ಕನ್ನಡಪ್ರಭ ವಾರ್ತೆ ಕನಕಪುರ
ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ದಲಿತ ಸಮುದಾಯದ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಆಸ್ಪೃಶ್ಯತೆ ಆಚರಣೆ ಆಗದಂತೆ ತಡೆಗಟ್ಟಲು ಹಾಗೂ ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಆಗದಂತೆ ತಡೆಗಟ್ಟಲು ಸಂವಿಧಾನದ ಅಡಿ ಕಾನೂನು ರೂಪಿತವಾಗಿದ್ದು ತಾಲೂಕಿನಲ್ಲಿ ಅಸ್ಪೃಶ್ಯ ಆಚರಣೆಗಳು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಸ್ಮಶಾನದ ಕೊರತೆ ಇರುವ ಕಡೆಗಳಲ್ಲಿ ಜಾಗ ಗುರುತಿಸಿಲು ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಸಭೆಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ರವರು ಕಂದಾಯ ಇಲಾಖೆ ಹಾಗೂ ಪೋಲಿಸ್ ಇಲಾಖೆಗೆ ಸೂಚನೆ ನೀಡಿರುವುದರಿಂದ ಸ್ಮಶಾನಕ್ಕೆ ಜಾಗದ ಕೊರತೆಯಾಗದಂತೆ ತಾಲೂಕು ಆಡಳಿತ ಹಾಗೂ ನಾವು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.ಬಹುಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನೀಲಿ ರಮೇಶ್ ಮಾತನಾಡಿ, ದಲಿತ ಕಾಲೋನಿ ಜನರಿಗೆ ಸಂವಿಧಾನ ಮತ್ತು ಕಾನೂನು ಪಾಲನೆಯ ಬಗ್ಗೆ ಬಗ್ಗೆ ತಿಳಿಸಿ ಕೊಡಲು ಕಾಲೋನಿಗಳಲ್ಲಿ ಜಾಗೃತಿ ಸಭೆಗಳನ್ನು ನಡೆಸಬೇಕೆಂದು ಸಲಹೆ ನೀಡಿದರು.
ಕೆ ಕೆ ಪಿ ಸುದ್ದಿ 02: ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ವಿಕಾಸ್ ನೇತೃತ್ವದಲ್ಲಿ ದಲಿತ ಸಮುದಾಯದ ಕುಂದುಕೊರತೆ ಸಭೆ ನಡೆಸಲಾಯಿತು.