- ಯುವಜನೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಶ್ರೀನಿವಾಸ ದಾಸಕರಿಯಪ್ಪ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂದಿರದಲ್ಲಿ ನಡೆಯುತ್ತಿರುವ 3ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ಎರಡನೇ ದಿನವಾದ ಶನಿವಾರ ಸಾರ್ವಜನಿಕ ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಹಾಗೂ ಶ್ರೀ ವಾಲ್ಮೀಕಿ ಪ್ರತಿಷ್ಠಾನದಿಂದ ಯುವಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿ ಸಮುದಾಯದಲ್ಲಿ ಸಾಕಷ್ಟು ಪ್ರತಿಭಾವಂತ ಯುವಕ-ಯುವತಿಯರಿದ್ದಾರೆ. ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ದೊರೆತಾಗ ಮಾತ್ರ ಅವರು ಮುನ್ನೆಲೆಗೆ ಬರಲು ಸಾಧ್ಯ. 3 ವರ್ಷಗಳಿಂದ ವಾಲ್ಮೀಕಿ ಪ್ರತಿಷ್ಠಾನ ಮತ್ತು ಸಾರ್ವಜನಿಕ ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಉತ್ತಮ ಕಾರ್ಯ ಕೈಗೊಂಡಿವೆ. ಮುಂಬರುವ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಮತ್ತಷ್ಟು ವಿಜೃಂಭಣೆಯಿಂದ ಮಾಡಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.ಉಪವಿಭಾಗಾಧಿಕಾರಿ ಸಂತೋಷ್ ಕುಮಾರ ಮಾತನಾಡಿ, ಯಾವುದೇ ಸಮಾಜ ಅಭಿವೃದ್ಧಿ ಕಾಣಬೇಕಾದರೆ ಶಿಕ್ಷಣ ಅತಿ ಮುಖ್ಯ. ನಮ್ಮ ಸುತ್ತ ಈಗಲೂ ಸಮಾನತೆಗಾಗಿ ಹೋರಾಟ ನಡೆಸುತ್ತಿರುವ ಅನೇಕ ಸಮಾಜಗಳಿವೆ. ಅವುಗಳನ್ನು ಗುರುತಿಸಿ ಜೊತೆ ಜೊತೆಗೆ ಕೊಂಡೊಯ್ಯಬೇಕಿದೆ. ಮಕ್ಕಳ ಮನಸ್ಸು ಸಾಂಸ್ಕೃತಿಕ ಕಾರ್ಯಕ್ರಮಗಳತ್ತ ಆಕಷಣೆಗೊಳಿಸುವುದು ಪೋಷಕರು ಜವಾಬ್ದಾರಿ ಎಂದು ತಿಳಿಸಿದರು.
ದಾವಣಗೆರೆಯಲ್ಲಿ ಯುವಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರೀನಿವಾಸ ದಾಸಕರಿಯಪ್ಪ ಉದ್ಘಾಟಿಸಿದರು.