ಗಾಂಧಿ, ಶಾಸ್ತ್ರಿ ಜೀವನ ಶೈಲಿ ಎಲ್ಲರಿಗೂ ಮಾದರಿಯಾಗಲಿ

KannadaprabhaNewsNetwork |  
Published : Oct 03, 2024, 01:23 AM IST
ಚಿತ್ರ 2ಬಿಡಿಆರ್53 | Kannada Prabha

ಸಾರಾಂಶ

ಹುಲಸೂರ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪೂಜೆ ಸಲ್ಲಿಸಿದ ಬಳಿಕ ಪ್ರಾರ್ಥನೆ ಸಲ್ಲಿಸಿದರು.

ಮಹನೀಯರ ಜಯಂತಿ ಆಚರಣೆಯಲ್ಲಿ ಮುಖ್ಯಗುರು ಸೂರ್ಯಕಾಂತ ಪಾಟೀಲ್‌ ಸಲಹೆ

ಕನ್ನಡಪ್ರಭ ವಾರ್ತೆ ಹುಲಸೂರಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಶೈಲಿ ನಮ್ಮೇಲ್ಲರಿಗೂ ಮಾದರಿಯಾಗಬೇಕು ಎಂದು ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಸೂರ್ಯಕಾಂತ ಪಾಟೀಲ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಬುಧವಾರ ನಡೆದ ಮಹಾತ್ಮ ಗಾಂಧೀಜಿ ಯವರ 155ನೇ ಜಯಂತಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರೀ ಅವರ 120ನೇ ಜಯಂತಿ ಆಚರಣೆ ಅಂಗವಾಗಿ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ಮಹಾತ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಾಮೂಹಿಕ ಪ್ರಾರ್ಥನೆ ನೇರವೇರಿಸಿ ಮಾತನಾಡಿ, ಯಾವುದೇ ಕಠಿಣ ಸಂದರ್ಭದಲ್ಲಿ ನಮ್ಮ ತತ್ವ ಸಿದ್ಧಾಂತಗಳನ್ನು ಬಿಡದೆ ಸತ್ಯ ಅಹಿಂಸೆ ಹಾಗೂ ಸರಳ ಬದುಕು ಸಾಗಿಸುವ ದಾರಿಯಲ್ಲಿ ನಡೆಯಬೇಕು ಎಂದರು.

ನಂತರ ಸರ್ಕಾರಿ ಪ್ರೌಢಶಾಲೆಯಿಂದ ಗ್ರಾಮದ ಗಾಂಧಿ ವೃತ್ತದವರೆಗೆ ಗಾಂಧಿ ನಡಿಗೆ ಕೈಗೊಳ್ಳಲಾಯಿತು. ವೃತ್ತದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ನಮನ ಸಲ್ಲಿಸಲಾಯಿತು.

ದೇವಾನಂದ ನಂಜವಾಡೆ ಸ್ವಾಗತಿಸಿದರು. ಎಂ.ಡಿ ಆಜಮ್ ನಿರೂಪಿಸಿದರೆ, ಅಹ್ಮದ ಅಲಿ ವಂದಿಸಿದರು. ಈ ವೇಳೆ ರಾಜ್ಯ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸೂರ್ಯಕಾಂತ ಅಡಿಕೆ, ಪ್ರಾಥಮಿಕ ಶಾಲೆಯ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಪ್ಪ ನಂದೋಡೆ, ಮುಖ್ಯ ಶಿಕ್ಷಕ ಸೂರ್ಯಕಾಂತ ಕೆ.ಪಾಟೀಲ್, ಶಿಕ್ಷಕರಾದ ಪರವೇಜ್ ಮೊಮೀನ, ರೇಣುಕಾ ವಿ, ರಾಹುಲ್, ಅಮೀನ್, ಎಂ.ಡಿ.ಆಝಮ್, ದೇವಾನಂದ ನಂಜವಾಡೆ, ಅಹ್ಮದ್ ಅಲಿ, ಹಿರಾಬಾಯಿ ಸದಾಶಿವ ಬಿರಾದಾರ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ