ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು
ಪಟ್ಟಣದ ಲಯನ್ಸ್ ಕ್ಲಬ್ ಆಯೋಜಿಸಿದ್ದ ಪ್ರಾಂತೀಯ, ವಲಯಾಧ್ಯಕ್ಷರ ಅಧಿಕೃತ ಭೇಟಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಲಯನ್ಸ್ ಸಂಸ್ಥೆ ಸೇವೆಗಾಗಿಯೇ ಮುಡಿಪಾಗಿರುವ ಸಂಸ್ಥೆಯಾಗಿದ್ದು, ಪಟ್ಟಣದಲ್ಲಿ ಕಳೆದ ಏಳು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆ ಪ್ರಸ್ತುತ ವರ್ಷದವರೆಗೆ ಎಲ್ಲಾ ವರ್ಗಕ್ಕೂ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತ ಸಮಾಜಮುಖಿಯಾದ ಸೇವೆಯನ್ನು ಮಾಡುತ್ತಿದೆ.
ಕಳೆದ ಏಳು ವರ್ಷಗಳಿಂದಲೂ ಎಲ್ಲಾ ಅಧ್ಯಕ್ಷರ ಅವಧಿಯಲ್ಲಿಯೂ ಸಹ ಪಟ್ಟಣದಲ್ಲಿ ವಿವಿಧ ಶಾಶ್ವತ ಕಾರ್ಯಕ್ರಮಗಳನ್ನು ನೀಡುತ್ತಿದೆ. ಸಮೀಪದ ಕೊಪ್ಪದಲ್ಲಿ ಲಯನ್ಸ್ ಸಂಸ್ಥೆ ಡಯಾಲಿಸಿಸ್ ಘಟಕವನ್ನು ಅತೀ ಕಡಿಮೆ ದರದಲ್ಲಿ ನಿರ್ವಹಿಸುತ್ತ ರೋಗಿಗಳಿಗೆ ಉತ್ತಮ ಸೇವೆ ನೀಡುತ್ತಿದೆ ಎಂದರು.ವಲಯಾಧ್ಯಕ್ಷ ಎನ್.ಸುಬ್ರಮಣ್ಯ ಮಾತನಾಡಿ, ಯಾವುದೇ ವ್ಯಕ್ತಿ ಸಮಾಜದಲ್ಲಿ ತುಳಿತ, ಶೋಷಣೆಗೆ ಒಳಗಾದರೂ ಸಹ ಅದಕ್ಕೆ ಎದೆಗುಂದದೆ ಮತ್ತೆ ಬೆಳೆಯಬೇಕಿದೆ. ಸಮಾಜದಲ್ಲಿ ನಾವು ಎತ್ತರದ ಸ್ಥಾನಕ್ಕೆ ಹೋಗುವ ಪ್ರಯತ್ನ ಮಾಡಬೇಕು. ನಮ್ಮತನದೊಂದಿಗೆ ಸಮಾಜದಲ್ಲಿ ನಾವು ಗುರುತಿಸಿಕೊಳ್ಳುವ ಕೆಲಸ ಮಾಡಬೇಕು.
ಕ್ಲಬ್ ಅಧ್ಯಕ್ಷ ಎಂ.ಡಿ.ಶಿವರಾಮ್ ಮಾತನಾಡಿ, ಲಯನ್ಸ್ ಕ್ಲಬ್ ವತಿಯಿಂದ ಪಟ್ಟಣದ ಅರಣ್ಯ ಇಲಾಖೆ ಮುಂಭಾಗದಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣಕ್ಕೆ ಅನುಮತಿ ಕೋರಿ ಸ್ಥಳೀಯ ಗ್ರಾಪಂಗೆ ಮನವಿ ಸಲ್ಲಿಸಿದ್ದು, ಗ್ರಾಪಂ ಸಕಾರಾತ್ಮಕವಾಗಿ ಸ್ಪಂದಿಸಿದೆ. ಶೀಘ್ರದಲ್ಲಿ ತಂಗುದಾಣ ನಿರ್ಮಿಸಲಾಗುವುದು. ಮಾ.24 ರಂದು ಪಟ್ಟಣದಲ್ಲಿ ಪ್ರಾಂತೀಯ ಸಮ್ಮೇಳನ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ ಎಂದರು.ಇದೇ ಸಂದರ್ಭದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಯಜ್ಞಪುರುಷಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
೨೪ಬಿಹೆಚ್ಆರ್ ೨: ಬಾಳೆಹೊನ್ನೂರಿನ ಲಯನ್ಸ್ ಕ್ಲಬ್ ವತಿಯಿಂದ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಯಜ್ಞಪುರುಷಭಟ್ ಅವರನ್ನು ಸನ್ಮಾನಿಸಲಾಯಿತು. ಎಂ.ಡಿ.ಶಿವರಾಮ್, ಮಂಜುನಾಥ್, ಸುಬ್ರಮಣ್ಯ, ವಿಲಿಯಂ, ನಾರಾಯಣಶೆಟ್ಟಿ, ಸುಮಾ, ವಿವೇಕ್ ಇದ್ದರು.