವನೋಪಾಯ ಚಟುವಟಿಕೆಗಳ ಮೂಲಕ ಆರ್ಥಿಕ ಸದೃಢಕ್ಕಾಗಿ ಜಾರಿಯಾದ ವಿಬಿ ಜಿರಾಮ್‌ಜಿ ಯೋಜನೆಯಿಂದ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯಾಗಲಿದೆ. ಜು.೧ರಿಂದ ಪ್ರತಿಯೊಬ್ಬ ಕೂಲಿಕಾರರಿಗೂ ₹೩೮೨ ಕೂಲಿಮೊತ್ತ ಹಾಗೂ ೧೩೫ ದಿನಗಳ ಕೆಲಸ ಸಿಗಲಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು.

ಯೋಜನೆಯಡಿ ನಿರ್ದಿಷ್ಟಪಡಿಸಿದ ೩೧೮ ಕಾಮಗಾರಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭ ತಾಂತ್ರಿಕ ಸಂಯೋಜಕ ಸಂತೋಷ ನಂದಾಪುರ, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಪಿಡಿಒ ಬಸವರಾಜ, ಕಂಪ್ಯೂಟರ್ ಆಪರೇಟರ್ ಶೇಖರ ವಾದಿ, ಜಿಕೆಎಂ ಶಾಂತಮ್ಮ, ಕಾಯಕ ಬಂಧುಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರು, ಮಕ್ಕಳಿಂದ ಹೊಳೆ ಗಂಗಾ ಪೂಜೆ
ಸಂಸ್ಕಾರ, ಸಂಸ್ಕೃತಿ ಉಳಿಯಲು ದೇವಸ್ಥಾನ ಅವಶ್ಯ: ಸಿದ್ಧವೀರ ಶಿವಯೋಗಿ ಶಿವಾಚಾರ್ಯ ಶ್ರೀಗಳು