ಗದಗ: ವಿದ್ಯಾರ್ಥಿಗಳಲ್ಲಿ ಕಂಡು ಬರುವ ನೂನ್ಯತೆಗಳನ್ನು ಪಾಲಕರು ಬಾಲ್ಯದಲ್ಲಿಯೇ ಗುರುತಿಸಿ ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ನೀಡಿದಲ್ಲಿ ಮಕ್ಕಳು ಸುಧಾರಣೆಗೊಂಡು ಸಾಮಾನ್ಯ ಮಕ್ಕಳಾಗುವ ಸಾಧ್ಯತೆಯಿದೆ ಎಂದು ಗದಗ ಬೆಟಗೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ನಿತೀಶ್ ಸಾಲಿ ಹೇಳಿದರು.
ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು.ಅವರಿಗೆ ಪ್ರೋತ್ಸಾಹದ ಅಗತ್ಯವಿದೆ. ಸರ್ಕಾರದ ಸೌಲಭ್ಯಗಳೊಂದಿಗೆ ಸೂಕ್ತ ವಾತಾವರಣ ಅವಶ್ಯ. ಸಮುದಾಯವು ಈ ಮಕ್ಕಳ ಶ್ರೇಯೋಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಕವಿತಾ ಬೆಲೇರಿ ಮಾತನಾಡಿ, ವಿಶೇಷ ಮಕ್ಕಳು ವಿಶೇಷ ಪ್ರತಿಭೆ ಉಳ್ಳವರು. ಅವರಿಗೆ ಪ್ರೋತ್ಸಾಹ ದೊರೆತಲ್ಲಿ ಅವರೂ ಸಾಧಿಸಬಲ್ಲರು. ಮುಖ್ಯವಾಗಿ ಅವರಿಗೆ ಪ್ರೋತ್ಸಾಹ ಹಾಗೂ ಪ್ರೇರಣೆಬೇಕು. ಜತೆಗೆ ಕಲಿಕಾ ಪೂರಕ ವಾತಾವರಣ ಅವರಿಗಾಗಿಯೇ ಅನುಕೂಲಕರ ವಾತಾವರಣ, ಉತ್ತಮ ಪರಿಸರ ನಿರ್ಮಾಣ ಕಾರ್ಯ ನಡೆಯಬೇಕು, ಅಂದಾಗ ಈ ಮಕ್ಕಳು ಕಲಿಕೆಯಲ್ಲಿ ಪ್ರಗತಿ ಕಂಡು ಸಾಧಿಸಬಲ್ಲರು ಎಂದರು.ಶಾಲಾ ಮುಖ್ಯೋಪಾಧ್ಯಾಯ ವೈ.ಎಚ್. ಹನುಮಂತಗೌಡ್ರ ಮಾತನಾಡಿ, ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳತ್ತ ಬಂದು ವಿಶೇಷಚೇತನರ ಬಗೆಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಗದಗ-ಬೆಟಗೇರಿ ಲಯನ್ಸ ಕ್ಲಬ್ನ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.