ಕನ್ನಡಪ್ರಭ ವಾರ್ತೆ ಕೊಪ್ಪ
ಆಯುಷ್ಮಾನ್ ಅಥವಾ ಬೇರೆ ಬಿ.ಪಿ.ಎಲ್ ಕಾರ್ಡ್ಗಳ ಮೂಲಕ ಸ್ವಲ್ಪ ಹಣ ಜಮೆ ಆಗಿರುತ್ತದೆ. ಗ್ರಾಮೀಣ ಭಾಗದ ಜನ ಚಿಕಿತ್ಸೆಗಾಗಿ ನಗರ ಪ್ರದೇಶದ ದೊಡ್ಡ ದೊಡ್ಡ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಅಥವಾ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಅಲ್ಲಿ 15ರಿಂದ 20 ದಿನಗಳವರೆಗೆ ಆಸ್ಪತ್ರೆಗಳಲ್ಲಿ ಇದ್ದು, ಲಕ್ಷಗಟ್ಟಲೆ ಹಣ ಕಟ್ಟಿ ನಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಜಿ ಕೊಟ್ಟರೆ ಈಗಾಗಲೇ ನಿಮಗೆ ಆಯುಷ್ಮಾನ್ ಅಥವಾ ಬಿ.ಪಿ.ಎಲ್ ಸೌಲಭ್ಯದಿಂದ 5 ಸಾವಿರ ಡ್ರಾ ಆಗಿದೆ. ಹಾಗಾಗಿ ಈ ಬಿಲ್ ನೀಡಲು ಬರುವುದಿಲ್ಲ ಎಂದು ತಿರಸ್ಕರಿಸುತ್ತಾರೆ ಎಂದು ಮಾಹಿತಿ ನೀಡಿದರು.
ಅಮಾಯಕ ಜನರಿಗೆ ಯಾವ ರೀತಿ ವೈದ್ಯಕೀಯ ನೆರವು ಪಡೆಯಬೇಕು, ಅರ್ಜಿಗಳನ್ನು ಹೇಗೆ ಸಲ್ಲಿಸಬೇಕೆಂಬ ಮಾಹಿತಿ ಇರುವುದಿಲ್ಲ. ಎಷ್ಟೋ ಹಣ ಬಂದರೆ ಸಾಕು ಎಂದು ತಿಳಿದು ಅರ್ಜಿ ಸಲ್ಲಿಸುತ್ತಾರೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಲಕ್ಷಗಟ್ಟಲೆ ವೆಚ್ಚವಾಗಿರುತ್ತದೆ. ಇದರಿಂದ ಬಡವರಿಗೆ ನಿರಂತರ ಅನ್ಯಾಯವಾಗುತ್ತಿದೆ. ಸಣ್ಣ ಸಣ್ಣ ಕಾರಣಗಳನ್ನು ಮುಂದಿಟ್ಟು ಬಡ ಜನರ ಅರ್ಜಿಗಳನ್ನು ತಿರಸ್ಕರಿಸಿದರೆ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲವೇನೋ? ಮುಖ್ಯಮಂತ್ರಿಗಳ ಪರಿಹಾರ ನಿಧಿ ಬರಿದಾಗಿದೆಯೋ? ಎಂಬ ಭಾವನೆ ಜನರಲ್ಲಿ ಮೂಡುತ್ತದೆ ಎಂದರು.ಹಾಗಾಗಿ ದಯವಿಟ್ಟು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 2 ಲಕ್ಷ ಬಿಲ್ಗೆ ಎಷ್ಟು ಬರುತ್ತೋ ಅದರಲ್ಲಿ ಮೊದಲ ಆಸ್ಪತ್ರೆಗಳಲ್ಲಿ ನೀಡಿದ ಕಡಿಮೆ ಮೊತ್ತವನ್ನು ಅಂದರೆ 5 ಸಾವಿರ ಕಡಿತಗೊಳಿಸಿಕೊಂಡು ಉಳಿದ ಹಣವನ್ನು ಬಡವರ ಚಿಕಿತ್ಸೆಗಾಗಿ ಬಿಡುಗಡೆ ಮಾಡಿ ಬಡವರಿಗೆ ಹೆಚ್ಚಿನ ಪರಿಹಾರ ನೀಡುವ ಮೂಲಕ ಸಹಾಯ ಮಾಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮಲೆನಾಡು ಕರಾವಳಿ ಒಕ್ಕೂಟ ಆಗ್ರಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.